ಬ್ರೇಕಿಂಗ್ ನ್ಯೂಸ್
14-10-24 01:37 pm Mangalore Correspondent ಕರಾವಳಿ
ಮಂಗಳೂರು, ಅ.14: ನಸುಕಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಅಡಿಕೆ ತೋಟಕ್ಕೆ ಪಲ್ಟಿಯಾಗಿ ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿಯ ಬಾಂಬಿಲ ಮಸೀದಿ ತಿರುವಿನಲ್ಲಿ ನಡೆದಿದ್ದು ಕಾರಿನಲ್ಲಿದ್ದ ಮಂಗಳೂರಿನ ಮಹಿಳೆ ಮೃತಪಟ್ಟಿದ್ದಾರೆ.
ಮಂಗಳೂರು ನಗರದ ಕೊಡಿಯಾಲಬೈಲು ನಿವಾಸಿ ಭಾಗೀರಥಿ (58 ) ಮೃತರು. ಕಾರು ಚಲಾಯಿಸುತ್ತಿದ್ದ ಮೂಲತಃ ತುಮಕೂರು ನಿವಾಸಿ ರೂಪೇಶ್ (40) ಗಂಭೀರ ಗಾಯಗೊಂಡಿದ್ದಾರೆ. ರೂಪೇಶ್ ಅವರ ಪತ್ನಿ, ಭಾಗೀರಥಿ ಅವರ ಪುತ್ರಿ ಸುಚಿತ್ರಾ (33) ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ರೂಪೇಶ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರೂಪೇಶ್ ಮೂಲತಃ ತುಮಕೂರು ನಿವಾಸಿಯಾಗಿದ್ದು ಮಂಗಳೂರಿನ ಸುಚಿತ್ರಾ ಅವರನ್ನು ಮದುವೆಯಾಗಿ ಇಲ್ಲಿಯೇ ನೆಲೆಸಿದ್ದರು. ನವರಾತ್ರಿ ಹಿನ್ನೆಲೆಯಲ್ಲಿ ತುಮಕೂರಿಗೆ ಹೋಗಿ ಮರಳುತ್ತಿದ್ದರು ಎನ್ನಲಾಗಿದೆ. ಚಾರ್ಮಾಡಿ- ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದಾಗ ಮುಂಜಾನೆ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡ ಭಾಗೀರಥಿ ಮೃತಪಟ್ಟಿದ್ದಾರೆ. ಭಾಗೀರಥಿಯವರ ಸೋದರ ಗೋಪಾಲ್ ಮಂಗಳೂರಿನಲ್ಲಿ ಪಿಡಬ್ಲ್ಯುಡಿ ಇಂಜಿನಿಯರ್ ಆಗಿದ್ದಾರೆ.
ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಬಾಂಬಿಲ ತಿರುವಿನಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ದು ಹೆದ್ದಾರಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore punjalkatte accident, 58 year old woman dies on spot. Three people were traveling in the car, including Bhagirathi (58), a resident of Kodiyal Bailu, who unfortunately lost her life. The driver, Roopesh (40), suffered severe injuries and is being treated, while his wife, Suchitra (33), sustained minor injuries.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm