ಬ್ರೇಕಿಂಗ್ ನ್ಯೂಸ್
31-10-24 07:03 pm Mangalore Correspondent ಕರಾವಳಿ
ಮಂಗಳೂರು, ಅ.31: ಕನ್ನಡ ಭಾಷೆಯಲ್ಲಿ ಲಭ್ಯವಾದ ಮೊಟ್ಟಮೊದಲ ಶಿಲಾ ಶಾಸನ ಎನಿಸಿರುವ “ಹಲ್ಮಿಡಿ ಶಾಸನ’ದ ಕಲ್ಲಿನ ಪ್ರತಿಕೃತಿಯನ್ನು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. 'ಕರ್ನಾಟಕ ಸಂಭ್ರಮ-50’ರ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಹಲ್ಮಿಡಿ ಶಾಸನದ ಸವಿನೆನಪನ್ನು ಶಾಶ್ವತವಾಗಿಸುವುದು ಮತ್ತು ರಾಜ್ಯಾದ್ಯಂತ ಪ್ರಚಾರ ಪಡಿಸುವುದು ಯೋಜನೆಯ ಉದ್ದೇಶ.
ಇದಕ್ಕಾಗಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ವತಿಯಿಂದ ಹಲ್ಮಿಡಿ ಶಾಸನದ ಕಲ್ಲಿನ ಪ್ರತಿಕೃತಿ ರಚಿಸಲಾಗಿದೆ. ಎಲ್ಲ ಜಿಲ್ಲೆಗಳ ಜಿಲ್ಲಾಡಳಿತದ ವತಿಯಿಂದ ಶಿಲಾಶಾಸನವನ್ನು ಪ್ರತಿಷ್ಠಾಪಿಸಿ ನ.1ರಂದು ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಂದ ಅನಾವರಣಗೊಳಿಸಲು ಉದ್ದೇಶಿಸಲಾಗಿದೆ. ಎಚ್ಡಿ ಕೋಟೆಯಿಂದ ತರಿಸಿದ ಕಲ್ಲನ್ನು ಬಳಸಿ ಹಲ್ಮಿಡಿ ಶಿಲಾಶಾಸನದ ಪ್ರತಿಕೃತಿಯನ್ನು ಚಿಕ್ಕಮಗಳೂರಿನಲ್ಲಿ ಶಿಲ್ಪಕಾರರು ಸಿದ್ದಪಡಿಸಿದ್ದಾರೆ. ಅಲ್ಲಿಂದ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಈಗಾಗಲೇ ಕಲ್ಲಿನ ಪ್ರತಿಮೆಯನ್ನು ಕಳುಹಿಸಲಾಗಿದೆ. ಪ್ರತಿಷ್ಠಾಪನೆ ನಡೆಸಬೇಕಾದ ಜಿಲ್ಲಾ ಕೇಂದ್ರಗಳಲ್ಲಿ ಕಲ್ಲಿನ ಪ್ರತಿಕೃತಿ ತಂದು ನಿಲ್ಲಿಸಲಾಗಿದೆ.
ಪ್ರತಿಷ್ಠಾಪನೆ ನಡೆಸುವ ಕೆಳಭಾಗದಲ್ಲಿ ಕಾಂಕ್ರಿಟ್ ಫೌಂಡೇಶನ್, ಮಧ್ಯೆ ಗ್ರಾನೈಟ್ ಶಿಲೆ ಬಳಸಲಾಗಿದೆ. ಮಂಗಳೂರಿನ ಪುರಭವನ ಮುಂಭಾಗದ ರಾಜಾಜಿ ಪಾರ್ಕ್ನಲ್ಲಿ ಹಾಗೂ ಉಡುಪಿಯ ಭುಜಂಗ ಪಾರ್ಕ್ನಲ್ಲಿ ಈ ಶಿಲಾಶಾಸನ ಪ್ರತಿಷ್ಠಾಪನೆ ನಡೆಯಲಿದೆ.
ಕನ್ನಡದ ಮೊದಲ ಶಿಲಾ ಶಾಸನ
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲ್ಮಿಡಿಯಲ್ಲಿ 1936ರಲ್ಲಿ ಪತ್ತೆಯಾದ ಶಾಸನವನ್ನು ಕನ್ನಡ ಲಿಪಿಯಲ್ಲಿ ಲಭ್ಯವಾದ ಮೊಟ್ಟಮೊದಲ ಶಾಸನವೆಂದು ಪರಿಗಣಿಸಲಾಗಿದೆ. 16 ಸಾಲುಗಳ ಕನ್ನಡ ಬರಹ ಇದರಲ್ಲಿದ್ದು ಇದು ಕ್ರಿಸ್ತ ಶಕ 450ರ ಸುಮಾರಿನದ್ದು ಎಂದು ಅಂದಾಜಿಸಲಾಗಿದೆ. ಹೀಗಾಗಿ ಈ ಶಿಲಾ ಶಾಸನದ ಮಹತ್ವವನ್ನು ಶಾಶ್ವತವಾಗಿ ಜನರ ನೆನಪಿನಲ್ಲಿ ಉಳಿಯುವಂತೆ ಮಾಡುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಪ್ರತಿಕೃತಿ ರೂಪದಲ್ಲಿ ಇರಿಸಲು ಸರಕಾರ ಉದ್ದೇಶಿಸಿದೆ. ಶಾಸನದ ಪ್ರತಿಕೃತಿ ನಾಲ್ಕೂವರೆ ಅಡಿ ಎತ್ತರ, 2 ಅಡಿ ಅಗಲ, 6 ಇಂಚು ದಪ್ಪ, 450 ರಿಂದ 500 ಕಿಲೋ ತೂಕ ಹೊಂದಿದೆ.
The state government has decided to install a stone replica of the "Halmidi inscription" which is said to be the first stone inscription available in Kannada language in all the district centers across the state.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm