ಬ್ರೇಕಿಂಗ್ ನ್ಯೂಸ್
18-10-24 05:00 pm Mangalore Correspondent ಕರಾವಳಿ
ಪುತ್ತೂರು, ಅ.18: ಬಿಲ್ಲವ ಸಮಾಜದ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿ ವಿವಾದ ಮೈಮೇಲೆ ಎಳಕೊಂಡಿರುವ ಪಂಜ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಇದರ ಬೆನ್ನಲ್ಲೇ ಬೆಳ್ಳಾರೆ ಪೊಲೀಸರು ಆರೋಪಿತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಪುತ್ತೂರಿನಲ್ಲಿ ಡಿವೈಎಸ್ಪಿ ಕಚೇರಿ ಮುಂಭಾಗದಲ್ಲಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಆರೋಪಿತ ಸಂಜೀವ ಪೂಜಾರಿಯನ್ನು ಸಂಜೆಯೊಳಗೆ ಬಂಧಿಸಬೇಕು ಎಂದು ಆಗ್ರಹ ಮಾಡಿದ್ದಾರೆ. ಸ್ಥಳಕ್ಕೆ ಬಂದ ಡಿವೈಎಸ್ಪಿ ಅರುಣ್ ಅವರು ಬಂಧನಕ್ಕೆ ಒಂದು ದಿನದ ಸಮಯ ಕೊಡಿ ಎಂದು ಕೇಳಿದಾಗ, ಕಾರ್ಯಕರ್ತರು ಅದಕ್ಕೆ ಒಪ್ಪಲಿಲ್ಲ. ಇವತ್ತು ಸಂಜೆಯೊಳಗೆ ಬಂಧನ ಮಾಡಬೇಕು ಎಂದು ಆಗ್ರಹ ಮಾಡಿದ್ದಾರೆ.


ಇದರ ಬೆನ್ನಲ್ಲೇ ಆರೋಪಿ ಸಂಜೀವ ಪೂಜಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ. ಹಿಂದು ಸಂಘಟನೆ ಕಾರ್ಯಕರ್ತ ಸುರೇಶ್ ಕಾಸರಗೋಡು ಎಂಬವರು ಫೋನ್ ಮಾಡಿದ್ದಾಗ, ಬಿಲ್ಲವ ಸಮಾಜದ ಒಂದು ಲಕ್ಷ ಯುವತಿಯರು ಸೂಳೆಯರಿದ್ದಾರೆ, ಇದಕ್ಕೆ ತನ್ನಲ್ಲಿ ಹತ್ತು ಸಾವಿರದಷ್ಟು ದಾಖಲೆ ಇದೆ ಎಂದು ಹೇಳಿದ್ದರು. ಈ ರೀತಿ ಮಾತನಾಡಿದ್ದ ಆಡಿಯೋ ವೈರಲ್ ಆಗುತ್ತಿದ್ದಂತೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಬೆಳ್ಳಾರೆ ಮತ್ತು ಮೂಡುಬಿದ್ರೆ ಠಾಣೆಗೆ ದೂರು ನೀಡಿದ್ದರು.
ನಾಲಗೆ ಕತ್ತರಿಸುತ್ತೇವೆ ಎಂದ ಮುಖಂಡ
ಇಂದು ಬೆಳಗ್ಗೆ ಪುತ್ತೂರಿನ ಡಿವೈಎಸ್ಪಿ ಕಚೇರಿ ಎದುರಲ್ಲಿ ಹಿಂಜಾವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಹಿಂಜಾವೇ ಮುಖಂಡ ಸಮಿತ್ ರಾಜ್ ದರೆಗುಡ್ಡೆ, ಸಂಜೀವ ಪೂಜಾರಿ ತನ್ನ ಬಿಲ್ಲವ ಸಮಾಜದ ಬಗ್ಗೆ ಈ ರೀತಿ ಅವಹೇಳನ ಮಾಡಿದ್ದರೂ ಒಂದೇ ಒಂದು ಬಿಲ್ಲವ ಸಂಘಗಳು ಚಕಾರ ಎತ್ತಿಲ್ಲ. ಪೊಲೀಸರು ಸರಳ ಸೆಕ್ಷನ್ ಹಾಕಿ ಕೇಸು ಹಾಕಿದ್ದಾರೆ. ಕಠಿಣ ಕ್ರಮ ಜರುಗಿಸದಿದ್ದರೆ, ಮಹಿಳೆಯರನ್ನೇ ಒಟ್ಟು ಸೇರಿಸಿ ಆತನ ನಾಲಗೆ ಕತ್ತರಿಸುತ್ತೇವೆ, ಈತ ಅನ್ಯಧರ್ಮದವರ ಬಗ್ಗೆ ಇಂಥ ಮಾತು ಹೇಳುತ್ತಿದ್ದರೆ ಈಗಲೇ ನಾಲಗೆ, ಕೈ ಕಟ್ ಮಾಡುತ್ತಿದ್ದರು. ಕೂಡಲೇ ಬಂಧನ ಮಾಡದಿದ್ದರೆ ನಾವೇ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
Puttur Complaint filed against forest officer for derogatory remarks, officer taken to police custody after protest by Hindu Jagrana vedike. Previously, the same officer faced allegations for making derogatory posts about Bhajans, leading to a complaint being filed with the department.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm