ಬ್ರೇಕಿಂಗ್ ನ್ಯೂಸ್
11-12-20 05:42 pm Mangalore Correspondent ಕರಾವಳಿ
ಮಂಗಳೂರು, ಡಿ.11 : ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳ ನಾಯಕ ವೆನ್ಝ್ ಅಬ್ದುಲ್ಲಾ ಅಝೀಝ್ ಕೊಲೆಯತ್ನ ಪ್ರಕರಣ ನಡೆದು ತಿಂಗಳಾಗುತ್ತಾ ಬಂದರೂ, ಆರೋಪಿಗಳ ಬಂಧನ ಆಗದಿರುವುದನ್ನು ಖಂಡಿಸಿ ಕೈಕಂಬದ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ಎಸ್ವೈಎಸ್ ರಾಜ್ಯ ನಾಯಕ ಅಶ್ರಫ್ ಕಿನಾರ, ವೆನ್ಝ್ ಅಬ್ದುಲ್ ಅಝೀಝ್ ಅವರ ಮೇಲೆ ನ.15ರಂದು ರಾತ್ರಿ ಕೊಲೆಗೆ ಯತ್ನಿಸಲಾಗಿತ್ತು. ಬಳಿಕ ಅವರು ಚಿಕಿತ್ಸೆಗೆ ದಾಖಲಾಗಿದ್ದ ಮಂಗಳೂರಿನ ಆಸ್ಪತ್ರೆ ಬಳಿ ಅಳಿಯ ನೌಶಾದ್ ಮೇಲೂ ಹಲ್ಲೆ ನಡೆದಿದೆ. ಶಂಕಿತರ ಬಗ್ಗೆ ಮಾಹಿತಿ ನೀಡಿದ್ದರೂ ಪೊಲೀಸರು ಯಾವುದೋ ಒತ್ತಡಕ್ಕೆ ಮಣಿದು ಆರೋಪಿಗಳನ್ನು ಬಂಧಿಸದೆ ಮೀನಮೇಷ ಮಾಡುತ್ತಿದ್ದಾರೆ. ಇದು ಖಂಡನೀಯ. ಪೊಲೀಸರು ಗಂಭೀರ ಪರಿಗಣಿಸಿ, ತಕ್ಷಣ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಎಸ್ವೈಎಸ್ ರಾಜ್ಯ ನಾಯಕರಾದ ಜಿಎಂ ಕಾಮಿಲ್ ಸಖಾಫಿ, ಯಾಕೂಬ್ ಸಅದಿ ನಾವೂರು, ಮುನೀರ್ ಸಖಾಫಿ, ಅಲಿ ತುರ್ಕಳಿಕೆ, ಇಬ್ರಾಹಿಂ ಸಖಾಫಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನೂರಾರು ಮಂದಿ ಪ್ರತಿಭಟನೆಯಲ್ಲಿ ಸೇರಿದ್ದರು.
As the police have failed in arresting even a single person in Murderous attack on Businessman Venza Abdul Azeez the SYS staged protest near the clock tower in Mangalore demanding for quick arrest of the culprits.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am