ಬ್ರೇಕಿಂಗ್ ನ್ಯೂಸ್
22-10-24 09:44 pm Mangalore Correspondent ಕರಾವಳಿ
ಮಂಗಳೂರು, ಅ.22 : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವಿದ್ಯಾರ್ಥಿ ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ 'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಓದುವ ಅಭಿಯಾನಕ್ಕೆ ಚಾಲನೆ ನೀಡುವ ಹಾಗೂ ಪ್ರಥಮ ಕಾರ್ಯಕ್ರಮದ ಉದ್ಘಾಟನೆಯು ಅ.25ರಂದು ಬೆಳಿಗ್ಗೆ 10 ಗಂಟೆಗೆ ಉರ್ವಾಸ್ಟೋರ್ ನಲ್ಲಿರುವ ತುಳು ಅಕಾಡೆಮಿಯ ತುಳು ಭವನದ ಗ್ರಂಥಾಲಯದಲ್ಲಿ ನಡೆಯಲಿದೆ.
ಓದುವ ಅಭಿಯಾನಕ್ಕೆ ಹಿರಿಯ ತುಳು ವಿದ್ವಾಂಸ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಶಿವರಾಮ ಶೆಟ್ಟಿ ಅವರು ಚಾಲನೆ ನೀಡಿ ದಿಕ್ಸೂಚಿ ಸಂದೇಶ ನೀಡುವರು. 'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ಅಭಿಯಾನದ ಮೊದಲ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ 25 ವಿದ್ಯಾರ್ಥಿಗಳು ಭಾಗವಹಿಸುವರು.
'ಬಲೆ ತುಳು ಓದುಗ' ಕಾರ್ಯಕ್ರಮದ ಬೆಳಗ್ಗಿನ ಉದ್ಘಾಟನೆಯ ಬಳಿಕ ವಿದ್ಯಾರ್ಥಿಗಳು ತಮ್ಮಿಷ್ಟದ ತುಳು ಪುಸ್ತಕವೊಂದನ್ನು ಆಯ್ದುಕೊಂಡು ಗ್ರಂಥಾಲಯದಲ್ಲಿ ಓದುವ ಹಾಗೂ ಚರ್ಚಿಸುವ ಚಟುವಟಿಕೆಯಲ್ಲಿ ಭಾಗಿಯಾಗುವರು. ಸಂಜೆ ಸಮಾರೋಪದ ವೇಳೆಯಲ್ಲಿ ಪ್ರತಿ ವಿದ್ಯಾರ್ಥಿಗಳು ತಾವು ಓದಿದ ಕೃತಿಯ ಬಗ್ಗೆ ದಿಕ್ಸೂಚಿ ಸಂದೇಶ ನೀಡಿದ ವಿದ್ವಾಂಸರ ಮುಂದೆ ಎರಡು ಮೂರು ನಿಮಿಷಗಳ ಅಭಿಪ್ರಾಯವನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ತಿಳಿಸಿದ್ದಾರೆ.
ಅಕಾಡೆಮಿಯ ಗ್ರಂಥಾಲಯದಲ್ಲಿ ತುಳುವಿಗೆ ಸಂಬಂಧಿಸಿದ ತುಳು ಭಾಷೆಯ ಸುಮಾರು 2500 ಕೃತಿಗಳಿವೆ, ಅದೇ ರೀತಿಯಲ್ಲಿ ತುಳುವಿಗೆ ಸಂಬಂಧಿಸಿದ ಕನ್ನಡ ಭಾಷೆಯಲ್ಲಿ ಪ್ರಕಟವಾಗಿರುವ ಸುಮಾರು 2000 ಕೃತಿಗಳು ಲಭ್ಯ ಇದೆ. ತುಳು ಸಾಹಿತ್ಯ, ತುಳು ಭಾಷೆಯ ಚರಿತ್ರೆ, ತುಳು ಸಂಸ್ಕೃತಿ, ತುಳು ಜ್ಞಾನ ಭಂಡಾರದ ಅಗಾಧತೆಯ ಅರಿವನ್ನು ವಿದ್ಯಾರ್ಥಿ ಯುವಜನರಿಗೆ ಮೂಡಿಸಬೇಕೆನ್ನುವ ಹಿನ್ನೆಲೆಯಲ್ಲಿ "ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ" ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಂಘ ಸಂಸ್ಥೆಗಳು ಕೂಡ ಮುಂಚಿತವಾಗಿ ತಿಳಿಸಿ ಈ ಅಭಿಯಾನದಲ್ಲಿ ಭಾಗಿಯಾಗಬಹುದಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ತಿಳಿಸಿದ್ದಾರೆ.
Karnataka Tulu Sahitya Academy has launched a special campaign called 'Academid Onji Dina : Bale Tulu Oduga' to inculcate the taste of reading Tulu literature among the students.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm