ಬ್ರೇಕಿಂಗ್ ನ್ಯೂಸ್
11-11-24 11:03 pm Udupi Correspondent ಕರಾವಳಿ
ಉಡುಪಿ, ನ.11: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿ ಇಬ್ಬರು ಪೊಲೀಸರನ್ನು ಉಡುಪಿ ಎಸ್ಪಿ ಡಾ.ಅರುಣ್ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.
ಚೇರ್ಕಾಡಿ ಗ್ರಾಮದ ಮಹಿಳೆಗೆ ಶನಿವಾರ ರಾತ್ರಿ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಕೊಲ್ಲಂ ಮೂಲದ ಆರೋಪಿ ಬಿಜು ಮೋಹನ್ (45) ಎಂಬಾತನನ್ನು ಸ್ಥಳೀಯರು ಹಲ್ಲೆಗೈದು ಪೊಲೀಸರ ವಶಕ್ಕೆ ಒಪ್ಪಿಸಿದ್ದರು. ಆತನನ್ನು ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ ಕರೆತಂದು ಪ್ರಕರಣ ದಾಖಲಿಸಿದ್ದರು. ಆದರೆ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಮೆಡಿಕಲ್ ಟೆಸ್ಟ್ ಮಾಡಿಲ್ಲ ಎನ್ನಲಾಗುತ್ತಿದೆ. ಆರೋಪಿ ಬಂಧನ ವೇಳೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪಾಲಿಸಿಲ್ಲವೆಂದು ಬ್ರಹ್ಮಾವರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಮಧು ಬಿ.ಇ. ಮತ್ತು ಪ್ರಭಾರ ಠಾಣಾಧಿಕಾರಿ ಹೆಡ್ ಕಾನ್ಸ್ಟೇಬಲ್ ಸುಜಾತ ಅವರನ್ನು ಅಮಾನತು ಮಾಡಲಾಗಿದೆ.
ಲಾಕಪ್ ಡೆತ್ ಪ್ರಕರಣದ ತನಿಖೆಗಾಗಿ ಬೆಂಗಳೂರಿನ ಸಿಐಡಿ ಪೊಲೀಸ್ ಅಧೀಕ್ಷಕರು ಹಾಗೂ ಅವರ ತಂಡ ಸೋಮವಾರ ಉಡುಪಿಗೆ ಆಗಮಿಸಿದ್ದು, ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಅದೇ ರೀತಿ ಬ್ರಹ್ಮಾವರ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಶವಗಾರದಲ್ಲಿ ಮೃತದೇಹವನ್ನು ಪರಿಶೀಲನೆ ನಡೆಸಿ, ವೈದ್ಯಾಧಿಕಾರಿಗಳ ಜೊತೆ ಮಾತುಕತೆ ನಡೆಸಿದೆ ಎನ್ನಲಾಗಿದೆ. ಬಿಜು ಮೋಹನ್ ಲಾಕಪ್ನಲ್ಲಿ ಮೃತಪಟ್ಟಿರುವ ಮಾಹಿತಿಯನ್ನು ಪೊಲೀಸರು ನ.10ರಂದು ಬೆಳಗ್ಗೆ ಕೊಲ್ಲಂನಲ್ಲಿರುವ ಆತನ ಕುಟುಂಬಸ್ಥರಿಗೆ ನೀಡಿದ್ದರು. ಅದರಂತೆ ಅಲ್ಲಿಂದ ಹೊರಟ ಕುಟುಂಬಸ್ಥರು ಬ್ರಹ್ಮಾವರ ತಲುಪಿ ಶವಾಗಾರಕ್ಕೆ ಆಗಮಿಸಿದ ಕುಟುಂಬಸ್ಥರು ಬಿಜು ಮೋನು ಅವರ ಮೃತ ದೇಹವನ್ನು ಪರಿಶೀಲಿಸಿದ್ದರು. ಬಳಿಕ ಬ್ರಹ್ಮಾವರ ಪೊಲೀಸ್ ಠಾಣೆಗೆ ತೆರಳಿದ ಮೃತ ಬಿಜು ಮೋಹನ್ ಅವರ ಚಿಕ್ಕಪ್ಪನ ಮಗ ಅನೀಶ್ ಡೆನಿಲ್ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Madhu B E, police sub-inspector of Brahmavar police station, and Sujatha, head constable, have been suspended following the lockup death incident that occurred at Brahmavar station in the early hours of November 10.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am