ಬ್ರೇಕಿಂಗ್ ನ್ಯೂಸ್
08-08-20 11:43 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 8: ಕರಾವಳಿ ಮತ್ತು ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿದಿದೆ. ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯಲಾರಂಭಿಸಿದೆ. ಬಂಟ್ವಾಳ ತಾಲೂಕಿನ ವಿವಿಧೆಡೆ ನೆರೆ ಕಾಣಿಸಿಕೊಂಡಿದ್ದು ಹಲವಾರು ಮನೆಗಳು ಮತ್ತು ಕೃಷಿ ಭೂಮಿ ಮುಳುಗಡೆಯಾಗಿದೆ.
ಕುಮಾರಧಾರಾ ಮತ್ತು ನೇತ್ರಾವತಿ ನದಿಗಳ ಸಂಗಮ ಸ್ಥಾನ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯ ನೀರಿನ ಮಟ್ಟ 30 ಮೀಟರ್ ಆಗಿದ್ದು, ಇದೀಗ ಅದಕ್ಕಿಂತಲೂ ಹೆಚ್ಚಿನ ಎತ್ತರದಲ್ಲಿ ನೀರು ಹರಿಯುತ್ತಿದೆ. ನೀರಿನ ಹೆಚ್ಚಳದಿಂದಾಗಿ ಉಪ್ಪಿನಂಗಡಿ, ನಟ್ಟಿಬೈಲು, ನೆಲ್ಯಾಡಿ ಮೊದಲಾದ ಕಡೆ ಕೃಷಿಭೂಮಿಗೆ ನೀರು ನುಗ್ಗಿದೆ. ಬಂಟ್ವಾಳದಲ್ಲೂ ನೇತ್ರಾವತಿ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಈ ಭಾಗದಲ್ಲಿ ಅಪಾಯದ ಮಟ್ಟ 8.5 ಮೀಟರ್ ಆಗಿದ್ದು, ಇದೀಗ ನದಿ 9 ಮೀಟರ್ ಗೂ ಹೆಚ್ಚಿನ ಎತ್ತರದಲ್ಲಿ ಹರಿಯುತ್ತಿದೆ. ಇದರಿಂದಾಗಿ ಪಾಣೆಮಂಗಳೂರು, ಗೂಡಿನ ಬಳಿ ಮೊದಲಾದ ಕಡೆ ನೀರು ವಸತಿ ಪ್ರದೇಶಗಳಿಗೆ ನುಗ್ಗಿದ್ದು ಕೃತಕ ನೆರೆ ಉಂಟಾಗಿದೆ.

ಕುಮಾರಧಾರಾ ನದಿಯಲ್ಲಿ ನೀರಿನ ಹರಿವಿನಲ್ಲಿ ಕೊಂಚ ಇಳಿಮುಖವಾಗಿದ್ದರೂ, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸತತ ಆರನೇ ದಿನವೂ ಮುಳುಗಡೆಯಾಗಿದೆ. ಚಾರ್ಮಾಡಿ ಘಾಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಹೆಚ್ಚಾಗಿ ಸುರಿಯುತ್ತಿರುವ ಹಿನ್ನಲೆಯಲ್ಲಿ ಚಾರ್ಮಾಡಿಯ ಮೃತ್ಯುಂಜಯ ಹೊಳೆಯಲ್ಲೂ ಪ್ರವಾಹದ ರೀತಿ ನೀರು ಹರಿಯಲಾರಂಭಿಸಿದೆ. ಕೊಳಂಬೆ, ಚಾರ್ಮಾಡಿ ಪ್ರದೇಶಗಳಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿವೆ. ಕೊಳಂಬೆ ಪ್ರದೇಶದಲ್ಲಿ ಸುಮಾರು 15 ಕ್ಕೂ ಮಿಕ್ಕಿದ ಮನೆಗಳು ಜಲಾವೃತಗೊಂಡಿದೆ. ಕಳೆದ ಬಾರಿ ರೌದ್ರ ನರ್ತನ ತೋರಿದ್ಧ ಮೃತ್ಯುಂಜಯ ಹೊಳೆ ಹರಿವು ಅಲ್ಲಿನ ಜನರಲ್ಲಿ ಆತಂಕ ಹುಟ್ಟಿಸಿದೆ.
Video:
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm