ಬ್ರೇಕಿಂಗ್ ನ್ಯೂಸ್
05-11-24 10:40 pm Mangaluru Correspondent ಕರಾವಳಿ
ಮಂಗಳೂರು, ನ.5: ಹದಗೆಟ್ಟಿರುವ ನಂತೂರು - ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಕುರಿತು ಚರ್ಚಿಸಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ಇದರ ವತಿಯಿಂದ ಕುಳಾಯಿ ಮಹಿಳಾ ಮಂಡಲದ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಯಿತು.
ಕಳೆದ ಐದಾರು ವರ್ಷಗಳಿಂದ ಡಾಮರೀಕರಣ, ನಿರ್ವಹಣೆ ಇಲ್ಲದೆ ಪೂರ್ತಿ ಹದಗೆಟ್ಟಿರುವ ಹೆದ್ದಾರಿಯ ಹಲವು ಸಮಸ್ಯೆಗಳ ಕುರಿತು ಸಭೆಯಲ್ಲಿ ಪಾಲ್ಗೊಂಡ ಹಲವರು ತಮ್ಮ ಅನಿಸಿಕೆ ಹೇಳಿಕೊಂಡರು. ಸಮಸ್ಯೆ ಬಗೆಹರಿಸಲು ಸ್ಥಳೀಯ ಜನಪ್ರತಿನಿಧಿಗಳ ನಿರಾಸಕ್ತಿಯ ಕುರಿತು ಆಕ್ಷೇಪಗಳು ವ್ಯಕ್ತವಾದವು. ಹೆದ್ದಾರಿಯ ದುಸ್ಥಿತಿಯಿಂದ ಅಪಘಾತಗಳು ಸರಣಿಯಾಗಿ ನಡೆಯುತ್ತಿದ್ದು, ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದರೂ ಸಂಬಂಧಪಟ್ಟವರು ಗಮನ ಹರಿಸದಿರುವ ಬಗ್ಗೆ ಆಕ್ರೋಶ ವ್ಯಕ್ತವಾಯಿತು.
ಚರ್ಚೆ, ಅಭಿಪ್ರಾಯಗಳ ತರುವಾಯ ಹೆದ್ದಾರಿಯ ಪ್ರಮುಖ ಸಮಸ್ಯೆಗಳನ್ನು ಗುರುತಿಸಿ ಪ್ರಧಾನವಾಗಿ, ಹದಗೆಟ್ಟಿರುವ ಸುರತ್ಕಲ್ - ನಂತೂರು ಹೆದ್ದಾರಿಯನ್ನು ಪೂರ್ಣ ಪ್ರಮಾಣದಲ್ಲಿ ದುರಸ್ತಿ ಪಡಿಸಬೇಕು, ಕೂಳೂರು ಹೊಸ ಸೇತುವೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಬೇಕು, ನಂತೂರು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಕಾಲಮಿತಿ ನಿಗದಿಪಡಿಸಬೇಕು, ಸರ್ವಿಸ್ ರಸ್ತೆಗಳನ್ನು ಹೆದ್ದಾರಿ ಉದ್ದಕ್ಕೂ ನಿರ್ಮಿಸಬೇಕು, ಬೀದಿ ದೀಪಗಳ ಅಳವಡಿಕೆ, ನಿರ್ವಹಣೆ ಸರಿಪಡಿಸಬೇಕು, ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ನಿರ್ಮಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಹೋರಾಟ ನಡೆಸಲು ತೀರ್ಮಾನಿಸಲಾಯಿತು. ಪ್ರಥಮ ಹಂತದಲ್ಲಿ ನವಂಬರ್ 26ರಂದು ಕೂಳೂರು ಸೇತುವೆ ಬಳಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸಾಮೂಹಿಕ ಧರಣಿ ನಡೆಸಲು ನಿರ್ಧರಿಸಲಾಯಿತು.

ಸಮಾಲೋಚನಾ ಸಭೆಯ ಅಧ್ಯಕ್ಷತೆಯನ್ನು ಹಿರಿಯ ಮುಂದಾಳು ಎಂ.ಜಿ. ಹೆಗ್ಡೆ ವಹಿಸಿದ್ದರು. ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ವಿಷಯ ಮಂಡಿಸಿದರು. ಶ್ರೀನಾಥ್ ಕುಲಾಲ್ ಸ್ವಾಗತಿಸಿದರು. ಮಾಜಿ ಉಪ ಮೇಯರ್ ಗಳಾದ ಮುಹಮ್ಮದ್ ಕುಂಜತ್ತಬೈಲ್, ಪುರುಷೋತ್ತಮ ಚಿತ್ರಾಪುರ, ದಲಿತ ನಾಯಕರಾದ ಎಂ. ದೇವದಾಸ್, ಹೋರಾಟ ಸಮಿತಿ ಸಹ ಸಂಚಾಲಕ ವೈ. ರಾಘವೇಂದ್ರ ರಾವ್, ಬಿ.ಕೆ ಇಮ್ತಿಯಾಜ್, ಮೂಸಬ್ಬ ಪಕ್ಷಿಕೆರೆ, ರಮೇಶ್ ಟಿ.ಎನ್, ಸದಾಶಿವ ಶೆಟ್ಟಿ, ರಾಜೇಶ್ ಕುಳಾಯಿ, ಸುಧಾಕರ ಪಡುಬಿದ್ರೆ, ರಘು ಎಕ್ಕಾರು, ಕೃಷ್ಣ ತಣ್ಣೀರುಬಾವಿ, ಮುಸ್ಲಿಂ ಐಕ್ಯತಾ ವೇದಿಕೆಯ ಆಶ್ರಫ್ ಬದ್ರಿಯ, ಅದ್ದು ಕೃಷ್ಣಾಪುರ, ಮಾಜಿ ಕಾರ್ಪೊರೇಟರ್ ಅಯಾಝ್ ಕೃಷ್ಣಾಪುರ, ಡಿವೈಎಫ್ಐ ನ ಮಕ್ಸೂದ್ ಬಿ ಕೆ, ಪ್ರಮೀಳಾ ಕೆ, ಮಹಿಳಾ ಕಾಂಗ್ರೆಸ್ ನ ಶಶಿಕಲಾ, ಹೋರಾಟ ಸಮಿತಿಯ ಪ್ರಮುಖರಾದ ಆನಂದ ಅಮೀನ್, ಹರೀಶ್ ಪೇಜಾವರ, ಅಬೂಬಕ್ಕರ್ ಬಾವ, ಆಶಾ ಬೋಳೂರು, ಗಂಗಾಧರ ಬಂಜನ್, ಶಮೀರ್ ಕಾಟಿಪಳ್ಳ, ಸಲೀಂ ಶ್ಯಾಡೋ ಸೇರಿದಂತೆ ಹಲವು ಸಂಘಟನೆಗಳ ಪ್ರಮುಖರು ಹಾಜರಿದ್ದರು.
Mass Protest Planned on November 26th Against Poor Road Conditions on Mangalore Nanthoor Surathkal Highway
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm