ಬ್ರೇಕಿಂಗ್ ನ್ಯೂಸ್
21-10-24 08:38 pm Mangalore Correspondent ಕರಾವಳಿ
ಮಂಗಳೂರು, ಅ.21: ಕೊಬ್ಬರಿ, ತೆಂಗಿನ ಕಾಯಿಗೆ ಈ ಬಾರಿ ಉತ್ತಮ ದರ ಸಿಗುವ ನಿರೀಕ್ಷೆ ಇದೆ. ದೀಪಾವಳಿ ನಂತರ ಇನ್ನೂ ಬೆಲೆ ಹೆಚ್ಚಲಿದ್ದು ತೆಂಗಿನ ಕಾಯಿ ಕೇಜಿಗೆ 60 ರಿಂದ 70 ರೂಪಾಯಿಗೆ ಏರಲಿದೆ. ಬೆಳೆಗಾರರು ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚು ಬೆಲೆ ಪಡೆಯಲಿದ್ದಾರೆ ಎಂದು ದಕ್ಷಿಣ ಕನ್ನಡ ತೆಂಗು ಉತ್ಪಾದಕ ಮಾರಾಟ ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಎಸ್.ಕೆ ತಿಳಿಸಿದ್ದಾರೆ.
ಈ ಬಾರಿ ಮಳೆ ಹೆಚ್ಚಿದ್ದರಿಂದ ತೆಂಗು ಕೃಷಿ ಇಳುವರಿಗೆ ದೊಡ್ಡ ಪೆಟ್ಟು ಬಿದ್ದಿದೆ. ಹೀಗಾಗಿ ಬೆಳೆಯೂ ಕಡಿಮೆಯಾಗಿದ್ದು ಇದರ ಪರಿಣಾಮ ಖಚಿತವಾಗಿ ಬೆಲೆ ಹೆಚ್ಚಳಕ್ಕೆ ಕಾರಣವಾಗಲಿದೆ. ಈಗಾಗಲೇ ಎಳನೀರಿಗೆ 60 ರೂ.ನಷ್ಟು ದರ ಏರಿದ್ದು ಬೆಳೆಗಾರರಿಂದ 40-50 ರೂ.ಗೆ ಖರೀದಿಯಾಗುತ್ತಿದೆ. ಇದರಿಂದಾಗಿ ಎಳನೀರನ್ನು ಕೂಡ ಹೆಚ್ಚಾಗಿ ರೈತರು ಮಾರಾಟ ಮಾಡುತ್ತಿದ್ದಾರೆ. ಅಧಿಕ ಪೋಷಕಾಂಶ ಇರುವ ಎಳನೀರಿಗೆ ದರ ಏರಿಕೆಯಾಗುತ್ತಿರುವುದು ಮತ್ತು ಎಳನೀರು ಮಾರಾಟಕ್ಕೆ ರೈತರು ಒಲವು ತೋರುತ್ತಿರುವುದು ಮಾರುಕಟ್ಟೆ ದೃಷ್ಟಿಯಿಂದ ಉತ್ತಮ ಲಕ್ಷಣ. ಇದು ತೆಂಗು ಕೃಷಿಯಲ್ಲಿ ಆಗಿರುವ ಉತ್ತಮ ಬೆಳವಣಿಗೆಯೂ ಹೌದು. ತೆಂಗು ಕೂಡ ಪರ್ಯಾಯ ಆಹಾರ ಬೆಳೆಯಾಗುತ್ತಿದ್ದು ಇದೆಲ್ಲದರ ಪರಿಣಾಮ ಕೃಷಿಕರ ಪಾಲಿಗೆ ಲಾಭದಾಯಕ ಆಗಲಿದೆ. ಇದರಿಂದ ತೆಂಗು ಮತ್ತು ಕೊಬ್ಬರಿ ಕೇಜಿಗೆ ಬೆಲೆ ಹೆಚ್ಚುವುದು ಖಚಿತ.
ದೀಪಾವಳಿ ನಂತರ ತೆಂಗಿನಕಾಯಿ ಕೆಜಿಗೆ 60ರಿಂದ 70 ರೂ.ನಷ್ಟು ಆಗುವ ಸಾಧ್ಯತೆಯಿದೆ. ಈಗಲೇ ಸಗಟು ಮಾರುಕಟ್ಟೆಯಲ್ಲಿ 55-60 ರು. ತೆಂಗಿನ ಕಾಯಿ ದರ ಇದೆ. ತೆಂಗು ಉತ್ಪಾದಕ ಸಂಸ್ಥೆಯಿಂದ ಬೆಳೆಗಾರರಿಂದ 40-45 ರೂ.ಗೆ ತೆಂಗಿನ ಕಾಯಿ ಖರೀದಿ ಮಾಡಲಾಗುತ್ತಿದೆ. ಈ ದರ ಖಚಿತವಾಗಿಯೂ ದೀಪಾವಳಿ ಬಳಿಕ ಹೆಚ್ಚಲಿದೆ. ಹೀಗಾಗಿ ತೆಂಗು ಬೆಳೆಗಾರರು ದುಡುಕದೆ ಉತ್ತಮ ಇಳುವರಿ ಬರುವ ವರೆಗೆ ತಾಳ್ಮೆ ವಹಿಸಬೇಕು. ತೆಂಗು ದರ ಏರಿಕೆಯಾದರೆ ಕೃಷಿಕರ ದೃಷ್ಠಿಯಿಂದ ಉತ್ತಮ ಬೆಳವಣಿಗೆ ಎಂದು ಕುಸುಮಾಧರ ಅವರು ಪ್ರಕಟಣೆಯಲ್ಲಿ ರೈತರಿಗೆ ಸಲಹೆ ಮಾಡಿದ್ದಾರೆ.
Coconut price to increase from 60 to 70 rupees per kg says Coconut Producers Association President Kusumadhar in Mangalore.
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm