ಬ್ರೇಕಿಂಗ್ ನ್ಯೂಸ್
18-10-24 02:12 pm Mangalore Correspondent ಕರಾವಳಿ
ಉಳ್ಳಾಲ, ಅ.18: ತಿಂಗಳ ಹಿಂದಷ್ಟೆ ಖರೀದಿಸಿದ್ದ ಹೊಸ ಟಿವಿಎಸ್ ಎಂಟಾರ್ಕ್ ಸ್ಕೂಟರ್ ಒಂದು ತನ್ನಷ್ಟಕ್ಕೆ ಬೆಂಕಿ ಹತ್ತಿ ಹೊತ್ತಿ ಉರಿದ ಘಟನೆ ಕುಂಪಲ ವಿದ್ಯಾನಗರದಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.
ಕುಂಪಲ ವಿದ್ಯಾನಗರ ನಿವಾಸಿ ಐಟಿಐ ಕಲಿಯುತ್ತಿರುವ ರಾಕೇಶ್ ಎಂಬ ವಿದ್ಯಾರ್ಥಿ ತಿಂಗಳ ಹಿಂದೆ ಖರೀದಿಸಿದ್ದ ಟಿವಿಎಸ್ ಕಂಪನಿಯ ಎಂಟಾರ್ಕ್ ಸ್ಕೂಟರ್ ಹೊತ್ತಿ ಉರಿದಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ. ಮನೆಯಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್ ನಿನ್ನೆ ಮಧ್ಯರಾತ್ರಿ 12.30ರ ವೇಳೆಗೆ ತನ್ನಷ್ಟಕ್ಕೆ ಬೆಂಕಿ ಹತ್ತಿದ್ದು ಧಗಧಗನೆ ಉರಿದು ಸುಟ್ಟು ಕರಕಲಾಗಿದೆ. ಘಟನೆಯಿಂದ ಮನೆಯ ಗೋಡೆ, ಕಿಟಕಿಗಳ ಗಾಜುಗಳು, ಒಣಗಲು ಹಾಕಲಾದ ಬಟ್ಟೆಗಳು ಸುಟ್ಟು ಕರಕಲಾಗಿ ಅಪಾರ ನಷ್ಟ ಉಂಟಾಗಿದೆ. ಮನೆಗೂ ಬೆಂಕಿ ವ್ಯಾಪಿಸಲಿದ್ದು ನಿದ್ದೆಯಿಂದ ಎಚ್ಚೆತ್ತ ಮನೆ ಮಂದಿ ಬೆಂಕಿಯನ್ನ ನಂದಿಸಿದ್ದಾರೆ. ಮನೆಯೊಳಗೆ ರಾಕೇಶ್ ಸೇರಿದಂತೆ ಅವರ ತಂದೆ, ತಾಯಿ, ಅಕ್ಕ ಮಲಗಿದ್ದು ಸ್ಕೂಟರ್ ಗೆ ಬೆಂಕಿ ತಗುಲಿದ ವೇಳೆ ನಿದ್ದೆಯಿಂದ ಎಚ್ಚೆತ್ತು ಬೆಂಕಿಯನ್ನ ನಂದಿಸಿದ ಪರಿಣಾಮ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.



ಬಡ ಕುಟುಂಬದ ರಾಕೇಶ್ ಅವರು ಓದಿನೊಂದಿಗೆ ಪಾರ್ಟ್ ಟೈಮ್ ಕೆಲಸ ಮಾಡಿ ತಿಂಗಳ ಹಿಂದಷ್ಟೆ ತೊಕ್ಕೊಟ್ಟಿನ "ಸೋನಾ ಟಿವಿಎಸ್ " ಶೋರೂಂನಲ್ಲಿ ಸ್ಕೂಟರ್ ಖರೀದಿಸಿದ್ದರು. ಎರಡು ದಿನಗಳ ಹಿಂದಷ್ಟೆ ಸ್ಕೂಟರಿನ ಮೊದಲ ಇಎಮ್ ಐ ಕಂತನ್ನು ಕಟ್ಟಿದ್ದರು. ಸ್ಕೂಟರ್ ಬ್ಯಾಟರಿ ಸಿಡಿದು ಬೆಂಕಿ ಹತ್ತಿರುವುದಾಗಿ ಶಂಕಿಸಲಾಗಿದೆ. ರಾಕೇಶ್ ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
New Tvs scooty cathes fire at kumapla in mangalore. Rakesh had brought tvs ntorq recently but midnight it has caught sudden fire. Even his house furniture and doors have been damaged.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am