ಬ್ರೇಕಿಂಗ್ ನ್ಯೂಸ್
27-10-24 10:37 pm Udupi Correspondent ಕರಾವಳಿ
ಉಡುಪಿ, ಅ.27: ಜಾತಿ ಗಣತಿ ವಿಚಾರದಲ್ಲಿ ಪುಡಿ ರಾಜಕಾರಣಿಯಾಗಿ ಮಾತಾಡ್ತಿದ್ದಾರೆ, ಕಾವಿ ಬಟ್ಟೆ ತೊಟ್ಟಿದನ್ನು ಕಳಚಲಿ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಅವರಿಗೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.
ಕಾರ್ಯಕ್ರಮ ಒಂದರಲ್ಲಿ ಮಾತನಾಡುತ್ತಿದ್ದಾಗ ಈ ಮಾತು ಉಲ್ಲೇಖಿಸಿದ ಸ್ವಾಮೀಜಿ, ಜಾತ್ಯತೀತ ರಾಷ್ಟ್ರದಲ್ಲಿ ಜಾತಿ ಲೆಕ್ಕ ಯಾಕೆ ಬೇಕಾಗುತ್ತದೆ. ಒಂದೆಡೆ ಜಾತ್ಯತೀತರು ಎಂದು ಹೇಳುವುದು, ಇನ್ನೊಂದೆಡೆ ಅದನ್ನೇ ಎಲ್ಲ ವಲಯದಲ್ಲೂ ಪೋಷಿಸುತ್ತಿದ್ದಾರೆ. ಇದರ ಬಗ್ಗೆ ಲೋಕದ ವ್ಯವಸ್ಥೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದಾಗ, ಜಾತ್ಯತೀತ ವ್ಯವಸ್ಥೆಯಲ್ಲಿ ಜಾತಿ ಲೆಕ್ಕ ಯಾಕೆಂದು ಕೇಳಿದ್ದೇನೆ. ಇದರ ಹಿಂದಿನ ಲೆಕ್ಕ ಅರ್ಥವಾಗಿಲ್ಲ ಎಂದೂ ಹೇಳಿದ್ದೆ. ಹೀಗೆ ಹೇಳಿರುವುದು ತಪ್ಪಂತೆ, ಪುಡಿ ರಾಜಕಾರಣ ಮಾಡುತ್ತಿದ್ದೇನೆ ಎನ್ನುತ್ತಿದ್ದಾರೆ.
ಹಾಗಾದರೆ, ಯಾವುದೇ ವಿಷಯದ ಬಗ್ಗೆ ಮಾತನಾಡಲು ರಾಜಕಾರಣಿಯೇ ಆಗಬೇಕೇ.. ಇದು ಪ್ರಜಾಪ್ರಭುತ್ವ ರಾಷ್ಟ್ರ ಹೌದೋ, ಅಲ್ಲವೋ ಹೇಳಿ. ಹೌದು ಎಂದಾದರೆ ದೇಶದ ಸಾಮಾನ್ಯ ಪ್ರಜೆಗೂ ತನ್ನ ಅಭಿಪ್ರಾಯ ಹೇಳುವ ಹಕ್ಕು ಇದೆ. ಕಾವಿ ತೆಗೆದಿಟ್ಟು ರಾಜಕಾರಣಕ್ಕೆ ಬರಲಿ, ಉತ್ತರ ಕೊಡುತ್ತೇನೆ ಎಂದರೆ, ಏನರ್ಥ. ಸಮಾಜದಲ್ಲಿ ರಾಜಕಾರಣಿಗಳಿಗೆ ಮಾತ್ರ ಮಾತನಾಡುವ ಹಕ್ಕು ಇರುವುದು. ಪ್ರಜೆಗಳಿಗೆ ಮಾತನಾಡಲು ಅವಕಾಶ ಇಲ್ಲವೆಂದು ಹೇಳಿಬಿಡಲಿ. ಪೀಠಾಧಿಪತಿಗೆ ಅಲ್ಲ, ಸಾಮಾನ್ಯ ನಾಗರಿಕನಿಗೂ ಮಾತನಾಡುವ ಹಕ್ಕು ಇದೆ. ದೇವರೇ ಅವರಿಗೂ ಸದ್ಬುದ್ಧಿ ಕೊಡಲಿ ಎಂದು ಹೇಳುತ್ತೇನೆ ಎಂಬುದಾಗಿ ವಿಶ್ವಪ್ರಸನ್ನ ತೀರ್ಥ ಹೇಳಿದ್ದಾರೆ.
ವಾರದ ಹಿಂದೆ ಜಾತಿ ಗಣತಿ ವಿಚಾರದಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಸ್ವಾಮೀಜಿ ಜಾತಿ ಗಣತಿ ಯಾಕೆ ಬೇಕೆಂದು ಪ್ರಶ್ನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ಮುಖಂಡ ಹರಿಪ್ರಸಾದ್, ಸ್ವಾಮೀಜಿ ತಮ್ಮ ಮಠದಲ್ಲೇ ಪಂಕ್ತಿ ಭೇದ ಮಾಡುವುದು, ಮಡೆಸ್ನಾನ ಮಾಡಿಸುವ ವಿಚಾರವನ್ನು ನೋಡಿಕೊಳ್ಳಲಿ. ಆಬಳಿಕ ಜಾತಿ ಗಣತಿ ಬಗ್ಗೆ ಹೇಳಲಿ. ಬಹಳಷ್ಟು ನಂಬಿಕೆ ಇಟ್ಟಿರುವ ಸ್ವಾಮೀಜಿ ಸ್ಥಾನದಲ್ಲಿರುವ ವ್ಯಕ್ತಿ ಪುಡಿ ರಾಜಕಾರಣಿ ರೀತಿ ಮಾತನಾಡಬಾರದು ಎಂದು ಕಿಡಿಕಾರಿದ್ದರು.
Expressing his dismay over recent comments made by a political leader regarding his views on the caste census, Sri Vishwaprasanna Teertha Swamiji of Pejawar Mutt questioned whether it is wrong to express one’s opinion in a democracy.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm