ಬ್ರೇಕಿಂಗ್ ನ್ಯೂಸ್
11-11-24 04:46 pm Mangalore Correspondent ಕರಾವಳಿ
ಮಂಗಳೂರು, ನ.11: ಖಾಸಗಿ ಬಸ್ಸೊಂದು ಕಾಲೇಜು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಆಟೋ ರಿಕ್ಷಾ ಮತ್ತು ಸ್ಕೂಟರಿಗೆ ಡಿಕ್ಕಿಯಾಗಿದ್ದು, ಮಹಿಳೆ ಮತ್ತು ವಿದ್ಯಾರ್ಥಿನಿಯೊಬ್ಬಳು ಗಂಭೀರ ಗಾಯಗೊಂಡ ಘಟನೆ ಮೂಡುಬಿದ್ರೆ ಬಳಿಯ ತೋಡಾರಿನಲ್ಲಿ ನಡೆದಿದೆ. ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ಸಿಗೆ ಕಲ್ಲೆಸೆದು ಗಾಜು ಪುಡಿಗಟ್ಟಿದ್ದಾರೆ.
ತೋಡಾರಿನ ಮೈಟ್ ಕಾಲೇಜಿನ ಮುಂಭಾಗದ ಫ್ಲೈ ಓವರ್ ಬಳಿಯಲ್ಲೇ ಘಟನೆ ನಡೆದಿದೆ. ಬೆಳಗ್ಗೆ ಕಾಲೇಜಿಗೆ ಬರುತ್ತಿದ್ದ ಮೈಟ್ ಕಾಲೇಜಿನ ಬಸ್ಸನ್ನು ಹಿಂದಿಕ್ಕುವ ಯತ್ನದಲ್ಲಿದ್ದ ಮಂಗಳೂರಿನಿಂದ ಮೂಡುಬಿದ್ರೆಗೆ ತೆರಳುತ್ತಿದ್ದ ಖಾಸಗಿ ಬಸ್ ಎದುರಿನಿಂದ ಬರುತ್ತಿದ್ದ ಸ್ಕೂಟರ್ ಮತ್ತು ಆಟೋಗೆ ಡಿಕ್ಕಿಯಾಗಿ ನಿಂತಿದೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ವಿನುತಾ ಮತ್ತು ಆಕೆಯ ಜೊತೆಗಿದ್ದ ತನ್ನ ಗಂಡನ ಅಕ್ಕನ ಮಗಳು, ಕಾಲೇಜು ವಿದ್ಯಾರ್ಥಿನಿ ಸಾನ್ವಿ ಗಂಭೀರ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಘಟನೆ ನಡೆದಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ಸಿಗೆ ಕಲ್ಲು ತೂರಿದ್ದು, ಗಾಜು ಪುಡಿ ಮಾಡಿದ್ದಾರೆ. ವಿನುತಾ ನೀಡಿರುವ ದೂರಿನಂತೆ ಮೂಡುಬಿದ್ರೆ ಠಾಣೆಯಲ್ಲಿ ಬಸ್ಸಿನ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯಿಂದಾಗಿ ತೋಡಾರಿನಲ್ಲಿ ಕೆಲಹೊತ್ತು ಉದ್ವಿಗ್ನ ವಾತಾವರಣ ಉಂಟಾಗಿತ್ತು.
Accident, Students pelt stones on private bus after bus meets with accident with college bus at moodbidri in Mangalore. Mahesh bus which was in the urge of overtaking rammed auto and two wheeler.
15-08-25 03:20 pm
Bangalore Correspondent
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
15-08-25 01:32 pm
HK News Desk
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm