ಬ್ರೇಕಿಂಗ್ ನ್ಯೂಸ್
26-10-24 02:04 pm Mangalore Correspondent ಕರಾವಳಿ
ಮಂಗಳೂರು, ಅ.26 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಸಲಹಾ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರು ಇದ್ದಾರೆ. ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ ಕೂಡ ಒಬ್ಬರು.

ರಕ್ಷಣಾ ಸಚಿವಾಲಯದ ಈ ಸಲಹಾ ಸಮಿತಿಯು ಸರ್ಕಾರದ ರಕ್ಷಣಾ ನೀತಿಗಳು, ವಿವಿಧ ಯೋಜನೆ-ಕಾರ್ಯಕ್ರಮಗಳ ಅನುಷ್ಠಾನ ವಿಧಾನ ಹಾಗೂ ದೇಶದ ರಕ್ಷಣೆಗೆ ಸಂಬಂಧಿಸಿದ ವಿಚಾರಗಳ ಕುರಿತಂತೆ ಆಗಾಗ ಸಭೆ ನಡೆಸಿ ಸೂಕ್ತ ಸಲಹೆ ನೀಡಲಿದೆ. ಒಟ್ಟಾರೆ ನಮ್ಮ ರಾಷ್ಟ್ರದ ಭದ್ರತೆಯನ್ನು ಬಲಪಡಿಸುವ ರಕ್ಷಣಾ ನೀತಿಗಳ ರಚನೆ ಮತ್ತು ಅನುಷ್ಠಾನಕ್ಕೆ ಮಾರ್ಗದರ್ಶನ ಕೊಡಲಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ "ನಮ್ಮ ರಾಷ್ಟ್ರ ಮತ್ತು ರಕ್ಷಣಾ ಕ್ಷೇತ್ರವು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಸ್ವಾವಲಂಬಿಯಾಗುವತ್ತ ದಾಪುಗಾಲು ಹಾಕುತ್ತಿರುವ ಸಮಯದಲ್ಲಿ ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯನಾಗಿ ನೇಮಕಗೊಂಡಿರುವುದು ನನಗೆ ಗೌರವದ ವಿಚಾರವಾಗಿದೆ. ಒಬ್ಬ ಯೋಧನಾಗಿ, ಸಂಸತ್ತಿನ ಸದಸ್ಯನಾಗಿ ದೇಶದ ರಕ್ಷಣಾ ಕ್ಷೇತ್ರಕ್ಕೆ ಸೇವೆ ಸಲ್ಲಿಸಲು ಈ ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಸುಯೋಗ" ಎಂದು ಹೇಳಿದ್ದಾರೆ.
Mangalore MP Brijesh Chowta appointed as member of the Consultative Committee for the Ministry of Defence.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm