ಬ್ರೇಕಿಂಗ್ ನ್ಯೂಸ್
14-10-24 02:35 pm Mangalore Correspondent ಕರಾವಳಿ
ಉಳ್ಳಾಲ, ಅ.14: ಮನೆಯಂಗಳದ ಬಾವಿಯಲ್ಲಿ ವೃದ್ಧ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕೊಲ್ಯ, ಕುಜುಮಗದ್ದೆಯಲ್ಲಿ ನಡೆದಿದ್ದು ಅಸೌಖ್ಯದಿಂದಾಗಿ ಮನನೊಂದು ವೃದ್ಧೆ ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.
ಕುಜುಮಗದ್ದೆಯಲ್ಲಿ ಹತ್ತು ದಿನಗಳ ಅಂತರದಲ್ಲಿ ಬಾವಿಗೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ವಾರಿಜ (68) ಸಾವನ್ನಪ್ಪಿದ ಮಹಿಳೆ. ವಾರಿಜ ಅವರ ಪತಿ ಸಂಜೀವ ಭಂಡಾರಿ ಅವರು ಎರಡು ವರುಷದ ಹಿಂದೆ ಸಾವನ್ನಪ್ಪಿದ್ದರು. ಅವರ ಏಕೈಕ ಪುತ್ರನಿಗೆ ಕಳೆದ ವರುಷವಷ್ಟೆ ಮದುವೆಯಾಗಿತ್ತು. ನಿನ್ನೆ ಸಂಜೆ ವಾರಿಜ ಅವರು ವಾಕಿಂಗ್ ಮಾಡಿ ಊಟ ಮಾಡಿ ಮಲಗಿದ್ದರಂತೆ. ಇಂದು ಬೆಳಗ್ಗೆ ವಾರಿಜ ಅವರು ಮನೆಯೊಳಗೆ ಕಾಣದಿದ್ದಾಗ ಮನೆ ಮಂದಿ ಹುಡುಕಾಡಿದ್ದು ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮೃತದೇಹ ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಸುತ್ತ ಕಟ್ಟೆ ಇರುವ ಬಾವಿಯಾಗಿದ್ದು ಕಾಲು ಜಾರಿ ಬಿದ್ದಿರುವ ಸಾಧ್ಯತೆ ಕಡಿಮೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಹತ್ತು ದಿನಗಳ ಅಂತರದಲ್ಲಿ ಬಾವಿಗೆ ಬಿದ್ದು ಇಬ್ಬರ ಸಾವು
ಅಕ್ಟೋಬರ್ 5 ರಂದು ಬೆಳಗ್ಗೆ ಕೊಲ್ಯ, ಕುಜುಮಗದ್ದೆಯ ನಿವಾಸಿ ಅವಿವಾಹಿತ ಯುವಕ ಪ್ರಸಾದ್ (44) ಎಂಬವರು ಮನೆಯ ಪಕ್ಕದ ಪಾಳು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಅ.4ರಂದು ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋಗಿದ್ದ ಪ್ರಸಾದ್ ಮತ್ತೆ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಪೈಂಟರ್ ವೃತ್ತಿ ಮಾಡುತ್ತಿದ್ದ ಪ್ರಸಾದ್ ಖಿನ್ನತೆಯಿಂದ ಆತ್ಮಹತ್ಯೆ ನಡೆಸಿರೋದಾಗಿ ಶಂಕಿಸಲಾಗಿತ್ತು. ಹತ್ತು ದಿನಗಳ ಬಳಿಕ ಅದೇ ಪರಿಸರದಲ್ಲಿ ಬಾವಿಗೆ ಬಿದ್ದು ಮತ್ತೋರ್ವ ವೃದ್ಧೆ ಸಾವನ್ನಪ್ಪಿದ್ದಾರೆ.
68 year Old woman body found inside well at ullal in Mangalore. The deceased has been identified as Varija. Varija wasn't keeping well in her health conditions.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm