ಬ್ರೇಕಿಂಗ್ ನ್ಯೂಸ್
16-10-24 03:30 pm Mangalore Correspondent ಕರಾವಳಿ
ಮಂಗಳೂರು, ಅ.16: ದೀಪಾವಳಿ ಸಂದರ್ಭದಲ್ಲಿ ಮನೆಯವರೆಲ್ಲರೂ ಸೇರಿ ತಯಾರಿಸುತ್ತಿದ್ದ ಗೂಡುದೀಪದ ಜಾಗವನ್ನು ಅಂಗಡಿಯಲ್ಲಿ ಸಿಗುವ ಗೂಡು ದೀಪಗಳು ಆವರಿಸಿಕೊಂಡಿವೆ. ಗೂಡುದೀಪ ರಚಿಸುವ ಕಲೆಯನ್ನು ಉಳಿಸುವ ಜೊತೆಗೆ ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 25 ವರ್ಷಗಳ ಹಿಂದೆ 'ನಮ್ಮ ಕುಡ್ಲ' ವಾಹಿನಿ ಗೂಡುದೀಪ ಸ್ಪರ್ಧೆಯನ್ನು ಆಯೋಜನೆ ಮಾಡಲು ಆರಂಭಿಸಿತ್ತು. ಈ ಬಾರಿ 25ನೇ ವರ್ಷದ ಗೂಡುದೀಪದ ಸ್ಪರ್ಧೆ ಅ.30ರಂದು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.
ಸಾಂಪ್ರದಾಯಿಕ, ಆಧುನಿಕ ಮತ್ತು ಪ್ರತಿಕೃತಿ ಎಂಬ ಮೂರು ವಿಭಾಗದಲ್ಲಿ ಗೂಡುದೀಪ ಸ್ಪರ್ಧೆ ನಡೆಸಲಾಗುತ್ತಿದೆ. ಈ ಮೂರು ವಿಭಾಗದಲ್ಲಿ ನಡೆಯುವ ಗೂಡುದೀಪ ಸ್ಪರ್ಧೆಯಲ್ಲಿ ಸ್ಪರ್ಧಿಗಳು ಉತ್ತಮ ರೀತಿಯಲ್ಲಿ ಭಾಗವಹಿಸಿದ್ದಾರೆ. ಈ ಬಾರಿಯೂ ಮೂರೂ ವಿಭಾಗದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಗೂಡುದೀಪ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ಕೆಲವೊಂದು ನಿಯಮಗಳಿದ್ದು, ಅವುಗಳನ್ನು ಪಾಲಿಸಬೇಕಾಗುತ್ತದೆ.
ಗೂಡುದೀಪ ಸ್ಪರ್ಧೆ ನಿಯಮಗಳು
ಸಾಂಪ್ರದಾಯಿಕ ವಿಭಾಗದಲ್ಲಿ ಬಣ್ಣದ ಕಾಗದ, ಗ್ಲಾಸ್ ಪೇಪರ್ ಅಥವಾ ಬಟ್ಟೆಯಿಂದ ಗೂಡುದೀಪ ತಯಾರು ಮಾಡಿರಬೇಕು. ಗೂಡುದೀಪಕ್ಕೆ ಬಾಲ ಇರಬೇಕು ಹಾಗೂ ಅದು ನೇತು ಹಾಕುವಂತಿರಬೇಕು. ಗೂಡುದೀಪದ ಒಳಗಿನ ಬೆಳಕು ಹೊರಗೆ ಕಾಣುವಂತೆ ತಯಾರಿಸಬೇಕು. ಇದರಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಅಥವಾ ಯಾವುದೇ ಆಧುನಿಕ ಪರಿಕರಗಳನ್ನು ಬಳಸುವಂತಿಲ್ಲ. ಬೇಗಡೆಯನ್ನು ಉಪಯೋಗಿಸಲು ಅವಕಾಶ ಇದೆ. ಗೂಡುದೀಪ ಶುದ್ಧವಾಗಿ ಸಾಂಪ್ರದಾಯಿಕವಾಗಿಯೇ ಇರಬೇಕು.
ಆಧುನಿಕ ವಿಭಾಗದಲ್ಲಿ ಗೂಡುದೀಪ ರಚನೆಗೆ ಯಾವುದೇ ಆಧುನಿಕ ಪರಿಕರಗಳನ್ನು ಬಳಸಬಹುದಾಗಿದೆ. ಆದರೆ, ಸಾಂಪ್ರದಾಯಿಕ ಗೂಡುದೀಪದಂತೆ ಇದೂ ಕೂಡ ನೇತು ಹಾಕುವಂತೆ ಇರಬೇಕು. ಗೂಡುದೀಪದಲ್ಲಿ ಗೂಡು ಇರುವುದು ಕಡ್ಡಾಯವಾಗಿದ್ದು, ಪ್ರತಿಕೃತಿಯ ಹೋಲಿಕೆ ಇರಬಾರದು.
ಪ್ರತಿಕೃತಿ ವಿಭಾಗದಲ್ಲಿ ಯಾವುದೇ ಕಲಾತ್ಮಕ ರಚನೆಗೆ ಅವಕಾಶವಿದೆ. ಯಾವುದೇ ಆಧುನಿಕ ಪರಿಕರಗಳನ್ನು ಇದರಲ್ಲಿ ಬಳಕೆ ಮಾಡಬಹುದಾಗಿದೆ. ಆದಷ್ಟು ಹೊಸತನವನ್ನು ಅಳವಡಿಸಿಕೊಂಡು ಪ್ರತಿಕೃತಿಯ ರಚನೆ ಇರಬೇಕು.
Hallowed precincts of Sri Kshetra Gokarnanatha will come alive to ‘gududeepas’ in different hues when the 25th annual ‘Gududeepa Pantha’ organised by Namma Kudla, local Tulu TV news channel is held at Kudroli on October 30th
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm