ಬ್ರೇಕಿಂಗ್ ನ್ಯೂಸ್
24-10-24 01:13 pm Mangalore Correspondent ಕರಾವಳಿ
ಉಳ್ಳಾಲ, ಅ.24: ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 11 ರ ಹರೆಯದ ವಿದ್ಯಾರ್ಥಿನಿಯೋರ್ವಳು ದಾರುಣ ಮೃತಪಟ್ಟ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಬಡಕಬೈಲು ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಮೃತ ವಿದ್ಯಾರ್ಥಿನಿ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಸರಕಾರಿ ಶಾಲೆಗೆ ಮಕ್ಕಳನ್ನು ಕರೆತರುತ್ತಿದ್ದ ಆಟೋ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ, ಅಜಾಗರೂಕತೆಯಿಂದ ಬಂದ ಪಿಕಪ್ ವಾಹನವು ಢಿಕ್ಕಿ ಹೊಡೆದಿದೆ. ಪರಿಣಾಮ ಆಯಿಷಾ ಗಂಭೀರ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾಳೆ. ರಿಕ್ಷಾದಲ್ಲಿದ್ದ ಇತರೆ ನಾಲ್ವರು ವಿದ್ಯಾರ್ಥಿಗಳಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಘಟನೆಯಿಂದ ರಿಕ್ಷಾ ಚಾಲಕನೂ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿದ್ಯಾರ್ಥಿನಿ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ದೇರಳಕಟ್ಟೆ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರಜೆ ಸಾರಲಾಗಿದೆ.
Mangalore 11 year old girl dies of accident after van hits school auto at Belma in ullal. The deceased has been identified as Ayesha Vayiba.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm