ಬ್ರೇಕಿಂಗ್ ನ್ಯೂಸ್
14-10-24 01:54 pm Mangalore Correspondent ಕರಾವಳಿ
ಮಂಗಳೂರು, ಅ.14: ಎರಡು ದಿನಗಳ ಹಿಂದೆ ಮಂಗಳೂರಿನಲ್ಲಿ ಖಾಸಗಿ ಬಸ್ ಸಿಬಂದಿ ಪರಸ್ಪರ ಹೊಡೆದಾಟ ನಡೆಸಿದ ವಿಡಿಯೋ ವೈರಲ್ ಆಗಿತ್ತು. ಘಟನೆ ಸಂಬಂಧಿಸಿ ಇದೀಗ ಎರಡೂ ಬಸ್ಸಿನ ಸಿಬಂದಿ ಆಸ್ಪತ್ರೆಗೆ ದಾಖಲಾಗಿ ದೂರು- ಪ್ರತಿದೂರು ನೀಡಿದ್ದು ಕದ್ರಿ ಸಂಚಾರಿ ಠಾಣೆಯಲ್ಲಿ ಕೇಸು ದಾಖಲಾಗಿದೆ. ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ ಎಂದು ಒಂದು ತಂಡ ದೂರಿದ್ದರೆ, ಮತ್ತೊಂದರಲ್ಲಿ ಉಗಿದು ಅವಾಚ್ಯ ನಿಂದನೆ ಮಾಡಿದ್ದಕ್ಕಾಗಿ ಹಲ್ಲೆಯೆಂದು ದೂರಿತ್ತಿದ್ದಾರೆ.
ವಿಟ್ಲ – ಮಂಗಳೂರು ರೂಟಿನಲ್ಲಿ ಓಡಾಡುವ ಸೆಲಿನಾ ಬಸ್ಸಿನ ಸಿಬಂದಿ ಮತ್ತು ಮತ್ತೊಂದು ಖಾಸಗಿ ಬಸ್ ಧರಿತ್ರಿ ಬಸ್ ಸಿಬಂದಿ ಮಂಗಳೂರಿನ ಕಂಕನಾಡಿ ವೃತ್ತದ ಬಳಿ ಬಸ್ಸಿನ ಒಳಗಡೆಯೇ ಹೊಡೆದಾಡಿದ್ದರು. ಅ.10ರಂದು ಘಟನೆ ನಡೆದಿದ್ದು, ಒಂದು ಬಸ್ಸಿನ ಸಿಬಂದಿ ಉಗಿದ ಎಂಬ ಕಾರಣಕ್ಕೆ ಹಲ್ಲೆ ನಡೆಸಲಾಗಿತ್ತು ಎಂದು ಹೇಳಲಾಗಿತ್ತು. ಇದೀಗ ಸೆಲಿನಾ ಬಸ್ಸಿನ ಚಾಲಕ ಸಂದೀಪ್ ನೀಡಿದ ದೂರಿನಲ್ಲಿ ಅ.10ರಂದು ವಿಟ್ಲದಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ತೆರಳಿದ್ದ ಬಸ್ ಮರಳುತ್ತಿದ್ದಾಗ ಕಂಕನಾಡಿ ಸಿಗ್ನಲ್ ಬಳಿ ಧರಿತ್ರಿ ಬಸ್ಸಿನ ಚಾಲಕ ಸುರೇಶ್ ಮತ್ತು ನಿರ್ವಾಹಕ ರಾಕೇಶ್ ಬಸ್ಸನ್ನು ಅಡ್ಡಹಾಕಿದ್ದು, ಬಳಿಕ ತನಗೆ ಮತ್ತು ನಿರ್ವಾಹಕ ಭುವನೇಶ್ವರ್ ಮೇಲೆ ಹಲ್ಲೆ ನಡೆಸಿದ್ದಾರೆಂದು ತಿಳಿಸಿದ್ದಾರೆ. ಚಾಲಕ ಸಂದೀಪ್ ಆಸ್ಪತ್ರೆಗೆ ದಾಖಲಾಗಿದ್ದು, ಬಿಸಿ ರೋಡ್ ಬಳಿ ಬಸ್ಸನ್ನು ಓವರ್ ಟೇಕ್ ಮಾಡಿದ್ದ ಕಾರಣಕ್ಕೆ ಹಲ್ಲೆ ನಡೆಸಲಾಗಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಧರಿತ್ರಿ ಬಸ್ಸಿನ ಚಾಲಕ ಸುರೇಶ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಪ್ರತಿ ದೂರು ನೀಡಿದ್ದಾರೆ. ಸೆಲಿನಾ ಬಸ್ಸಿನ ನಿರ್ವಾಹಕ ಭುವನೇಶ್ವರ್ ಜ್ಯೋತಿ ವೃತ್ತದ ಬಳಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾತನಾಡಿದ್ದಾನೆ, ಉಗಿದು ನಿಂದಿಸಿದ್ದಾನೆ. ಬಳಿಕ ಕಂಕನಾಡಿ ಸಿಗ್ನಲ್ ಬಳಿ ತಮ್ಮ ಬಸ್ಸನ್ನು ಅಡ್ಡಹಾಕಿ ಗಾಡಿ ತೊಳೆಯುವ ಬ್ರಶ್ ನಲ್ಲಿ ಹಲ್ಲೆ ನಡೆಸಿದ್ದಾಗಿ ದೂರಿದ್ದಾರೆ. ಎರಡು ದೂರನ್ನು ಗಮನಿಸಿದರೆ ಕ್ಷುಲ್ಲಕ ವಿಚಾರದಲ್ಲಿ ಬಸ್ ಸಿಬಂದಿ ಪ್ರಯಾಣಿಕರ ಎದುರಲ್ಲೇ ಹೊಡೆದಾಡಿದ್ದು ಕಂಡುಬರುತ್ತದೆ. ವಿಡಿಯೋ ಕೊನೆಯಲ್ಲಿ ಭುವನೇಶ್ವರ್ ಪ್ರಯಾಣಿಕರನ್ನು ಇಳಿಯಲು ಹೇಳಿ ಬಸ್ಸನ್ನು ಪೊಲೀಸ್ ಠಾಣೆಗೆ ಒಯ್ಯುವುದಾಗಿ ಹೇಳುವುದು ದಾಖಲಾಗಿದೆ.
ಬಸ್ ಸಿಬಂದಿಯ ಹೊಡೆದಾಟದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಯಾಣಿಕರ ಎದುರಲ್ಲೇ ಬಸ್ಸನ್ನು ನಿಲ್ಲಿಸಿ ಬೀದಿ ಕಾಳಗ ನಡೆಸಿರುವುದನ್ನು ಖಂಡಿಸಿದ್ದಲ್ಲದೆ ಬಸ್ ಸಿಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ನಿಜಕ್ಕಾದರೆ ಈ ಘಟನೆ ಬಗ್ಗೆ ವಿಡಿಯೋ ಆಧರಿಸಿ ಪೊಲೀಸರೇ ಕೇಸು ದಾಖಲಿಸಿ ಕ್ರಮ ಜರುಗಿಸಬೇಕಿತ್ತು. ಇದೀಗ ಎರಡೂ ಬಸ್ಸಿನ ಸಿಬಂದಿಯೇ ಪೊಲೀಸ್ ದೂರು ನೀಡಿದ್ದು ಪರಸ್ಪರ ಆರೋಪ- ಪ್ರತ್ಯಾರೋಪ ಮಾಡಿಕೊಂಡಿದ್ದಾರೆ.
Mangalore Private bus drivers fight in broad daylight, police take no action even after counter complaint. The reckless behaviour of private bus drivers in Dakshina Kannada and Udupi districts is not a new phenomenon. Hundreds of private buses have long been operating in blatant disregard of transportation rules, with little to no action from the authorities, despite their awareness of the issue.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm