ಬ್ರೇಕಿಂಗ್ ನ್ಯೂಸ್
11-11-24 05:36 pm Mangalore Correspondent ಕರಾವಳಿ
ಮಂಗಳೂರು, ನ.11: ನಗರದ ಲೇಡಿಗೋಶನ್ ಹೆರಿಗೆ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹೊರಕ್ಕೆ ಹಾರಿ ಬಾಣಂತಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ಮುನಿಯಾಲು ನಿವಾಸಿ ರಂಜಿತಾ (28) ಮೃತ ಮಹಿಳೆ.
ಒಂದು ವರ್ಷದ ಹಿಂದೆ ಮುನಿಯಾಲಿನ ಪ್ರಕಾಶ್ ಆಚಾರ್ಯ ಮತ್ತು ರಂಜಿತಾ ಮದುವೆಯಾಗಿತ್ತು. ಆರು ತಿಂಗಳ ಗರ್ಭಿಣಿಯಾಗಿದ್ದ ರಂಜಿತಾಗೆ ಅತಿ ರಕ್ತದೊತ್ತಡ ಇದ್ದುದರಿಂದ ಅ.24ರಂದು ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ಮಹಿಳೆಯ ಆರೋಗ್ಯಕ್ಕೆ ತೊಂದರೆ ಎದುರಾಗಿದ್ದರಿಂದ ಅ.29ರಂದು ಮಗುವನ್ನು ಸಿಸೇರಿಯನ್ ಮೂಲಕ ತೆಗೆಸಲಾಗಿತ್ತು. ನಾಲ್ಕು ದಿನಗಳ ಕಾಲ ಎನ್ಐಸಿಯುನಲ್ಲಿದ್ದ ಮಗು ಬಳಿಕ ಮೃತಪಟ್ಟಿತ್ತು.
ಕೆಲವು ಮಹಿಳೆಯರಿಗೆ ಬಾಣಂತಿ ಸಂದರ್ಭದಲ್ಲಿ ಮಾನಸಿಕ ಖಿನ್ನತೆ ಆವರಿಸುತ್ತದೆ. ಅದೇ ರೀತಿಯ ಖಿನ್ನತೆ ರಂಜಿತಾಗೂ ಇತ್ತು ಎನ್ನಲಾಗುತ್ತಿದೆ. ಮಗು ಮೃತಪಟ್ಟ ವಿಷಯ ತಿಳಿದೋ ಏನೋ ಮಾನಸಿಕವಾಗಿ ಕುಗ್ಗಿದ ರೀತಿ ಇದ್ದರು. ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಕ್ಕೆ ಪ್ರಕ್ರಿಯೆ ನಡೆದಿತ್ತು. ಪತಿ ಪ್ರಕಾಶ್ ಆಚಾರ್ಯ ಕಾರು ತೆಗೆದುಕೊಂಡು ಆಸ್ಪತ್ರೆ ಕಡೆಗೆ ಬರುತ್ತಿದ್ದರೆ, ಮಹಿಳೆಯ ತಮ್ಮ ಮತ್ತು ತಾಯಿ ಆಸ್ಪತ್ರೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ಮಹಿಳೆ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹೊರಕ್ಕೆ ಹಾರಿದ್ದು ದುರಂತ ಸಾವು ತಂದುಕೊಂಡಿದ್ದಾರೆ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A woman who recently gave birth and lost her newborn to illness ended her life by jumping from the fourth floor of Lady Goschen Hospital on Monday, November 11. The deceased has been identified as Ranjita (28), a resident of Karkala.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm