ಬ್ರೇಕಿಂಗ್ ನ್ಯೂಸ್
21-10-24 08:38 pm Mangalore Correspondent ಕರಾವಳಿ
ಮಂಗಳೂರು, ಅ.21: ಕೊಬ್ಬರಿ, ತೆಂಗಿನ ಕಾಯಿಗೆ ಈ ಬಾರಿ ಉತ್ತಮ ದರ ಸಿಗುವ ನಿರೀಕ್ಷೆ ಇದೆ. ದೀಪಾವಳಿ ನಂತರ ಇನ್ನೂ ಬೆಲೆ ಹೆಚ್ಚಲಿದ್ದು ತೆಂಗಿನ ಕಾಯಿ ಕೇಜಿಗೆ 60 ರಿಂದ 70 ರೂಪಾಯಿಗೆ ಏರಲಿದೆ. ಬೆಳೆಗಾರರು ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚು ಬೆಲೆ ಪಡೆಯಲಿದ್ದಾರೆ ಎಂದು ದಕ್ಷಿಣ ಕನ್ನಡ ತೆಂಗು ಉತ್ಪಾದಕ ಮಾರಾಟ ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಎಸ್.ಕೆ ತಿಳಿಸಿದ್ದಾರೆ.
ಈ ಬಾರಿ ಮಳೆ ಹೆಚ್ಚಿದ್ದರಿಂದ ತೆಂಗು ಕೃಷಿ ಇಳುವರಿಗೆ ದೊಡ್ಡ ಪೆಟ್ಟು ಬಿದ್ದಿದೆ. ಹೀಗಾಗಿ ಬೆಳೆಯೂ ಕಡಿಮೆಯಾಗಿದ್ದು ಇದರ ಪರಿಣಾಮ ಖಚಿತವಾಗಿ ಬೆಲೆ ಹೆಚ್ಚಳಕ್ಕೆ ಕಾರಣವಾಗಲಿದೆ. ಈಗಾಗಲೇ ಎಳನೀರಿಗೆ 60 ರೂ.ನಷ್ಟು ದರ ಏರಿದ್ದು ಬೆಳೆಗಾರರಿಂದ 40-50 ರೂ.ಗೆ ಖರೀದಿಯಾಗುತ್ತಿದೆ. ಇದರಿಂದಾಗಿ ಎಳನೀರನ್ನು ಕೂಡ ಹೆಚ್ಚಾಗಿ ರೈತರು ಮಾರಾಟ ಮಾಡುತ್ತಿದ್ದಾರೆ. ಅಧಿಕ ಪೋಷಕಾಂಶ ಇರುವ ಎಳನೀರಿಗೆ ದರ ಏರಿಕೆಯಾಗುತ್ತಿರುವುದು ಮತ್ತು ಎಳನೀರು ಮಾರಾಟಕ್ಕೆ ರೈತರು ಒಲವು ತೋರುತ್ತಿರುವುದು ಮಾರುಕಟ್ಟೆ ದೃಷ್ಟಿಯಿಂದ ಉತ್ತಮ ಲಕ್ಷಣ. ಇದು ತೆಂಗು ಕೃಷಿಯಲ್ಲಿ ಆಗಿರುವ ಉತ್ತಮ ಬೆಳವಣಿಗೆಯೂ ಹೌದು. ತೆಂಗು ಕೂಡ ಪರ್ಯಾಯ ಆಹಾರ ಬೆಳೆಯಾಗುತ್ತಿದ್ದು ಇದೆಲ್ಲದರ ಪರಿಣಾಮ ಕೃಷಿಕರ ಪಾಲಿಗೆ ಲಾಭದಾಯಕ ಆಗಲಿದೆ. ಇದರಿಂದ ತೆಂಗು ಮತ್ತು ಕೊಬ್ಬರಿ ಕೇಜಿಗೆ ಬೆಲೆ ಹೆಚ್ಚುವುದು ಖಚಿತ.
ದೀಪಾವಳಿ ನಂತರ ತೆಂಗಿನಕಾಯಿ ಕೆಜಿಗೆ 60ರಿಂದ 70 ರೂ.ನಷ್ಟು ಆಗುವ ಸಾಧ್ಯತೆಯಿದೆ. ಈಗಲೇ ಸಗಟು ಮಾರುಕಟ್ಟೆಯಲ್ಲಿ 55-60 ರು. ತೆಂಗಿನ ಕಾಯಿ ದರ ಇದೆ. ತೆಂಗು ಉತ್ಪಾದಕ ಸಂಸ್ಥೆಯಿಂದ ಬೆಳೆಗಾರರಿಂದ 40-45 ರೂ.ಗೆ ತೆಂಗಿನ ಕಾಯಿ ಖರೀದಿ ಮಾಡಲಾಗುತ್ತಿದೆ. ಈ ದರ ಖಚಿತವಾಗಿಯೂ ದೀಪಾವಳಿ ಬಳಿಕ ಹೆಚ್ಚಲಿದೆ. ಹೀಗಾಗಿ ತೆಂಗು ಬೆಳೆಗಾರರು ದುಡುಕದೆ ಉತ್ತಮ ಇಳುವರಿ ಬರುವ ವರೆಗೆ ತಾಳ್ಮೆ ವಹಿಸಬೇಕು. ತೆಂಗು ದರ ಏರಿಕೆಯಾದರೆ ಕೃಷಿಕರ ದೃಷ್ಠಿಯಿಂದ ಉತ್ತಮ ಬೆಳವಣಿಗೆ ಎಂದು ಕುಸುಮಾಧರ ಅವರು ಪ್ರಕಟಣೆಯಲ್ಲಿ ರೈತರಿಗೆ ಸಲಹೆ ಮಾಡಿದ್ದಾರೆ.
Coconut price to increase from 60 to 70 rupees per kg says Coconut Producers Association President Kusumadhar in Mangalore.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm