ಬ್ರೇಕಿಂಗ್ ನ್ಯೂಸ್
21-10-24 08:38 pm Mangalore Correspondent ಕರಾವಳಿ
ಮಂಗಳೂರು, ಅ.21: ಕೊಬ್ಬರಿ, ತೆಂಗಿನ ಕಾಯಿಗೆ ಈ ಬಾರಿ ಉತ್ತಮ ದರ ಸಿಗುವ ನಿರೀಕ್ಷೆ ಇದೆ. ದೀಪಾವಳಿ ನಂತರ ಇನ್ನೂ ಬೆಲೆ ಹೆಚ್ಚಲಿದ್ದು ತೆಂಗಿನ ಕಾಯಿ ಕೇಜಿಗೆ 60 ರಿಂದ 70 ರೂಪಾಯಿಗೆ ಏರಲಿದೆ. ಬೆಳೆಗಾರರು ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚು ಬೆಲೆ ಪಡೆಯಲಿದ್ದಾರೆ ಎಂದು ದಕ್ಷಿಣ ಕನ್ನಡ ತೆಂಗು ಉತ್ಪಾದಕ ಮಾರಾಟ ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಎಸ್.ಕೆ ತಿಳಿಸಿದ್ದಾರೆ.
ಈ ಬಾರಿ ಮಳೆ ಹೆಚ್ಚಿದ್ದರಿಂದ ತೆಂಗು ಕೃಷಿ ಇಳುವರಿಗೆ ದೊಡ್ಡ ಪೆಟ್ಟು ಬಿದ್ದಿದೆ. ಹೀಗಾಗಿ ಬೆಳೆಯೂ ಕಡಿಮೆಯಾಗಿದ್ದು ಇದರ ಪರಿಣಾಮ ಖಚಿತವಾಗಿ ಬೆಲೆ ಹೆಚ್ಚಳಕ್ಕೆ ಕಾರಣವಾಗಲಿದೆ. ಈಗಾಗಲೇ ಎಳನೀರಿಗೆ 60 ರೂ.ನಷ್ಟು ದರ ಏರಿದ್ದು ಬೆಳೆಗಾರರಿಂದ 40-50 ರೂ.ಗೆ ಖರೀದಿಯಾಗುತ್ತಿದೆ. ಇದರಿಂದಾಗಿ ಎಳನೀರನ್ನು ಕೂಡ ಹೆಚ್ಚಾಗಿ ರೈತರು ಮಾರಾಟ ಮಾಡುತ್ತಿದ್ದಾರೆ. ಅಧಿಕ ಪೋಷಕಾಂಶ ಇರುವ ಎಳನೀರಿಗೆ ದರ ಏರಿಕೆಯಾಗುತ್ತಿರುವುದು ಮತ್ತು ಎಳನೀರು ಮಾರಾಟಕ್ಕೆ ರೈತರು ಒಲವು ತೋರುತ್ತಿರುವುದು ಮಾರುಕಟ್ಟೆ ದೃಷ್ಟಿಯಿಂದ ಉತ್ತಮ ಲಕ್ಷಣ. ಇದು ತೆಂಗು ಕೃಷಿಯಲ್ಲಿ ಆಗಿರುವ ಉತ್ತಮ ಬೆಳವಣಿಗೆಯೂ ಹೌದು. ತೆಂಗು ಕೂಡ ಪರ್ಯಾಯ ಆಹಾರ ಬೆಳೆಯಾಗುತ್ತಿದ್ದು ಇದೆಲ್ಲದರ ಪರಿಣಾಮ ಕೃಷಿಕರ ಪಾಲಿಗೆ ಲಾಭದಾಯಕ ಆಗಲಿದೆ. ಇದರಿಂದ ತೆಂಗು ಮತ್ತು ಕೊಬ್ಬರಿ ಕೇಜಿಗೆ ಬೆಲೆ ಹೆಚ್ಚುವುದು ಖಚಿತ.
ದೀಪಾವಳಿ ನಂತರ ತೆಂಗಿನಕಾಯಿ ಕೆಜಿಗೆ 60ರಿಂದ 70 ರೂ.ನಷ್ಟು ಆಗುವ ಸಾಧ್ಯತೆಯಿದೆ. ಈಗಲೇ ಸಗಟು ಮಾರುಕಟ್ಟೆಯಲ್ಲಿ 55-60 ರು. ತೆಂಗಿನ ಕಾಯಿ ದರ ಇದೆ. ತೆಂಗು ಉತ್ಪಾದಕ ಸಂಸ್ಥೆಯಿಂದ ಬೆಳೆಗಾರರಿಂದ 40-45 ರೂ.ಗೆ ತೆಂಗಿನ ಕಾಯಿ ಖರೀದಿ ಮಾಡಲಾಗುತ್ತಿದೆ. ಈ ದರ ಖಚಿತವಾಗಿಯೂ ದೀಪಾವಳಿ ಬಳಿಕ ಹೆಚ್ಚಲಿದೆ. ಹೀಗಾಗಿ ತೆಂಗು ಬೆಳೆಗಾರರು ದುಡುಕದೆ ಉತ್ತಮ ಇಳುವರಿ ಬರುವ ವರೆಗೆ ತಾಳ್ಮೆ ವಹಿಸಬೇಕು. ತೆಂಗು ದರ ಏರಿಕೆಯಾದರೆ ಕೃಷಿಕರ ದೃಷ್ಠಿಯಿಂದ ಉತ್ತಮ ಬೆಳವಣಿಗೆ ಎಂದು ಕುಸುಮಾಧರ ಅವರು ಪ್ರಕಟಣೆಯಲ್ಲಿ ರೈತರಿಗೆ ಸಲಹೆ ಮಾಡಿದ್ದಾರೆ.
Coconut price to increase from 60 to 70 rupees per kg says Coconut Producers Association President Kusumadhar in Mangalore.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am