ಬ್ರೇಕಿಂಗ್ ನ್ಯೂಸ್
05-11-24 10:40 pm Mangaluru Correspondent ಕರಾವಳಿ
ಮಂಗಳೂರು, ನ.5: ಹದಗೆಟ್ಟಿರುವ ನಂತೂರು - ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಕುರಿತು ಚರ್ಚಿಸಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ಇದರ ವತಿಯಿಂದ ಕುಳಾಯಿ ಮಹಿಳಾ ಮಂಡಲದ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಯಿತು.
ಕಳೆದ ಐದಾರು ವರ್ಷಗಳಿಂದ ಡಾಮರೀಕರಣ, ನಿರ್ವಹಣೆ ಇಲ್ಲದೆ ಪೂರ್ತಿ ಹದಗೆಟ್ಟಿರುವ ಹೆದ್ದಾರಿಯ ಹಲವು ಸಮಸ್ಯೆಗಳ ಕುರಿತು ಸಭೆಯಲ್ಲಿ ಪಾಲ್ಗೊಂಡ ಹಲವರು ತಮ್ಮ ಅನಿಸಿಕೆ ಹೇಳಿಕೊಂಡರು. ಸಮಸ್ಯೆ ಬಗೆಹರಿಸಲು ಸ್ಥಳೀಯ ಜನಪ್ರತಿನಿಧಿಗಳ ನಿರಾಸಕ್ತಿಯ ಕುರಿತು ಆಕ್ಷೇಪಗಳು ವ್ಯಕ್ತವಾದವು. ಹೆದ್ದಾರಿಯ ದುಸ್ಥಿತಿಯಿಂದ ಅಪಘಾತಗಳು ಸರಣಿಯಾಗಿ ನಡೆಯುತ್ತಿದ್ದು, ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದರೂ ಸಂಬಂಧಪಟ್ಟವರು ಗಮನ ಹರಿಸದಿರುವ ಬಗ್ಗೆ ಆಕ್ರೋಶ ವ್ಯಕ್ತವಾಯಿತು.
ಚರ್ಚೆ, ಅಭಿಪ್ರಾಯಗಳ ತರುವಾಯ ಹೆದ್ದಾರಿಯ ಪ್ರಮುಖ ಸಮಸ್ಯೆಗಳನ್ನು ಗುರುತಿಸಿ ಪ್ರಧಾನವಾಗಿ, ಹದಗೆಟ್ಟಿರುವ ಸುರತ್ಕಲ್ - ನಂತೂರು ಹೆದ್ದಾರಿಯನ್ನು ಪೂರ್ಣ ಪ್ರಮಾಣದಲ್ಲಿ ದುರಸ್ತಿ ಪಡಿಸಬೇಕು, ಕೂಳೂರು ಹೊಸ ಸೇತುವೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಬೇಕು, ನಂತೂರು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಕಾಲಮಿತಿ ನಿಗದಿಪಡಿಸಬೇಕು, ಸರ್ವಿಸ್ ರಸ್ತೆಗಳನ್ನು ಹೆದ್ದಾರಿ ಉದ್ದಕ್ಕೂ ನಿರ್ಮಿಸಬೇಕು, ಬೀದಿ ದೀಪಗಳ ಅಳವಡಿಕೆ, ನಿರ್ವಹಣೆ ಸರಿಪಡಿಸಬೇಕು, ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ನಿರ್ಮಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಹೋರಾಟ ನಡೆಸಲು ತೀರ್ಮಾನಿಸಲಾಯಿತು. ಪ್ರಥಮ ಹಂತದಲ್ಲಿ ನವಂಬರ್ 26ರಂದು ಕೂಳೂರು ಸೇತುವೆ ಬಳಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸಾಮೂಹಿಕ ಧರಣಿ ನಡೆಸಲು ನಿರ್ಧರಿಸಲಾಯಿತು.

ಸಮಾಲೋಚನಾ ಸಭೆಯ ಅಧ್ಯಕ್ಷತೆಯನ್ನು ಹಿರಿಯ ಮುಂದಾಳು ಎಂ.ಜಿ. ಹೆಗ್ಡೆ ವಹಿಸಿದ್ದರು. ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ವಿಷಯ ಮಂಡಿಸಿದರು. ಶ್ರೀನಾಥ್ ಕುಲಾಲ್ ಸ್ವಾಗತಿಸಿದರು. ಮಾಜಿ ಉಪ ಮೇಯರ್ ಗಳಾದ ಮುಹಮ್ಮದ್ ಕುಂಜತ್ತಬೈಲ್, ಪುರುಷೋತ್ತಮ ಚಿತ್ರಾಪುರ, ದಲಿತ ನಾಯಕರಾದ ಎಂ. ದೇವದಾಸ್, ಹೋರಾಟ ಸಮಿತಿ ಸಹ ಸಂಚಾಲಕ ವೈ. ರಾಘವೇಂದ್ರ ರಾವ್, ಬಿ.ಕೆ ಇಮ್ತಿಯಾಜ್, ಮೂಸಬ್ಬ ಪಕ್ಷಿಕೆರೆ, ರಮೇಶ್ ಟಿ.ಎನ್, ಸದಾಶಿವ ಶೆಟ್ಟಿ, ರಾಜೇಶ್ ಕುಳಾಯಿ, ಸುಧಾಕರ ಪಡುಬಿದ್ರೆ, ರಘು ಎಕ್ಕಾರು, ಕೃಷ್ಣ ತಣ್ಣೀರುಬಾವಿ, ಮುಸ್ಲಿಂ ಐಕ್ಯತಾ ವೇದಿಕೆಯ ಆಶ್ರಫ್ ಬದ್ರಿಯ, ಅದ್ದು ಕೃಷ್ಣಾಪುರ, ಮಾಜಿ ಕಾರ್ಪೊರೇಟರ್ ಅಯಾಝ್ ಕೃಷ್ಣಾಪುರ, ಡಿವೈಎಫ್ಐ ನ ಮಕ್ಸೂದ್ ಬಿ ಕೆ, ಪ್ರಮೀಳಾ ಕೆ, ಮಹಿಳಾ ಕಾಂಗ್ರೆಸ್ ನ ಶಶಿಕಲಾ, ಹೋರಾಟ ಸಮಿತಿಯ ಪ್ರಮುಖರಾದ ಆನಂದ ಅಮೀನ್, ಹರೀಶ್ ಪೇಜಾವರ, ಅಬೂಬಕ್ಕರ್ ಬಾವ, ಆಶಾ ಬೋಳೂರು, ಗಂಗಾಧರ ಬಂಜನ್, ಶಮೀರ್ ಕಾಟಿಪಳ್ಳ, ಸಲೀಂ ಶ್ಯಾಡೋ ಸೇರಿದಂತೆ ಹಲವು ಸಂಘಟನೆಗಳ ಪ್ರಮುಖರು ಹಾಜರಿದ್ದರು.
Mass Protest Planned on November 26th Against Poor Road Conditions on Mangalore Nanthoor Surathkal Highway
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm