ಬ್ರೇಕಿಂಗ್ ನ್ಯೂಸ್
05-11-24 10:14 pm Mangaluru Correspondent ಕರಾವಳಿ
ಉಳ್ಳಾಲ, ನ.5: ಅಕ್ರಮ ದಂಧೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವವರನ್ನ ಹಲ್ಲೆಗೈದು ಕೊಲೆಗೆ ಯತ್ನಿಸುವುದಾದರೆ ನ್ಯಾಯದ ಪರ ಧ್ವನಿ ಎತ್ತಲು ಸಾಧ್ಯವೇ.. ಸೋಮೇಶ್ವರದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವಿರುದ್ಧ ಪೊಲೀಸರಿಗೆ ಮಾಹಿತಿ ನೀಡಿದ ಕಿಶೋರ್ ಉಚ್ಚಿಲ್ ಅವರ ಮೇಲಿನ ದಾಳಿ ಖಂಡನೀಯ. ಸೋಮೇಶ್ವರ ಕಡಲ ತೀರದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯಿಂದಲೇ ಕಡಲ್ಕೊರೆತ ಉಲ್ಭಣಗೊಳ್ಳುತ್ತಿದೆ. ಅಕ್ರಮ ಮರಳುಗಾರಿಕೆ ವಿರುದ್ಧ ಧ್ವನಿಯೆತ್ತಿ ಹೋರಾಟ ನಡೆಸುವವರ ಮೇಲೆ ಹಲ್ಲೆ ನಡೆಸುವ ಜುಟ್ಟು ಪೂಜಾರಿಯಂತಹ ಪುಡಿ ರೌಡಿಗಳನ್ನ ಪೊಲೀಸ್ ಇಲಾಖೆ ಮಟ್ಟ ಹಾಕಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ದಿನೇಶ್ ಕುಂಪಲ ಆಗ್ರಹಿಸಿದ್ದಾರೆ.
ತೊಕ್ಕೊಟ್ಟಿನ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು. ಸೋಮೇಶ್ವರ ಕಡಲ ತೀರದಲ್ಲಿ ನಡೆಯುತ್ತಿರುವ ಮರಳು ಮಾಫಿಯಾ ವಿರುದ್ಧ ಕಿಶೋರ್ ಎಂ. ಉಚ್ಚಿಲ್ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರ ರಿವೇಂಜ್ ತೆಗೆಯಲು ಮರಳು ದಂಧೆಕೋರ ಸುನಿಲ್ ಪೂಜಾರಿ ಯಾನೆ ಜುಟ್ಟು ಪೂಜಾರಿ ಕಿಶೋರ್ ಅವರಿಗೆ ಕಬ್ಬಿಣದ ಸಲಾಕೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವುದು ಖಂಡನೀಯ. ಅದೃಷ್ಟವಶಾತ್ ಕಿಶೋರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂಬಂಧಪಟ್ಟ ಪೊಲೀಸ್ ಇಲಾಖೆ ಹಲ್ಲೆಗೊಳಗಾದ ಕಿಶೋರ್ ಅವರ ಜೊತೆ ನಿಲ್ಲಬೇಕು. ಸೋಮೇಶ್ವರ ಕಡಲ ತೀರದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಸೋಮೇಶ್ವರ ಕಡಲ ತೀರದಲ್ಲಿ ನಿರಂತರ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯಿಂದ ಪರಿಸರಕ್ಕೆ ಪೆಟ್ಟು ಬಿದ್ದಿದೆ. ನಿತ್ಯವೂ ಮರಳು ಕಳ್ಳತನ ನಡೆಸುವುದರಿಂದ ಕಡಲ್ಕೊರೆತ ತೀವ್ರವಾಗಿ ಅನೇಕ ಮನೆಗಳು ಕೊಚ್ಚಿ ಹೋಗಿವೆ. ಕಡಲ್ಕೊರೆತ ಉಲ್ಭಣಗೊಂಡಾಗ ತೀರ ಪ್ರದೇಶದ ಜನರು ಸುಮ್ನೆ ಬೊಬ್ಬೆ ಹೊಡೆದು ಸರಕಾರ, ಜನಪ್ರತಿನಿಧಿಗಳ ಕಾಲೆಳೆಯುತ್ತಾರೆ. ಆದರೆ ಸಮುದ್ರ ತೀರದಲ್ಲಿ ನಿರಂತರ ಅಕ್ರಮವಾಗಿ ಮರಳನ್ನ ಕಳವುಗೈಯುತ್ತಿರುವ ಜುಟ್ಟು ಪೂಜಾರಿಯಂತವರ ವಿರುದ್ಧ ಯಾರೂ ಧ್ವನಿ ಎತ್ತಿ ಪ್ರತಿಭಟನೆ ನಡೆಸುತ್ತಿಲ್ಲ. ಇನ್ನಾದರೂ ಸೋಮೇಶ್ವರ ಕಡಲ ತೀರದ ಎಲ್ಲಾ ವರ್ಗದ ಜನರು ಒಟ್ಟಾಗಿ ಕಿಶೋರ್ ಪರವಾಗಿ ನಿಂತು ಮರಳು ಮಾಫಿಯಾ ವಿರುದ್ಧ ಪ್ರತಿಭಟನೆ ನಡೆಸಬೇಕಿದೆ. ಕಿಶೋರ್ ಅವರಿಗೆ ಹಲ್ಲೆ ನಡೆಸಿದ ಜುಟ್ಟು ಪೂಜಾರಿ ಓರ್ವ ಪುಡಿ ರೌಡಿ. ಈ ಹಿಂದೆಯೂ ಸೋಮೇಶ್ವರದಲ್ಲಿ ನಡೆಯುತ್ತಿದ್ದ ಮರಳು ಮಾಫಿಯಾದಲ್ಲಿ ಆತ ಕೈ ಜೋಡಿಸಿದ್ದ.
ಬೋವಿ ಸಮಾಜದ ಹಿರಿಯ ಮುಖಂಡ ಕಿಶೋರ್ ಅವರು ಸೋಮೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿದ್ದಾರೆ. ಓರ್ವ ಧಾರ್ಮಿಕ ಮುಖಂಡನ ಮೇಲೆ ನಡೆದಿರುವ ಹಲ್ಲೆಯನ್ನ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಆರೋಪಿ ಜುಟ್ಟು ಪೂಜಾರಿ ವಿರುದ್ಧ ಕಠಿಣ ಕ್ರಮ ಜರಗಿಸಬೇಕೆಂದು ದಿನೇಶ್ ಕುಂಪಲ ಪೊಲೀಸ್ ಇಲಾಖೆಗೆ ಆಗ್ರಹಿಸಿದ್ದಾರೆ.
ಸೋಮೇಶ್ವರ ಸೋಮನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದೀಪಕ್ ಪಿಲಾರು, ಸುಂದರ ಚೆಂಬುಗುಡ್ಡೆ, ಮೊಗವೀರ ಸಮಾಜದ ಮುಖಂಡರಾದ ಪ್ರೇಮನಾಥ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಕಾರ್ಯದರ್ಶಿ ರಕ್ಷಿತ್ ಪೂಜಾರಿ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
Attempted murder of an informant regarding illegal sand mining in Mangalore: Congress spokesperson Dinesh Kumpla demands action against the rowdies who are living without any fear of the police.An informant on illegal sand mining, and member of the Someshwar temple management committee, was attacked with an iron rod late Monday night near the Someshwar municipality office. The assailant was reportedly an accused in the illegal sand mining case.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm