ಬ್ರೇಕಿಂಗ್ ನ್ಯೂಸ್
30-10-24 04:28 pm Mangalore Correspondent ಕರಾವಳಿ
ಮಂಗಳೂರು, ಅ.30: ಮಂಗಳೂರು ಹೊರವಲಯದ ಪಿಲಿಕುಳ ನಿಸರ್ಗಧಾಮದ ಗೇಟ್ ಬಳಿಯಲ್ಲಿ ಇಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ಹತ್ತಿಕೊಂಡಿದ್ದು, ಜನರು ನೋಡ ನೋಡುತ್ತಲೇ ಎರಡು ವಾಹನಗಳು ಸುಟ್ಟು ಬೂದಿಯಾಗಿವೆ.
ಬುಧವಾರ ಮುಂಜಾನೆ ಟಿಕೆಟ್ ಕೌಂಟರ್ ಬಳಿಯ ವರ್ಕ್ ಶಾಪ್ ನಲ್ಲಿ ಚಾರ್ಜ್ ಹಾಕಿದ್ದ ಒಂದು ಇಲೆಕ್ಟ್ರಿಕ್ ವಾಹನದಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ. ಇದರ ಬೆಂಕಿ ಪಕ್ಕದಲ್ಲಿದ್ದ ಮತ್ತೊಂದು ವಾಹನಕ್ಕೂ ವ್ಯಾಪಿಸಿದ್ದು ಅದನ್ನೂ ಸುಟ್ಟು ಹಾಕಿದೆ. ನಿಸರ್ಗಧಾಮದ ಒಳಗೆ ಸುತ್ತಾಡಲು 15ರಷ್ಟು ಇಲೆಕ್ಟ್ರಿಕ್ ಆಟೋ ಮಾದರಿಯ ವಾಹನಗಳನ್ನು ವ್ಯವಸ್ಥೆ ಮಾಡಲಾಗಿದ್ದು ಅವುಗಳನ್ನು ರಾತ್ರಿ ವೇಳೆ ಚಾರ್ಜ್ ಹಾಕಿಡಲಾಗಿತ್ತು. ಬ್ಯಾಟರಿ ಶಾರ್ಟ್ ಆಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ.



ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಇಲೆಕ್ಟ್ರಿಕ್ ವಾಹನಗಳಿದ್ದರೂ ಅದೃಷ್ಟವಶಾತ್ ಅವುಗಳಿಗೆ ಬೆಂಕಿ ಹತ್ತಿಕೊಂಡಿಲ್ಲ. ಎರಡು ವಾಹನಗಳು ಹೊತ್ತಿ ಉರಿಯುತ್ತಿದ್ದರೂ ಅಗ್ನಿಶಾಮಕ ದಳ ಕ್ಲಪ್ತ ಸಮಯಕ್ಕೆ ಸ್ಥಳಕ್ಕೆ ಆಗಮಿಸಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಬಳಿಕ ಪಿಲಿಕುಳ ನಿಸರ್ಗಧಾಮದ ಸಿಬ್ಬಂದಿಗಳೇ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದರು. ಘಟನಾ ಸ್ಥಳಕ್ಕೆ ಕಾವೂರು ಠಾಣೆ, ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Fire at Pilikula Nisargadhama; two electric buggies destroyed. An electric buggy, placed on charge at the Pilikula Nisargadhama workshop, reportedly sparked and ignited a fire early on Wednesday October 30 morning, leading to the destruction of two vehicles.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am