ಬ್ರೇಕಿಂಗ್ ನ್ಯೂಸ್
20-10-24 09:55 pm Mangalore Correspondent ಕರಾವಳಿ
ಮಂಗಳೂರು, ಅ.20: ನಂತೂರು ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಡಿಕ್ಕಿಯಾಗಿ ಮೃತಪಟ್ಟ ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ (27) ಅವರು ನಗರದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಸ್ಪೀಚ್ ಅಂಡ್ ಹಿಯರಿಂಗ್ ವಿಭಾಗದಲ್ಲಿ ವೈದ್ಯೆಯಾಗಿದ್ದು, ಇತ್ತೀಚೆಗಷ್ಟೇ ಮದುವೆ ನಿಶ್ಚಯವಾಗಿತ್ತು ಎನ್ನುವ ಮಾಹಿತಿ ತಿಳಿದುಬಂದಿದೆ.
ಕ್ರಿಸ್ತಿ ಕ್ರಾಸ್ತಾಗೆ ದೇರೆಬೈಲಿನ ಯುವಕನ ಜೊತೆಗೆ ಮದುವೆ ನಿಶ್ಚಯವಾಗಿತ್ತು. ನ.23ರಂದು ಮಂಗಳೂರಿನ ಚರ್ಚ್ ಹಾಲ್ ಒಂದರಲ್ಲಿ ಮದುವೆಗೆ ದಿನ ನಿಗದಿಪಡಿಸಿ ಆಮಂತ್ರಣ ಪತ್ರಿಕೆಯನ್ನೂ ಹಂಚಲಾಗಿತ್ತು. ಈ ನಡುವೆ, ಕ್ರಿಶ್ಚಿಯನ್ನರ ಚರ್ಚ್ ಪದ್ಧತಿಯಂತೆ ಮದುವೆಗೂ ಮುನ್ನ ಯುವಕ- ಯುವತಿಗೆ ಆಯಾ ಚರ್ಚ್ ಗಳಲ್ಲಿ ಮದುವೆ ಕುರಿತಾಗಿ ತರಬೇತಿ ಇರುತ್ತದೆ. ಇದಕ್ಕಾಗಿ ಕ್ರಿಸ್ತಿ ಕ್ರಾಸ್ತಾ ಅವರು ಭಾನುವಾರ ಸಂಜೆ ನಂತೂರಿನ ಶಾಂತಿ ಕಿರಣ ಸಭಾಂಗಣದಲ್ಲಿ ತರಬೇತಿಗೆ ಹಾಜರಾಗಿದ್ದರು.


ಚರ್ಚ್ ಪದ್ಧತಿಯಂತೆ ಮೂರು ಭಾನುವಾರಗಳ ಮದುವೆ ಘೋಷಣೆಯೂ ಇಂದಿಗೆ ಮುಗಿದಿತ್ತು. ಹೀಗಾಗಿ ಮದುವೆ ಚರ್ಚ್ ಪ್ರಕಾರ ಅಧಿಕೃತವಾಗಿತ್ತು. ಇದಲ್ಲದೆ, ಮದುವೆ ಕುರಿತ ತರಬೇತಿಯನ್ನೂ ಮುಗಿಸಿ ಸಂಜೆ ವೇಳೆಗೆ ಶಾಂತಿ ಕಿರಣ ಸಭಾಂಗಣದಿಂದ ಮನೆ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದರು. ಈ ವೇಳೆ, ನಂತೂರು ಕಡೆಯಿಂದ ಬಂದಿದ್ದ ಕಂಟೇನರ್ ಲಾರಿ ನೇರವಾಗಿ ಡಿಕ್ಕಿಯಾಗಿದ್ದು ಹಿಂಭಾಗದ ಚಕ್ರಕ್ಕೆ ಸಿಲುಕಿದ್ದ ಯುವತಿ ಸ್ಥಳದಲ್ಲೇ ದುರಂತ ಸಾವನ್ನಪ್ಪಿದ್ದಾರೆ. ಲಾರಿ ಚಾಲಕನ ಧಾವಂತ, ನಿರ್ಲಕ್ಷ್ಯದ ಚಾಲನೆ ಬಾಳಿ ಬದುಕಬೇಕಿದ್ದ ಯುವತಿಯ ಜೀವ ಕಿತ್ತುಕೊಂಡಿದೆ. ಇತ್ತ ಮದುವೆಗೆ ಸಿದ್ಧತೆ ನಡೆಸುತ್ತಿದ್ದ ಮನೆಯವರಿಗೆ ಏಕೈಕ ಪುತ್ರಿಯ ಸಾವು ಶೋಕ ಸಾಗರದಲ್ಲಿ ಮುಳುಗಿಸಿದೆ. ಮದುವೆ ಸಡಗರದಲ್ಲಿದ್ದ ಮನೆಯಲ್ಲಿ ಸ್ಮಶಾನ ಮೌನ ಆವರಿಸಿದೆ.
Nanthoor accident, Christy Crasta dies of road accident month before marriage in Mangalore. Christy's wedding was scheduled for November 23. She was a teacher a speech and hearing teacher at Fr Mullers college at Kankandy. The funeral rites of Christy Crasta will be held on Monday October 21 at St Dominic Church, Ashoknagar.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm