ಬ್ರೇಕಿಂಗ್ ನ್ಯೂಸ್
27-10-24 10:37 pm Udupi Correspondent ಕರಾವಳಿ
ಉಡುಪಿ, ಅ.27: ಜಾತಿ ಗಣತಿ ವಿಚಾರದಲ್ಲಿ ಪುಡಿ ರಾಜಕಾರಣಿಯಾಗಿ ಮಾತಾಡ್ತಿದ್ದಾರೆ, ಕಾವಿ ಬಟ್ಟೆ ತೊಟ್ಟಿದನ್ನು ಕಳಚಲಿ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಅವರಿಗೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.
ಕಾರ್ಯಕ್ರಮ ಒಂದರಲ್ಲಿ ಮಾತನಾಡುತ್ತಿದ್ದಾಗ ಈ ಮಾತು ಉಲ್ಲೇಖಿಸಿದ ಸ್ವಾಮೀಜಿ, ಜಾತ್ಯತೀತ ರಾಷ್ಟ್ರದಲ್ಲಿ ಜಾತಿ ಲೆಕ್ಕ ಯಾಕೆ ಬೇಕಾಗುತ್ತದೆ. ಒಂದೆಡೆ ಜಾತ್ಯತೀತರು ಎಂದು ಹೇಳುವುದು, ಇನ್ನೊಂದೆಡೆ ಅದನ್ನೇ ಎಲ್ಲ ವಲಯದಲ್ಲೂ ಪೋಷಿಸುತ್ತಿದ್ದಾರೆ. ಇದರ ಬಗ್ಗೆ ಲೋಕದ ವ್ಯವಸ್ಥೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದಾಗ, ಜಾತ್ಯತೀತ ವ್ಯವಸ್ಥೆಯಲ್ಲಿ ಜಾತಿ ಲೆಕ್ಕ ಯಾಕೆಂದು ಕೇಳಿದ್ದೇನೆ. ಇದರ ಹಿಂದಿನ ಲೆಕ್ಕ ಅರ್ಥವಾಗಿಲ್ಲ ಎಂದೂ ಹೇಳಿದ್ದೆ. ಹೀಗೆ ಹೇಳಿರುವುದು ತಪ್ಪಂತೆ, ಪುಡಿ ರಾಜಕಾರಣ ಮಾಡುತ್ತಿದ್ದೇನೆ ಎನ್ನುತ್ತಿದ್ದಾರೆ.
ಹಾಗಾದರೆ, ಯಾವುದೇ ವಿಷಯದ ಬಗ್ಗೆ ಮಾತನಾಡಲು ರಾಜಕಾರಣಿಯೇ ಆಗಬೇಕೇ.. ಇದು ಪ್ರಜಾಪ್ರಭುತ್ವ ರಾಷ್ಟ್ರ ಹೌದೋ, ಅಲ್ಲವೋ ಹೇಳಿ. ಹೌದು ಎಂದಾದರೆ ದೇಶದ ಸಾಮಾನ್ಯ ಪ್ರಜೆಗೂ ತನ್ನ ಅಭಿಪ್ರಾಯ ಹೇಳುವ ಹಕ್ಕು ಇದೆ. ಕಾವಿ ತೆಗೆದಿಟ್ಟು ರಾಜಕಾರಣಕ್ಕೆ ಬರಲಿ, ಉತ್ತರ ಕೊಡುತ್ತೇನೆ ಎಂದರೆ, ಏನರ್ಥ. ಸಮಾಜದಲ್ಲಿ ರಾಜಕಾರಣಿಗಳಿಗೆ ಮಾತ್ರ ಮಾತನಾಡುವ ಹಕ್ಕು ಇರುವುದು. ಪ್ರಜೆಗಳಿಗೆ ಮಾತನಾಡಲು ಅವಕಾಶ ಇಲ್ಲವೆಂದು ಹೇಳಿಬಿಡಲಿ. ಪೀಠಾಧಿಪತಿಗೆ ಅಲ್ಲ, ಸಾಮಾನ್ಯ ನಾಗರಿಕನಿಗೂ ಮಾತನಾಡುವ ಹಕ್ಕು ಇದೆ. ದೇವರೇ ಅವರಿಗೂ ಸದ್ಬುದ್ಧಿ ಕೊಡಲಿ ಎಂದು ಹೇಳುತ್ತೇನೆ ಎಂಬುದಾಗಿ ವಿಶ್ವಪ್ರಸನ್ನ ತೀರ್ಥ ಹೇಳಿದ್ದಾರೆ.
ವಾರದ ಹಿಂದೆ ಜಾತಿ ಗಣತಿ ವಿಚಾರದಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಸ್ವಾಮೀಜಿ ಜಾತಿ ಗಣತಿ ಯಾಕೆ ಬೇಕೆಂದು ಪ್ರಶ್ನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ಮುಖಂಡ ಹರಿಪ್ರಸಾದ್, ಸ್ವಾಮೀಜಿ ತಮ್ಮ ಮಠದಲ್ಲೇ ಪಂಕ್ತಿ ಭೇದ ಮಾಡುವುದು, ಮಡೆಸ್ನಾನ ಮಾಡಿಸುವ ವಿಚಾರವನ್ನು ನೋಡಿಕೊಳ್ಳಲಿ. ಆಬಳಿಕ ಜಾತಿ ಗಣತಿ ಬಗ್ಗೆ ಹೇಳಲಿ. ಬಹಳಷ್ಟು ನಂಬಿಕೆ ಇಟ್ಟಿರುವ ಸ್ವಾಮೀಜಿ ಸ್ಥಾನದಲ್ಲಿರುವ ವ್ಯಕ್ತಿ ಪುಡಿ ರಾಜಕಾರಣಿ ರೀತಿ ಮಾತನಾಡಬಾರದು ಎಂದು ಕಿಡಿಕಾರಿದ್ದರು.
Expressing his dismay over recent comments made by a political leader regarding his views on the caste census, Sri Vishwaprasanna Teertha Swamiji of Pejawar Mutt questioned whether it is wrong to express one’s opinion in a democracy.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm