ಬ್ರೇಕಿಂಗ್ ನ್ಯೂಸ್
22-10-24 09:44 pm Mangalore Correspondent ಕರಾವಳಿ
ಮಂಗಳೂರು, ಅ.22 : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವಿದ್ಯಾರ್ಥಿ ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ 'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಓದುವ ಅಭಿಯಾನಕ್ಕೆ ಚಾಲನೆ ನೀಡುವ ಹಾಗೂ ಪ್ರಥಮ ಕಾರ್ಯಕ್ರಮದ ಉದ್ಘಾಟನೆಯು ಅ.25ರಂದು ಬೆಳಿಗ್ಗೆ 10 ಗಂಟೆಗೆ ಉರ್ವಾಸ್ಟೋರ್ ನಲ್ಲಿರುವ ತುಳು ಅಕಾಡೆಮಿಯ ತುಳು ಭವನದ ಗ್ರಂಥಾಲಯದಲ್ಲಿ ನಡೆಯಲಿದೆ.
ಓದುವ ಅಭಿಯಾನಕ್ಕೆ ಹಿರಿಯ ತುಳು ವಿದ್ವಾಂಸ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಶಿವರಾಮ ಶೆಟ್ಟಿ ಅವರು ಚಾಲನೆ ನೀಡಿ ದಿಕ್ಸೂಚಿ ಸಂದೇಶ ನೀಡುವರು. 'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ಅಭಿಯಾನದ ಮೊದಲ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ 25 ವಿದ್ಯಾರ್ಥಿಗಳು ಭಾಗವಹಿಸುವರು.
'ಬಲೆ ತುಳು ಓದುಗ' ಕಾರ್ಯಕ್ರಮದ ಬೆಳಗ್ಗಿನ ಉದ್ಘಾಟನೆಯ ಬಳಿಕ ವಿದ್ಯಾರ್ಥಿಗಳು ತಮ್ಮಿಷ್ಟದ ತುಳು ಪುಸ್ತಕವೊಂದನ್ನು ಆಯ್ದುಕೊಂಡು ಗ್ರಂಥಾಲಯದಲ್ಲಿ ಓದುವ ಹಾಗೂ ಚರ್ಚಿಸುವ ಚಟುವಟಿಕೆಯಲ್ಲಿ ಭಾಗಿಯಾಗುವರು. ಸಂಜೆ ಸಮಾರೋಪದ ವೇಳೆಯಲ್ಲಿ ಪ್ರತಿ ವಿದ್ಯಾರ್ಥಿಗಳು ತಾವು ಓದಿದ ಕೃತಿಯ ಬಗ್ಗೆ ದಿಕ್ಸೂಚಿ ಸಂದೇಶ ನೀಡಿದ ವಿದ್ವಾಂಸರ ಮುಂದೆ ಎರಡು ಮೂರು ನಿಮಿಷಗಳ ಅಭಿಪ್ರಾಯವನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ತಿಳಿಸಿದ್ದಾರೆ.
ಅಕಾಡೆಮಿಯ ಗ್ರಂಥಾಲಯದಲ್ಲಿ ತುಳುವಿಗೆ ಸಂಬಂಧಿಸಿದ ತುಳು ಭಾಷೆಯ ಸುಮಾರು 2500 ಕೃತಿಗಳಿವೆ, ಅದೇ ರೀತಿಯಲ್ಲಿ ತುಳುವಿಗೆ ಸಂಬಂಧಿಸಿದ ಕನ್ನಡ ಭಾಷೆಯಲ್ಲಿ ಪ್ರಕಟವಾಗಿರುವ ಸುಮಾರು 2000 ಕೃತಿಗಳು ಲಭ್ಯ ಇದೆ. ತುಳು ಸಾಹಿತ್ಯ, ತುಳು ಭಾಷೆಯ ಚರಿತ್ರೆ, ತುಳು ಸಂಸ್ಕೃತಿ, ತುಳು ಜ್ಞಾನ ಭಂಡಾರದ ಅಗಾಧತೆಯ ಅರಿವನ್ನು ವಿದ್ಯಾರ್ಥಿ ಯುವಜನರಿಗೆ ಮೂಡಿಸಬೇಕೆನ್ನುವ ಹಿನ್ನೆಲೆಯಲ್ಲಿ "ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ" ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಂಘ ಸಂಸ್ಥೆಗಳು ಕೂಡ ಮುಂಚಿತವಾಗಿ ತಿಳಿಸಿ ಈ ಅಭಿಯಾನದಲ್ಲಿ ಭಾಗಿಯಾಗಬಹುದಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ತಿಳಿಸಿದ್ದಾರೆ.
Karnataka Tulu Sahitya Academy has launched a special campaign called 'Academid Onji Dina : Bale Tulu Oduga' to inculcate the taste of reading Tulu literature among the students.
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm