ಬ್ರೇಕಿಂಗ್ ನ್ಯೂಸ್
25-10-24 01:26 pm Mangalore Correspondent ಕರಾವಳಿ
ಮಂಗಳೂರು, ಅ.25: ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ ಎಂದು ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣದಲ್ಲಿ ಸಂತ್ರಸ್ತ ಯುವತಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಕ್ಕೂ ಮುನ್ನ ಮುಸ್ಲಿಂ ಯುವಕನಿಂದ ಅತ್ಯಾಚಾರಕ್ಕೀಡಾಗುವ ಬದಲು ನಾನೇ ಸಾಯುತ್ತೇನೆಂದು ಆಕೆ ಡೆತ್ ನೋಟ್ ಬರೆದಿಟ್ಟಿದ್ದಾಳೆ.
ಸುರತ್ಕಲ್ ಇಡ್ಯಾ ಬಳಿಯ ಯುವತಿಯ ಫೇಸ್ಬುಕ್ ಹ್ಯಾಕ್ ಮಾಡಿ, ಅಶ್ಲೀಲ ಸಂದೇಶ ಕಳುಹಿಸಿದ್ದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಫೇಸ್ಬುಕ್ ಹ್ಯಾಕ್ ಮಾಡಿದ್ದಲ್ಲದೆ, ಆಕೆಯ ಸೋದರನಿಗೆ ಮುಸ್ಲಿಂ ಯುವಕನ ಹೆಸರಿನಲ್ಲಿ ಮೆಸೆಂಜರ್ ಮೂಲಕ ಬೆದರಿಕೆ ಸಂದೇಶ ಕಳಿಸಲಾಗಿತ್ತು. ನಿನ್ನ ಸೋದರಿಯನ್ನು ನನ್ನ ಜೊತೆಗೆ ಕಳಿಸು, ನನ್ನೊಂದಿಗೆ ಸಹಕರಿಸಲು ಹೇಳು. ಇಲ್ಲಾಂದ್ರೆ ನಿನ್ನನ್ನು 24 ತುಂಡು ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ.
ಈ ಬಗ್ಗೆ ಪೊಲೀಸರು ಇಡ್ಯಾ ಪರಿಸರದ ಹಲವು ಯುವಕರನ್ನು ವಿಚಾರಣೆ ನಡೆಸಿದ್ದು ಮೊಬೈಲ್ ಪರಿಶೀಲನೆ ನಡೆಸಿದ್ದರು. ನೂರ್ಜಹಾನ್ ಎಂಬ ಯುವಕನನ್ನು ಠಾಣೆಗೆ ಕರೆದು ಮೊಬೈಲ್ ಪರಿಶೀಲನೆ ನಡೆಸಿ ಸರಿಯಾದ ಸಾಕ್ಷ್ಯ ಸಿಗದ ಕಾರಣ ಹಿಂದಕ್ಕೆ ಕಳುಹಿಸಿದ್ದರು. ಆದರೆ ಆನಂತರವೂ ಇದೇ ರೀತಿಯ ಬೆದರಿಕೆ ಸಂದೇಶ ಬರುತ್ತಿದ್ದರಿಂದ ಯುವತಿ ಮಾನಸಿಕ ಕಿರುಕುಳಕ್ಕೆ ಒಳಗಾಗಿ ಆತ್ಮಹತ್ಯೆ ಯತ್ನ ಮಾಡಿದ್ದಾಳೆ ಎನ್ನಲಾಗುತ್ತಿದೆ.
“ಒಬ್ಬ ಮುಸ್ಲಿಮನ ಕೈಯ್ಯಲ್ಲಿ ಅತ್ಯಾಚಾರವಾಗಿ ಸಾಯುವ ಬದಲು ಈಗಲೇ ಸಾಯ್ತೇನೆ. ಪೊಲೀಸರಿಗೆ ದೂರು ಕೊಟ್ಟರೂ ಯಾವುದೇ ಪ್ರಯೋಜನ ಆಗಿಲ್ಲ. ಶಾರೀಕ್ ಹಾಗೂ ನೂರ್ಜಾನ್ ಇಬ್ಬರನ್ನೂ ಬಿಡಬಾರದು" ಎಂದು ಡೆತ್ ನೋಟ್ ನಲ್ಲಿ ಹೆಸರು ಉಲ್ಲೇಖಿಸಿ ಆತ್ಮಹತ್ಯೆ ಯತ್ನಿಸಿದ್ದಾಳೆ ಎಂದು ತಿಳಿದುಬಂದಿದೆ. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Mangalore Surathkal, girl attempts to suicide after threat on facebook messanger. She received a threat stating that she will cut into 24 pieces if she doesn't coperate to love muslim youth.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am