ಬ್ರೇಕಿಂಗ್ ನ್ಯೂಸ್
17-10-24 10:29 pm Mangalore Correspondent ಕರಾವಳಿ
ಉಳ್ಳಾಲ, ಅ.17: ಉಳ್ಳಾಲ ಠಾಣೆಯ ಇನ್ಸ್ ಪೆಕ್ಟರ್ ಕೊಠಡಿಯಲ್ಲಿ ಬಜರಂಗದಳದ ಮುಖಂಡ ಅರ್ಜುನ್ ಮಾಡೂರು ಅವರಿಗೆ ಮುಸ್ಲಿಂ ಯುವಕ ಹಲ್ಲೆಗೈದ ಘಟನೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದ್ದು ಮೇಲ್ನೋಟಕ್ಕೆ ಇನ್ಸ್ ಪೆಕ್ಟರ್ ಬಾಲಕೃಷ್ಣ ಅವರ ಕರ್ತವ್ಯ ಲೋಪವೇ ಕಾರಣವಾಗಿದೆ. ಆದರೆ ಪೊಲೀಸರ ಕರ್ತವ್ಯ ಲೋಪ ಪ್ರಶ್ನಿಸಬೇಕಿದ್ದ ಸ್ಥಳೀಯ ಬಿಜೆಪಿ ನಾಯಕರು ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಮಾತ್ರ ಆಗ್ರಹಿಸಿ ಸುಮ್ಮನಾಗಿದ್ದಾರೆ.
ಬಜರಂಗದಳ ಉಳ್ಳಾಲ ಪ್ರಖಂಡ ಸಂಯೋಜಕ ಅರ್ಜುನ್ ಮಾಡೂರು ಅವರ ಮೇಲೆ ನಿನ್ನೆ ರಾತ್ರಿ ಉಳ್ಳಾಲ ಠಾಣೆಯ ಇನ್ಸ್ ಪೆಕ್ಟರ್ ಕೊಠಡಿಯೊಳಗಡೆಯೇ ಹಲ್ಲೆಯಾಗಿತ್ತು. ಘಟನೆ ಸಂಬಂಧ ಆರೋಪಿ ಕಾಸರಗೋಡು ಜಿಲ್ಲೆಯ ಹೊಸಂಗಡಿ ಕಡಂಬಾರು ನಿವಾಸಿ ಮಹಮ್ಮದ್ ಆಸಿಫ್(33) ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಬುಧವಾರ ರಾತ್ರಿ 9.45ರ ವೇಳೆ ಕುಂಪಲದ ಶರತ್, ಕೇರಳದ ಇಬ್ರಾಹಿಂ ಖಲೀಲ್ ಅವರ ಕಾರುಗಳ ಮಧ್ಯೆ ನಡೆದಿದ್ದ ಸಣ್ಣ ಅಪಘಾತ ಪ್ರಕರಣವು ಉಳ್ಳಾಲ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ರಾತ್ರಿ 11 ಗಂಟೆಗೆ ಶರತ್ ಅವರ ಸ್ನೇಹಿತ ಅರ್ಜುನ್ ಮಾಡೂರು ಅವರು ಉಳ್ಳಾಲ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ಇನ್ಸ್ ಪೆಕ್ಟರ್ ಕೊಠಡಿಯೊಳಗೆ ಕಾರು ಚಾಲಕರಾದ ಶರತ್, ಖಲೀಲ್ ಜತೆ ರಾಜಿ ಮಾತುಕತೆ ನಡೆಸುತ್ತಿದ್ದ ವೇಳೆ ಏಕಾಏಕಿ ಆರೋಪಿ ಆಸಿಫ್, ಅರ್ಜುನ್ ಮಾಡೂರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈಗಳಿಂದ ಹಲ್ಲೆ ನಡೆಸಿದ್ದಾನೆ. ಠಾಣೆ ಒಳಗಡೆಯೇ ಕೃತ್ಯ ನಡೆದಿರುವುದು ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆಯಲ್ಲಿ ಉಳ್ಳಾಲ ಪಿಐ ಬಾಲಕೃಷ್ಣ ಅವರ ಕರ್ತವ್ಯ ಲೋಪ ಸ್ಪಷ್ಟವಾಗಿ ಎದ್ದು ಕಾಣುತ್ತದೆ. ಇತ್ತಂಡಗಳ ಪ್ರಮುಖರನ್ನ ಕರೆದು ಕೂರಿಸಿ ರಾಜಿ ಮಾತುಕತೆ ನಡೆಸುವುದು ಅಧಿಕಾರಿಗಳ ಜಾಣತನ. ಆದರೆ ಬಾಲಕೃಷ್ಣ ಅವರು ಕೇರಳದ ಅಪರಿಚಿತರನ್ನೆಲ್ಲ ತನ್ನ ಕೊಠಡಿಯೊಳಗೆ ಕೂರಿಸಿ ರಾಜಾತಿಥ್ಯ ನೀಡಿದ್ದು, ಪರಿಚಿತರಾದ ಅರ್ಜುನ್ ಮತ್ತು ಸ್ನೇಹಿತರನ್ನ ನಿಲ್ಲಿಸಿಯೇ ಮಾತುಕತೆ ನಡೆಸಿದ್ದಾರಂತೆ. ಇದೇ ವೇಳೆ ಮೊಬೈಲಲ್ಲಿ ಮಾತನಾಡುತ್ತ ಇನ್ಸ್ ಪೆಕ್ಟರ್ ಹೊರ ಹೋಗಿ ಬೇಜವಾಬ್ದಾರಿ ಮೆರೆದಿದ್ದಾರೆ. ಈ ಸಂದರ್ಭ ಬಳಸಿಕೊಂಡ ಆರೋಪಿ ಆಸಿಫ್, ಅರ್ಜುನ್ ಮೇಲೆ ಏರಿ ಹೋಗಿ ಹಲ್ಲೆ ನಡೆಸಿದ್ದಾನೆ.
ಠಾಣೆಯಲ್ಲಿ ಅಪರಿಚಿತರನ್ನು ಕುಳ್ಳಿರಿಸಿ ಮಾತುಕತೆ ನಡೆಸುವಾಗ ಜಾಗ್ರತೆ ಇರಬೇಕು. ಇಲ್ಲದಿದ್ದರೆ ಇಂತಹದ್ದೇ ಪರಿಣಾಮ ಎದುರಿಸಬೇಕಾಗುತ್ತದೆ ಎನ್ನುವ ಜ್ಞಾನ ಪೊಲೀಸರಿಗೆ ಇರಬೇಕು. ಹಲ್ಲೆ ಘಟನೆಯ ಪೂರ್ಣ ಚಿತ್ರಣ ಕೊಠಡಿಯ ಸಿಸಿಟಿವಿಯಲ್ಲಿ ದಾಖಲಾಗಿದ್ದು ಠಾಣೆಗೆ ಭೇಟಿ ನೀಡಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಎಲ್ಲರ ಸಮ್ಮುಖದಲ್ಲಿ ವಿಡಿಯೋ ವೀಕ್ಷಿಸಿದ್ದಾರೆ. ಮೇಲ್ನೋಟಕ್ಕೆ ಠಾಣಾಧಿಕಾರಿಯ ಕರ್ತವ್ಯ ಲೋಪವೇ ಘಟನೆಗೆ ಕಾರಣವಾಗಿದ್ದರೂ, ಹಿರಿಯ ಪೊಲೀಸ್ ಅಧಿಕಾರಿಗಳು ಮೌನ ವಹಿಸಿದ್ದಾರೆ.
ನಿನ್ನೆ ರಾತ್ರಿ ಠಾಣೆಗೆ ಡಿಸಿಪಿ ಸಿದ್ಧಾರ್ಥ್ ಗೋಯಲ್ ಭೇಟಿ ನೀಡಿದ್ದರೂ ಒಳಗಿದ್ದ ಸ್ಥಳೀಯ ಬಿಜೆಪಿ ನಾಯಕರು ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆಯೇ ಹೊರತು ಉಳ್ಳಾಲ ಠಾಣೆ ಇನ್ಸ್ ಪೆಕ್ಟರ್ ಕರ್ತವ್ಯ ಲೋಪದ ಬಗ್ಗೆ ಪ್ರಶ್ನೆಯೆತ್ತಿಲ್ಲ. ಈ ಹಿಂದೆ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ತೊಕ್ಕೊಟ್ಟಿನಲ್ಲಿ ನಡೆದಿದ್ದ ರಸ್ತೆ ತಡೆ ಪ್ರತಿಭಟನೆಯಲ್ಲಿ ಬಿಜೆಪಿ ಕ್ಷೇತ್ರ ಯುವಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆಯ ಕುತ್ತಿಗೆ ಪಟ್ಟಿಯನ್ನ ಹಿಡಿದೆಳೆದು ಉದ್ಧಟತನ ಮೆರೆದಿದ್ದ ಪಿಐ ಬಾಲಕೃಷ್ಣ ವಿರುದ್ಧ ಬಿಜೆಪಿ ಮುಖಂಡರು ಸೊಲ್ಲೆತ್ತಿರಲಿಲ್ಲ. ಇದೀಗ ಸಂಘಟನೆ ಮುಖಂಡನ ಮೇಲೆ ಮತ್ತೆ ಹಲ್ಲೆ ನಡೆದಿರುವುದು ಕಾರ್ಯಕರ್ತರ ನಡುವೆ ಅಸಮಾಧಾನಕ್ಕೆ ಕಾರಣವಾಗಿದೆ.
ಸ್ಥಳೀಯ ಬಿಜೆಪಿ ನಾಯಕರ ಹೊಂದಾಣಿಕೆ ರಾಜಕಾರಣದ ವಿರುದ್ಧ ಠಾಣೆಯ ಮುಂಭಾಗದಲ್ಲಿ ಜಮಾಯಿಸಿದ್ದ ಹಿಂದೂ ಸಂಘಟನೆ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ಹಿನ್ನೆಲೆ ಅರ್ಜುನ್ ಮೇಲಿನ ಹಲ್ಲೆಯನ್ನ ಖಂಡಿಸಲು ನಡುರಾತ್ರಿಯಲ್ಲಿ ದೂರದ ಪುತ್ತೂರಿನಿಂದ ಓಡಿ ಬಂದಿದ್ದ ಅರುಣ್ ಪುತ್ತಿಲ ಅವರಿಗೆ ಹಿಂದೂ ಸಂಘಟನೆ ಕಾರ್ಯಕರ್ತರು ಬಹುಪರಾಕ್ ಕೂಗಿದ್ದಾರೆ.
ಆಸ್ಪತ್ರೆಗೆ ದಾಖಲಾಗಿರುವ ಅರ್ಜುನ್ ಮಾಡೂರು ಅವರನ್ನ ಭೇಟಿಯಾಗಿ ಕ್ಷೇಮ ವಿಚಾರಿಸಿದ ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಹೆಚ್.ಕೆ. ಪುರುಷೋತ್ತಮ್ ಅವರು ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಅವರಿಗೆ ಕರೆ ಮಾಡಿ ಘಟನೆಯ ಕುರಿತಂತೆ ತರಾಟೆಗೆತ್ತಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇತ್ತ ಘಟನೆ ಸಂಬಂಧಿಸಿ ಟ್ರಾಫಿಕ್ ಪೊಲೀಸರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಇತ್ತಂಡಗಳ ದೂರು ಆಧರಿಸಿ ಎರಡು ಎಫ್ಐಆರ್ ದಾಖಲಿಸಿದ್ದಾರೆ. ಹಲ್ಲೆ ಸಂಬಂಧಿಸಿ ಉಳ್ಳಾಲ ಠಾಣೆಯಲ್ಲಿ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
Mangalore Assult on Hindu leader at police station in ullal, Police inspector Balakrishna shows negligence. Ullal police have arrested a native of Kasargod district in connection with the alleged assault on a Sangh Parivar leader who had been to the police station on Wednesday night for talks after a fracas between the drivers of two cars following a mishap at Thokkottu flyover.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm