ಬ್ರೇಕಿಂಗ್ ನ್ಯೂಸ್
05-11-24 10:35 pm Mangaluru Correspondent ಕರಾವಳಿ
ಮಂಗಳೂರು, ನ.5: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ಈ ಬಾರಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡುಕರೆಯಲ್ಲಿ ನಡೆಯಲಿದ್ದು, ಕಂಬಳದ ಪೂರ್ವಭಾವಿ ಸಭೆ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು.
ಸಭೆಯನ್ನು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷರು, ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕಳೆದ 7 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಮಂಗಳೂರು ಕಂಬಳಕ್ಕೆ ಉತ್ತಮ ಜನಮನ್ನಣೆ ಸಿಗುತ್ತಿದ್ದು ಇದು ಕರಾವಳಿಯ ಪ್ರವಾಸೋದ್ಯಮಕ್ಕೆ ಮೈಲುಗಲ್ಲಾಗಲಿದೆ. ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗುವಂತೆ ಹಾಗೂ ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಕಂಬಳ ಈ ಮಣ್ಣಿನ ಅಸ್ಮಿತೆ, ಅದನ್ನು ಮುಂದುವರಿಸಿಕೊಂಡು ಹೋಗಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಮಂಗಳೂರು ಕಂಬಳ ಮೇಲ್ಪಂಕ್ತಿಯಾಗಿದೆ ಎಂದರು. ಜಿಲ್ಲಾ ಕಂಬಳ ಸಮಿತಿಯ ವಿಜಯಕುಮಾರ್ ಕಂಗಿನಮನೆ ಮಾತನಾಡಿ ಮಂಗಳೂರು ನಗರದಲ್ಲಿ ನಡೆಯುವ ಕಂಬಳ ಜನ ಆಕರ್ಷಣೆಯ ಕೇಂದ್ರವಾಗುತ್ತಿದ್ದು, ಕಂಬಳಕ್ಕೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿ ವತಿಯಿಂದ ಸರ್ವ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಪಿ.ಆರ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗರೋಡಿ, ಮಂಗಳೂರು ಕಂಬಳ ಸಮಿತಿ ಉಪಾಧ್ಯಕ್ಷ ಕಿರಣ್ ಕುಮಾರ್, ಅನಿಲ್ ಕುಮಾರ್, ಮಂಗಳೂರು ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಕಂಬಳ ಸಮಿತಿ ಕೋಶಾಧಿಕಾರಿ ಪ್ರೀತಮ್ ರೈ ಉಪಸ್ಥಿತರಿದ್ದರು. ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯ ಸ್ವಾಗತಿಸಿ, ಉಪಾಧ್ಯಕ್ಷ ಪ್ರಕಾಶ್ ಪೂಜಾರಿ ಗರೋಡಿ ವಂದಿಸಿದರು. ಕಾರ್ಯದರ್ಶಿ ಮನ್ಮಥ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
8th Annual Kambala Festival Set to Thrill Gold Finch City in Mangalore on December 28th says MP Brijesh Chowta
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm