ಬ್ರೇಕಿಂಗ್ ನ್ಯೂಸ್
07-11-24 05:31 pm Mangalore Correspondent ಕರಾವಳಿ
ಮಂಗಳೂರು, ನ.7 : ಕೇಂದ್ರ ಸರ್ಕಾರ ಪ್ರಾರಂಭಿಸುತ್ತಿರುವ ಹೊಸ ಪಿಎಂ ವಿದ್ಯಾಲಕ್ಷ್ಮಿ ಯೋಜನೆಯು ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣ ಮುಂದುವರಿಸಲು ಸಾಧ್ಯವಾಗದ ಪ್ರತಿಭಾವಂತ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಬಹುದೊಡ್ಡ ವರದಾನವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪಿಎಂ ವಿದ್ಯಾಲಕ್ಷ್ಮಿ ಎನ್ನುವ ಬಹಳ ಉಪಯುಕ್ತ ಯೋಜನೆಗೆ ಅನುಮೋದನೆ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಸಂಸದರು," ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ ರಾಷ್ಟ್ರೀಯ ಶಿಕ್ಷಣ ನೀತಿಯ ಮತ್ತೊಂದು ಪ್ರಮುಖ ಕೊಡುಗೆಯಾಗಿದೆ. ಈ ಯೋಜನೆಯಡಿ ಉನ್ನತ ಶಿಕ್ಷಣದ ಕನಸು ಕಾಣುತ್ತಿರುವ ಬಡ ಕುಟುಂಬಗಳ ಲಕ್ಷಾಂತರ ವಿದ್ಯಾರ್ಥಿಗಳಿಗೆ ಉನ್ನತ ಹಾಗೂ ಗುಣಮಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುವುದಕ್ಕೆ ಸುಲಭ ಹಾಗೂ ತ್ವರಿತಗತಿಯಲ್ಲಿ ಹಣಕಾಸಿನ ನೆರವು ಲಭ್ಯವಾಗಲಿದೆ. ಆ ಮೂಲಕ ಪಿಎಂ ವಿದ್ಯಾಲಕ್ಷ್ಮಿ ಯೋಜನೆಯು ಪ್ರತಿ ವರ್ಷವೂ ಲಕ್ಷಾಂತರ ಬಡ ಮತ್ತು ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳ ಕನಸು ನನಸಾಗಿಸುವುದರಲ್ಲಿ ಅನುಮಾನವೇ ಇಲ್ಲ" ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಿಎಂ ವಿದ್ಯಾಲಕ್ಷ್ಮಿ ಯೋಜನೆಯಡಿ ವಾರ್ಷಿಕ 8 ಲಕ್ಷ ರೂ.ಗಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿರುವ ಕುಟುಂಬದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ 7.5 ಲಕ್ಷ ರೂ. ವರೆಗೆ ಬ್ಯಾಂಕ್ಗಳಿಂದ ಯಾವುದೇ ಭದ್ರತೆಯಿಲ್ಲದೆ(ಕೊಲಾಟರಲ್ ರಹಿತ) ಸಾಲ ನೀಡಲಾಗುತ್ತದೆ. ಈ ಸಾಲದ ಶೇ.75ರಷ್ಟು ಮೊತ್ತಕ್ಕೆ ಸರ್ಕಾರವೇ ಬ್ಯಾಂಕ್ಗಳಿಗೆ ಖಾತರಿ ನೀಡಲಿದೆ. ಅಲ್ಲದೆ 8 ಲಕ್ಷ ರೂ.ಗಿಂತ ಅಧಿಕ ಆದಾಯವಿರುವ ಕುಟುಂಬದ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ವರೆಗೆ ಸಾಲ ನೀಡಲಿದ್ದು, ಅದಕ್ಕೆ ಶೇ.3ರಷ್ಟು ಬಡ್ಡಿ ವಿನಾಯಿತಿ ದೊರೆಯಲಿದೆ. ಶೀಘ್ರದಲ್ಲೇ ದೇಶದೆಲ್ಲೆಡೆ ಪಿಎಂ ವಿದ್ಯಾಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಬರಲಿದ್ದು, ಅರ್ಹ ವಿದ್ಯಾರ್ಥಿಗಳು ನರೇಂದ್ರ ಮೋದಿ ಸರ್ಕಾರದ ಮತ್ತೊಂದು ಹೊಸ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಕ್ಯಾ. ಚೌಟ ಅವರು ಕರೆ ನೀಡಿದ್ದಾರೆ.
Modi government PM-Vidyalakshmi scheme to fulfill dream of higher education of lakhs of students, Brijesh Chowta in Mangalore.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm