ಬ್ರೇಕಿಂಗ್ ನ್ಯೂಸ್
05-11-24 10:35 pm Mangaluru Correspondent ಕರಾವಳಿ
ಮಂಗಳೂರು, ನ.5: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ಈ ಬಾರಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡುಕರೆಯಲ್ಲಿ ನಡೆಯಲಿದ್ದು, ಕಂಬಳದ ಪೂರ್ವಭಾವಿ ಸಭೆ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು.
ಸಭೆಯನ್ನು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷರು, ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕಳೆದ 7 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಮಂಗಳೂರು ಕಂಬಳಕ್ಕೆ ಉತ್ತಮ ಜನಮನ್ನಣೆ ಸಿಗುತ್ತಿದ್ದು ಇದು ಕರಾವಳಿಯ ಪ್ರವಾಸೋದ್ಯಮಕ್ಕೆ ಮೈಲುಗಲ್ಲಾಗಲಿದೆ. ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗುವಂತೆ ಹಾಗೂ ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಕಂಬಳ ಈ ಮಣ್ಣಿನ ಅಸ್ಮಿತೆ, ಅದನ್ನು ಮುಂದುವರಿಸಿಕೊಂಡು ಹೋಗಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಮಂಗಳೂರು ಕಂಬಳ ಮೇಲ್ಪಂಕ್ತಿಯಾಗಿದೆ ಎಂದರು. ಜಿಲ್ಲಾ ಕಂಬಳ ಸಮಿತಿಯ ವಿಜಯಕುಮಾರ್ ಕಂಗಿನಮನೆ ಮಾತನಾಡಿ ಮಂಗಳೂರು ನಗರದಲ್ಲಿ ನಡೆಯುವ ಕಂಬಳ ಜನ ಆಕರ್ಷಣೆಯ ಕೇಂದ್ರವಾಗುತ್ತಿದ್ದು, ಕಂಬಳಕ್ಕೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿ ವತಿಯಿಂದ ಸರ್ವ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಪಿ.ಆರ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗರೋಡಿ, ಮಂಗಳೂರು ಕಂಬಳ ಸಮಿತಿ ಉಪಾಧ್ಯಕ್ಷ ಕಿರಣ್ ಕುಮಾರ್, ಅನಿಲ್ ಕುಮಾರ್, ಮಂಗಳೂರು ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಕಂಬಳ ಸಮಿತಿ ಕೋಶಾಧಿಕಾರಿ ಪ್ರೀತಮ್ ರೈ ಉಪಸ್ಥಿತರಿದ್ದರು. ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯ ಸ್ವಾಗತಿಸಿ, ಉಪಾಧ್ಯಕ್ಷ ಪ್ರಕಾಶ್ ಪೂಜಾರಿ ಗರೋಡಿ ವಂದಿಸಿದರು. ಕಾರ್ಯದರ್ಶಿ ಮನ್ಮಥ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
8th Annual Kambala Festival Set to Thrill Gold Finch City in Mangalore on December 28th says MP Brijesh Chowta
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am