ಬ್ರೇಕಿಂಗ್ ನ್ಯೂಸ್
28-10-24 01:00 pm Mangalore Correspondent ಕರಾವಳಿ
ಮಂಗಳೂರು, ಅ.28: ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂದು ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವಹೇಳನ ಮಾಡಿರುವುದಕ್ಕೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ತಿರುಗೇಟು ನೀಡಿದ್ದಾರೆ. ಪುಡಿ ರಾಜಕಾರಣಿ ಯಾರು ಎಂದು ಮಲ್ಲೇಶ್ವರಂ ಏರಿಯಾದ ಗಲ್ಲಿ ಗಲ್ಲಿಗೆ ಗೊತ್ತಿದೆ. ಬಿ.ಕೆ ಹರಿಪ್ರಸಾದ್ ಒಂದು ಚುನಾವಣೆ ಗೆಲ್ಲುವ ಯೋಗ್ಯತೆ ಇಲ್ಲದವರು. ಗಾಂಧಿ ಕುಟುಂಬದ ಆತ್ಮೀಯ ಎನ್ನುವುದನ್ನೇ ಬಂಡವಾಳ ಮಾಡಿಕೊಂಡು ಹಿಂಬಾಗಿಲ ರಾಜಕಾರಣ ಮಾಡ್ತಿರುವ ಹರಿಪ್ರಸಾದ್ ಅವರೇ ಪುಡಿ ರಾಜಕಾರಣಿ. ಇವರ ಡಿಎನ್ಎ ಹಸಿರು ಇದ್ಯಾ, ಕೇಸರಿ ಇದ್ಯಾ ಅಂತ ಟೆಸ್ಟ್ ಮಾಡಿಸಬೇಕು ಎಂದು ಟೀಕಿಸಿದ್ದಾರೆ.
ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಿಮ್ಮ ಬಳಿ ರಾಜಕಾರಣದ ಯೋಗ್ಯತೆ ಇಲ್ಲ, ಚುನಾವಣೆಯಲ್ಲಿ ಗೆಲ್ಲುವ ಅರ್ಹತೆ ಇಲ್ಲ. ಕೇಸರಿ, ಕಾವಿಯ ಬಗ್ಗೆ ಹರಿಪ್ರಸಾದ್ ಗೆ ಯಾಕೆ ಗೌರವ ಇಲ್ಲ ಅಂದ್ರೆ ಅವರ ಡಿಎನ್ ಎ ಯಲ್ಲಿ ಕೇಸರಿ ಇದ್ಯಾ, ಹಸಿರು ಇದ್ಯಾ ಅಥವಾ ಬಿಳಿ ಇದೆಯಾ ಎಂದು ನೋಡಬೇಕು. ಹಿಂದುಗಳು ರಾಮ, ಕೃಷ್ಣರ ಡಿಎನ್ಎ ಹೊಂದಿದ್ದಾರೆ. ಇವರಿಗೆ ಹಿಂದುಗಳ ಬಗ್ಗೆ, ಸನಾತನ ಧರ್ಮದ ಬಗ್ಗೆ ನಂಬಿಕೆ ಇಲ್ಲ.
ಸನಾತನ ಧರ್ಮದಲ್ಲಿ ಗುರು ಪರಂಪರೆಗೆ, ಗುರು ಮಠಕ್ಕೆ ವಿಶೇಷ ಗೌರವ ಇದೆ. ಹಿಂದುಗಳು ಗುರುಗಳೆಂದು ವಿಶೇಷ ಭಾವ ತೋರುವ ಪೇಜಾವರ ಶ್ರೀಗಳನ್ನ ನಿಂದಿಸಿ ಹಿಂದೂಗಳ ಭಾವನೆಗೆ ಘಾಸಿ ಮಾಡಿದ್ದಾರೆ. ಬಿ.ಕೆ ಹರಿಪ್ರಸಾದ್ ಅವರಿಗೆ ತಾಕತ್ ಇದ್ರೆ ಮುಸಲ್ಮಾನ ಧರ್ಮ ಗುರುಗಳು, ಕ್ರೈಸ್ತ ಪಾದ್ರಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಾರೆಯೇ? ಎಂದು ಹರೀಶ್ ಪೂಂಜ ಪ್ರಶ್ನಿಸಿದರು.
ಹಿಂದೊಮ್ಮೆ ಅವರೇ ಹೇಳಿದ್ರು, ಹಿಂದೂ ಮತ್ತು ಮುಸಲ್ಮಾನರ ಡಿಎನ್ಎ ಒಂದೇ ಎಂದು. ಇದನ್ನ ನಾವು ಒಪ್ಪೋದಿಲ್ಲ, ಹಿಂದೂಗಳದ್ದು ರಾಮನ ಹಾಗೂ ಕೃಷ್ಣನ ಡಿಎನ್ಎ. ನಿಮ್ಮ ಡಿಎನ್ಎ ಯಾವುದು ಎಂದು ಟೆಸ್ಟ್ ಮಾಡಿಕೊಳ್ಳಿ. ಹಿಂದೂ ಡಿಎನ್ಎ ಆಗಿರ್ತಿದ್ರೆ ಹಿಂದೂ ಸ್ವಾಮೀಜಿಗಳ ಬಗ್ಗೆ ಈ ರೀತಿಯ ಹೇಳಿಕೆ ನೀಡುತ್ತಿರಲಿಲ್ಲ. ಜಾತಿ ಗಣತಿ ಬಗ್ಗೆ ಸ್ವಾಮೀಜಿಗಳ ಹೇಳಿಕೆ ಅವರ ವೈಯುಕ್ತಿಕ ಅಭಿಪ್ರಾಯ. ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯ ಹೇಳುವ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಸ್ವಾಮೀಜಿ ಎಲ್ಲ ಜಾತಿಗಳನ್ನ ಮೀರಿ ಹಿಂದೂ ಸಮಾಜಕ್ಕೆ ಮಾರ್ಗದರ್ಶನ ನೀಡುವಂಥವರು ಎಂದಿದ್ದಾರೆ ಹರೀಶ್ ಪೂಂಜ.
Belthangady MLA Harish poonja slams B K Harishprasad in Mangalore for remarks on Udupi seer. Harishprasad can be know as what type of politician if people enter in Malleshwaram he added.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 12:42 pm
HK News Staffer
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm