ಬ್ರೇಕಿಂಗ್ ನ್ಯೂಸ್
20-10-24 09:55 pm Mangalore Correspondent ಕರಾವಳಿ
ಮಂಗಳೂರು, ಅ.20: ನಂತೂರು ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಡಿಕ್ಕಿಯಾಗಿ ಮೃತಪಟ್ಟ ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ (27) ಅವರು ನಗರದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಸ್ಪೀಚ್ ಅಂಡ್ ಹಿಯರಿಂಗ್ ವಿಭಾಗದಲ್ಲಿ ವೈದ್ಯೆಯಾಗಿದ್ದು, ಇತ್ತೀಚೆಗಷ್ಟೇ ಮದುವೆ ನಿಶ್ಚಯವಾಗಿತ್ತು ಎನ್ನುವ ಮಾಹಿತಿ ತಿಳಿದುಬಂದಿದೆ.
ಕ್ರಿಸ್ತಿ ಕ್ರಾಸ್ತಾಗೆ ದೇರೆಬೈಲಿನ ಯುವಕನ ಜೊತೆಗೆ ಮದುವೆ ನಿಶ್ಚಯವಾಗಿತ್ತು. ನ.23ರಂದು ಮಂಗಳೂರಿನ ಚರ್ಚ್ ಹಾಲ್ ಒಂದರಲ್ಲಿ ಮದುವೆಗೆ ದಿನ ನಿಗದಿಪಡಿಸಿ ಆಮಂತ್ರಣ ಪತ್ರಿಕೆಯನ್ನೂ ಹಂಚಲಾಗಿತ್ತು. ಈ ನಡುವೆ, ಕ್ರಿಶ್ಚಿಯನ್ನರ ಚರ್ಚ್ ಪದ್ಧತಿಯಂತೆ ಮದುವೆಗೂ ಮುನ್ನ ಯುವಕ- ಯುವತಿಗೆ ಆಯಾ ಚರ್ಚ್ ಗಳಲ್ಲಿ ಮದುವೆ ಕುರಿತಾಗಿ ತರಬೇತಿ ಇರುತ್ತದೆ. ಇದಕ್ಕಾಗಿ ಕ್ರಿಸ್ತಿ ಕ್ರಾಸ್ತಾ ಅವರು ಭಾನುವಾರ ಸಂಜೆ ನಂತೂರಿನ ಶಾಂತಿ ಕಿರಣ ಸಭಾಂಗಣದಲ್ಲಿ ತರಬೇತಿಗೆ ಹಾಜರಾಗಿದ್ದರು.
ಚರ್ಚ್ ಪದ್ಧತಿಯಂತೆ ಮೂರು ಭಾನುವಾರಗಳ ಮದುವೆ ಘೋಷಣೆಯೂ ಇಂದಿಗೆ ಮುಗಿದಿತ್ತು. ಹೀಗಾಗಿ ಮದುವೆ ಚರ್ಚ್ ಪ್ರಕಾರ ಅಧಿಕೃತವಾಗಿತ್ತು. ಇದಲ್ಲದೆ, ಮದುವೆ ಕುರಿತ ತರಬೇತಿಯನ್ನೂ ಮುಗಿಸಿ ಸಂಜೆ ವೇಳೆಗೆ ಶಾಂತಿ ಕಿರಣ ಸಭಾಂಗಣದಿಂದ ಮನೆ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದರು. ಈ ವೇಳೆ, ನಂತೂರು ಕಡೆಯಿಂದ ಬಂದಿದ್ದ ಕಂಟೇನರ್ ಲಾರಿ ನೇರವಾಗಿ ಡಿಕ್ಕಿಯಾಗಿದ್ದು ಹಿಂಭಾಗದ ಚಕ್ರಕ್ಕೆ ಸಿಲುಕಿದ್ದ ಯುವತಿ ಸ್ಥಳದಲ್ಲೇ ದುರಂತ ಸಾವನ್ನಪ್ಪಿದ್ದಾರೆ. ಲಾರಿ ಚಾಲಕನ ಧಾವಂತ, ನಿರ್ಲಕ್ಷ್ಯದ ಚಾಲನೆ ಬಾಳಿ ಬದುಕಬೇಕಿದ್ದ ಯುವತಿಯ ಜೀವ ಕಿತ್ತುಕೊಂಡಿದೆ. ಇತ್ತ ಮದುವೆಗೆ ಸಿದ್ಧತೆ ನಡೆಸುತ್ತಿದ್ದ ಮನೆಯವರಿಗೆ ಏಕೈಕ ಪುತ್ರಿಯ ಸಾವು ಶೋಕ ಸಾಗರದಲ್ಲಿ ಮುಳುಗಿಸಿದೆ. ಮದುವೆ ಸಡಗರದಲ್ಲಿದ್ದ ಮನೆಯಲ್ಲಿ ಸ್ಮಶಾನ ಮೌನ ಆವರಿಸಿದೆ.
Nanthoor accident, Christy Crasta dies of road accident month before marriage in Mangalore. Christy's wedding was scheduled for November 23. She was a teacher a speech and hearing teacher at Fr Mullers college at Kankandy. The funeral rites of Christy Crasta will be held on Monday October 21 at St Dominic Church, Ashoknagar.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm