ಬ್ರೇಕಿಂಗ್ ನ್ಯೂಸ್
26-10-24 10:54 pm Mangalore Correspondent ಕರಾವಳಿ
ಉಳ್ಳಾಲ, ಅ.26: ಆವರಣ ಗೋಡೆಯಿಲ್ಲದೆ ಪಾಳು ಬಿದ್ದಿರುವ ಸರಕಾರಿ ಬಾವಿಯೊಂದಕ್ಕೆ ಬೀಡಾಡಿ ಹೋರಿಯೊಂದು ಬಿದ್ದು ನೀರಲ್ಲಿ ಒದ್ದಾಡಿದ್ದು, ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಒಂದು ಗಂಟೆ ಕಾರ್ಯಾಚರಣೆ ನಡೆಸಿ ಹೋರಿಯನ್ನ ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಲ್ಲ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.
ಪಿಲಾರು ಪಲ್ಲದಲ್ಲಿರುವ ಸರಕಾರಿ ತೆರೆದ ಬಾವಿಯು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಗಾಗಿ ಪಾಳು ಬಿದ್ದಿದೆ. ಶನಿವಾರ ಸಂಜೆ ಬಾವಿಯ ಬಳಿಯಲ್ಲಿ ಬೀಡಾಡಿ ಹೋರಿಗಳೆರಡು ಗುದ್ದಾಡಿಕೊಂಡಿದ್ದು ಪರಿಣಾಮ ಒಂದು ಹೋರಿ ಬಾವಿಯೊಳಗೆ ಬಿದ್ದಿದೆ.




ಸ್ಥಳೀಯ ಸಮಾಜ ಸೇವಕರಾದ ಉದಯಗಟ್ಟಿ ಪಿಲಾರು ಅವರು ಬಾವಿಯ ನೀರಲ್ಲಿ ಬಿದ್ದು ಹೋರಿ ಒದ್ದಾಡುತ್ತಿದ್ದುದನ್ನ ಕಂಡು ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಒಂದು ಗಂಟೆ ಕಾರ್ಯಾಚರಣೆ ನಡೆಸಿ ಹೋರಿಯನ್ನ ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ತೆರೆದ ಪಾಳುಬಿದ್ದ ಬಾವಿಯನ್ನ ನಿರ್ಲಕ್ಷಿಸಿ ಜೀವ ಬಲಿಗಾಗಿ ಕಾಯುತ್ತಿರುವ ಪುರಸಭಾ ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬಾವಿಯನ್ನ ಕಡೆಗಣಿಸಿರುವ ಪುರಸಭೆ ಅಧಿಕಾರಿಗಳು
ಪಿಲಾರು ಪಲ್ಲದಲ್ಲಿನ ಪ್ರಾಚೀನ ಬಾವಿಯಲ್ಲಿ ಯಥೇಚ್ಛ ನೀರಿದ್ದರೂ ಸೋಮೇಶ್ವರ ಪುರಸಭಾ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಈ ಬಾವಿ ಕಳೆದ ಅನೇಕ ವರ್ಷಗಳಿಂದ ಪಾಳು ಬಿದ್ದು ಗಿಡ ಗಂಟಿಗಳಿಂದ ಆವೃತವಾಗಿದೆ. ಕಳೆದ ತಿಂಗಳಲ್ಲಿ ನಡೆದಿದ್ದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಸ್ಥಳೀಯ ಪುರಸಭಾ ಸದಸ್ಯರಾದ ಮನೋಜ್ ಕಟ್ಟೆಮನೆ ಅವರು ಪಲ್ಲದ ಬಾವಿಯ ಅಭಿವೃದ್ಧಿ ಕಾಮಗಾರಿಯನ್ನ ಶೀಘ್ರವೇ ನಡೆಸುವಂತೆ ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿಯವರಲ್ಲಿ ಆಗ್ರಹಿಸಿದ್ದರು. ಅಧಿಕಾರಿಗಳು ಇನ್ನೂ ಅಭಿವೃದ್ಧಿ ಕಾರ್ಯವನ್ನು ಮಾಡದೆ, ತೆರೆದ ಬಾವಿಗೊಂದು ರಕ್ಷಣೆಗಾಗಿ ಕನಿಷ್ಟ ಆವರಣ ಗೋಡೆಯನ್ನೂ ನಿರ್ಮಿಸಿಲ್ಲ.
Mangalore Pillar cow falls into well, residents slam officials over negligence. Later cow was rescued by the public with the help of fire service personals.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm