ಬ್ರೇಕಿಂಗ್ ನ್ಯೂಸ್
18-10-24 02:12 pm Mangalore Correspondent ಕರಾವಳಿ
ಉಳ್ಳಾಲ, ಅ.18: ತಿಂಗಳ ಹಿಂದಷ್ಟೆ ಖರೀದಿಸಿದ್ದ ಹೊಸ ಟಿವಿಎಸ್ ಎಂಟಾರ್ಕ್ ಸ್ಕೂಟರ್ ಒಂದು ತನ್ನಷ್ಟಕ್ಕೆ ಬೆಂಕಿ ಹತ್ತಿ ಹೊತ್ತಿ ಉರಿದ ಘಟನೆ ಕುಂಪಲ ವಿದ್ಯಾನಗರದಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.
ಕುಂಪಲ ವಿದ್ಯಾನಗರ ನಿವಾಸಿ ಐಟಿಐ ಕಲಿಯುತ್ತಿರುವ ರಾಕೇಶ್ ಎಂಬ ವಿದ್ಯಾರ್ಥಿ ತಿಂಗಳ ಹಿಂದೆ ಖರೀದಿಸಿದ್ದ ಟಿವಿಎಸ್ ಕಂಪನಿಯ ಎಂಟಾರ್ಕ್ ಸ್ಕೂಟರ್ ಹೊತ್ತಿ ಉರಿದಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ. ಮನೆಯಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್ ನಿನ್ನೆ ಮಧ್ಯರಾತ್ರಿ 12.30ರ ವೇಳೆಗೆ ತನ್ನಷ್ಟಕ್ಕೆ ಬೆಂಕಿ ಹತ್ತಿದ್ದು ಧಗಧಗನೆ ಉರಿದು ಸುಟ್ಟು ಕರಕಲಾಗಿದೆ. ಘಟನೆಯಿಂದ ಮನೆಯ ಗೋಡೆ, ಕಿಟಕಿಗಳ ಗಾಜುಗಳು, ಒಣಗಲು ಹಾಕಲಾದ ಬಟ್ಟೆಗಳು ಸುಟ್ಟು ಕರಕಲಾಗಿ ಅಪಾರ ನಷ್ಟ ಉಂಟಾಗಿದೆ. ಮನೆಗೂ ಬೆಂಕಿ ವ್ಯಾಪಿಸಲಿದ್ದು ನಿದ್ದೆಯಿಂದ ಎಚ್ಚೆತ್ತ ಮನೆ ಮಂದಿ ಬೆಂಕಿಯನ್ನ ನಂದಿಸಿದ್ದಾರೆ. ಮನೆಯೊಳಗೆ ರಾಕೇಶ್ ಸೇರಿದಂತೆ ಅವರ ತಂದೆ, ತಾಯಿ, ಅಕ್ಕ ಮಲಗಿದ್ದು ಸ್ಕೂಟರ್ ಗೆ ಬೆಂಕಿ ತಗುಲಿದ ವೇಳೆ ನಿದ್ದೆಯಿಂದ ಎಚ್ಚೆತ್ತು ಬೆಂಕಿಯನ್ನ ನಂದಿಸಿದ ಪರಿಣಾಮ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.



ಬಡ ಕುಟುಂಬದ ರಾಕೇಶ್ ಅವರು ಓದಿನೊಂದಿಗೆ ಪಾರ್ಟ್ ಟೈಮ್ ಕೆಲಸ ಮಾಡಿ ತಿಂಗಳ ಹಿಂದಷ್ಟೆ ತೊಕ್ಕೊಟ್ಟಿನ "ಸೋನಾ ಟಿವಿಎಸ್ " ಶೋರೂಂನಲ್ಲಿ ಸ್ಕೂಟರ್ ಖರೀದಿಸಿದ್ದರು. ಎರಡು ದಿನಗಳ ಹಿಂದಷ್ಟೆ ಸ್ಕೂಟರಿನ ಮೊದಲ ಇಎಮ್ ಐ ಕಂತನ್ನು ಕಟ್ಟಿದ್ದರು. ಸ್ಕೂಟರ್ ಬ್ಯಾಟರಿ ಸಿಡಿದು ಬೆಂಕಿ ಹತ್ತಿರುವುದಾಗಿ ಶಂಕಿಸಲಾಗಿದೆ. ರಾಕೇಶ್ ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
New Tvs scooty cathes fire at kumapla in mangalore. Rakesh had brought tvs ntorq recently but midnight it has caught sudden fire. Even his house furniture and doors have been damaged.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm