ಬ್ರೇಕಿಂಗ್ ನ್ಯೂಸ್
14-10-24 01:37 pm Mangalore Correspondent ಕರಾವಳಿ
ಮಂಗಳೂರು, ಅ.14: ನಸುಕಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಅಡಿಕೆ ತೋಟಕ್ಕೆ ಪಲ್ಟಿಯಾಗಿ ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿಯ ಬಾಂಬಿಲ ಮಸೀದಿ ತಿರುವಿನಲ್ಲಿ ನಡೆದಿದ್ದು ಕಾರಿನಲ್ಲಿದ್ದ ಮಂಗಳೂರಿನ ಮಹಿಳೆ ಮೃತಪಟ್ಟಿದ್ದಾರೆ.
ಮಂಗಳೂರು ನಗರದ ಕೊಡಿಯಾಲಬೈಲು ನಿವಾಸಿ ಭಾಗೀರಥಿ (58 ) ಮೃತರು. ಕಾರು ಚಲಾಯಿಸುತ್ತಿದ್ದ ಮೂಲತಃ ತುಮಕೂರು ನಿವಾಸಿ ರೂಪೇಶ್ (40) ಗಂಭೀರ ಗಾಯಗೊಂಡಿದ್ದಾರೆ. ರೂಪೇಶ್ ಅವರ ಪತ್ನಿ, ಭಾಗೀರಥಿ ಅವರ ಪುತ್ರಿ ಸುಚಿತ್ರಾ (33) ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ರೂಪೇಶ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರೂಪೇಶ್ ಮೂಲತಃ ತುಮಕೂರು ನಿವಾಸಿಯಾಗಿದ್ದು ಮಂಗಳೂರಿನ ಸುಚಿತ್ರಾ ಅವರನ್ನು ಮದುವೆಯಾಗಿ ಇಲ್ಲಿಯೇ ನೆಲೆಸಿದ್ದರು. ನವರಾತ್ರಿ ಹಿನ್ನೆಲೆಯಲ್ಲಿ ತುಮಕೂರಿಗೆ ಹೋಗಿ ಮರಳುತ್ತಿದ್ದರು ಎನ್ನಲಾಗಿದೆ. ಚಾರ್ಮಾಡಿ- ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದಾಗ ಮುಂಜಾನೆ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡ ಭಾಗೀರಥಿ ಮೃತಪಟ್ಟಿದ್ದಾರೆ. ಭಾಗೀರಥಿಯವರ ಸೋದರ ಗೋಪಾಲ್ ಮಂಗಳೂರಿನಲ್ಲಿ ಪಿಡಬ್ಲ್ಯುಡಿ ಇಂಜಿನಿಯರ್ ಆಗಿದ್ದಾರೆ.
ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಬಾಂಬಿಲ ತಿರುವಿನಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ದು ಹೆದ್ದಾರಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore punjalkatte accident, 58 year old woman dies on spot. Three people were traveling in the car, including Bhagirathi (58), a resident of Kodiyal Bailu, who unfortunately lost her life. The driver, Roopesh (40), suffered severe injuries and is being treated, while his wife, Suchitra (33), sustained minor injuries.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am