ಬ್ರೇಕಿಂಗ್ ನ್ಯೂಸ್
17-10-24 04:34 pm Mangalore Correspondent ಕರಾವಳಿ
ಮಂಗಳೂರು, ಅ.17: ವಿಶ್ವಕ್ಕೆ ಮಹಾಕಾವ್ಯ ರಾಮಾಯಣವನ್ನು ಕೊಟ್ಟ ವಾಲ್ಮೀಕಿ ಮಹರ್ಷಿಯವರ ಜಯಂತಿಯನ್ನು ರಾಜ್ಯದಲ್ಲಿ ದುಃಖದಲ್ಲಿ ಆಚರಿಸುವ ಸ್ಥಿತಿ ಬಂದಿದೆ. ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂತಹ ಪರಿಸ್ಥಿತಿ ತಂದಿಟ್ಟಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆಸಿದ ವ್ಯಕ್ತಿಯೇ ಜೈಲಿನಿಂದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ್ದಾರೆ, ಆಮೂಲಕ ಹಗರಣದಲ್ಲಿ ಸಿದ್ದರಾಮಯ್ಯ ಅವರೂ ಭಾಗಿ ಎಂದು ಸಾಬೀತು ಪಡಿಸಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ವಾಲ್ಮೀಕಿ ಮಹರ್ಷಿಯವರ ಬದುಕು, ಆದರ್ಶ ದಾರಿದೀಪ ಆಗಬೇಕಿತ್ತು. ಆದರೆ ರಾಜ್ಯ ಸರ್ಕಾರ ವಾಲ್ಮೀಕಿ ನಿಗಮದಲ್ಲೇ ಹಗರಣ ನಡೆಸಿದ್ದು ಹಿಂದುಳಿದ ಸಮುದಾಯಗಳ ಏಳಿಗೆಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದೆ. ತೆಲಂಗಾಣ ಚುನಾವಣೆಗೆ ಈ ಹಣವನ್ನು ಕಾಂಗ್ರೆಸ್ ಖರ್ಚು ಮಾಡಿದೆ. ಹಗರಣದ A1 ಆರೋಪಿ ಮಾಜಿ ಸಚಿವ ನಾಗೇಂದ್ರ ಬೇಲ್ ಮೇಲೆ ಬಿಡುಗಡೆಯಾಗಿರುವುದು ದುರದೃಷ್ಟಕರ. ಜೈಲಿನಿಂದ ಹೊರಬಂದು ವಿಜಯೋತ್ಸವ ಆಚರಿಸಿದ್ದಾರೆ. ಜೈಲಿನಿಂದ ನೇರವಾಗಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಸನ್ಮಾನಿಸಲಾಗಿದೆ. ಜೈಲಿನಿಂದ ಹೊರಬಂದ ಒಬ್ಬಾತ ಮುಖ್ಯಮಂತ್ರಿ ಅವರನ್ನು ಸನ್ಮಾನಿಸಿರುವುದು ರಾಜ್ಯದ ಜನರನ್ನು ತಲೆತಗ್ಗಿಸುವಂತೆ ಮಾಡಿದೆ.
ವಾಲ್ಮೀಕಿ ನಿಗಮದ ಹಗರಣ ಮುಖ್ಯಮಂತ್ರಿ ಅವರ ನಿರ್ದೇಶನದ ಮೇರೆಗೆ ಆಗಿರೋದು ಎಂಬುದೀಗ ಸಾಬೀತಾಗಿದೆ. 187 ಕೋಟಿ ಹಗರಣ ಅಲ್ಲ, 84 ಕೋಟಿ ಎಂದು ಸದನದಲ್ಲೇ ಮುಖ್ಯಮಂತ್ರಿಯವರು ಒಪ್ಪಿಕೊಂಡಿದ್ದರು. ಹಗರಣದ ಹಿನ್ನೆಲೆಯಲ್ಲಿ ರಾಜಿನಾಮೆ ಪಡೆದ ಸಚಿವರಿಂದಲೇ ಈಗ ಮುಖ್ಯಮಂತ್ರಿ ಸನ್ಮಾನಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಅವರೇ ಈ ಹಗರಣದಲ್ಲಿ ನೇರವಾಗಿ ಭಾಗಿಯಾಗಿರುವುದು ಈಗ ಸಾಬೀತಾಗಿದೆ. ಇಂಥ ಕೆಟ್ಟ ಮುಖ್ಯಮಂತ್ರಿ ಅಧಿಕಾರದಲ್ಲಿ ಮುಂದುವರಿಯಬಾರದು, ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಮತ್ತೆ ಚುನಾವಣೆ ಘೋಷಣೆಯಾಗಿದೆ, ಹಣ ಖರ್ಚು ಮಾಡಲು ಮತ್ತೆ ನಿಗಮಗಳ ಮೇಲೆ ಕಣ್ಣಿಡಲಾಗಿದೆ. ಈಗ ಮುಖ್ಯಮಂತ್ರಿ ಯಾವ ನಿಗಮದ ಮೇಲೆ ಕಣ್ಣಿಟ್ಟಿದ್ದಾರೆ ಗೊತ್ತಿಲ್ಲ. ಚುನಾವಣಾ ಖರ್ಚಿಗೆ ಕಾಂಗ್ರೆಸ್ ಗೆ ಕರ್ನಾಟಕ ಎಟಿಎಂ ಇದ್ದಂತಾಗಿದೆ. ನಿಗಮ, ಮಂಡಳಿಗಳ ಖಾತೆಯಲ್ಲಿರುವ ಹಣವನ್ನೂ ಖಾಲಿ ಮಾಡುತ್ತಿದ್ದಾರೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹರಿಹಾಯ್ದಿದ್ದಾರೆ.
CM Siddaramaiah insulted Maharshi Valmiki by accepting shawl from B Nagendra slammed Mangalore MP Brijesh Chowta.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm