ಬ್ರೇಕಿಂಗ್ ನ್ಯೂಸ್
12-11-24 07:00 pm Mangalore Correspondent ಕರಾವಳಿ
ಮಂಗಳೂರು, ನ.12: ಮೂಡುಶೆಡ್ಡೆ ಗ್ರಾಮ ಪಂಚಾಯತ್ ಉಪ ಚುನಾವಣೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನವೆಂಬರ್ 17 ಮತ್ತು 18ರಂದು ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವ ಮುಂದೂಡಲಾಗಿದೆ.
ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶದಂತೆ, ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಿಸಲಾಗಿದೆ. ಮೂಡುಶೆಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 16ರಿಂದ 26ರ ವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಅದರಂತೆ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನವೆಂಬರ್ 17 ಮತ್ತು 18 ರಂದು ಆಯೋಜಿಸಲು ಉದ್ದೇಶಿಸಲಾಗಿದ್ದ ಪಿಲಿಕುಳ ಕಂಬಳವನ್ನು ಮುಂದೂಡಲಾಗಿದೆ.
ಪಿಲಿಕುಳ ಕಂಬಳ ಆಯೋಜನೆಯ ಮುಂದೂಡಿದ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಕ ಪ್ರದೀಪ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಮಾನ್ಯವಾಗಿ ಧಾರ್ಮಿಕ ಮತ್ತು ಕ್ರೀಡಾ ಚಟುವಟಿಕೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ಆದರೆ ರಾಜಕಾರಣಿಗಳು ಕಂಬಳದಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ಹೀಗಾಗಿ ಜಿಲ್ಲಾಡಳಿತ ಕಂಬಳವನ್ನೇ ಮುಂದೂಡಿದ್ದು ಡಿಸೆಂಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿದೆ.
The Nethravathi–Phalguni Jodukare Kambala scheduled for November 17-18 at Pilikula has been postponed due to to the model code of conduct for the upcoming by-election at the Moodushedde Gram Panchayat.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am