ಬ್ರೇಕಿಂಗ್ ನ್ಯೂಸ್
14-11-24 02:48 pm Udupi Correspondent ಕರಾವಳಿ
ಉಡುಪಿ, ನ.14: ಸಕಲೇಶಪುರ ಸುಬ್ರಹ್ಮಣ್ಯ ಘಾಟಿ ಭಾಗದಲ್ಲಿ ರೈಲಿನ ವೇಗ ಹೆಚ್ಚಿಸುವುದು, ಕ್ರಾಸಿಂಗ್ ನಿಲ್ದಾಣವಾಗಿ ಅರೆಬೆಟ್ಟದಲ್ಲಿ ಅಭಿವೃದ್ಧಿ ಪಡಿಸುವುದು ಸೇರಿದಂತೆ ಹಲವು ಸುಧಾರಣೆ ವಿಷಯದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರೈಲ್ವೇ ಸಚಿವರ ಜತೆ ಮಾತುಕತೆ ನಡೆಸಿದ್ದು ಮುಂದಿನ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಸುದೀರ್ಘ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕರಾವಳಿಯ ರೈಲು ಸೇವೆಗಳು ಮತ್ತು ಹೆದ್ದಾರಿ ಸುಧಾರಣೆಗಳ ಕುರಿತು ಕುಂದಾಪುರ ರೈಲು ಸಮಿತಿ ಸಂಸದರಿಗೆ ಮನವಿ ಕೊಟ್ಟು ಚರ್ಚೆ ಮಾಡಿದೆ. ರೈಲು ಮತ್ತು ಹೆದ್ದಾರಿ ಸುಧಾರಣೆ ಕುರಿತು ಹಲವು ಮಾರ್ಗೋಪಾಯಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿದೆ. ಈ ಸಂದರ್ಭ ಸಂಸದರು ಸಮಿತಿಯ ಬೇಡಿಕೆಗೆ ಪೂರಕವಾಗಿ ಸ್ಪಂದಿಸಿದರು.
ಪಂಚಗಂಗಾ ರೈಲು ಸೇರಿದಂತೆ ಹಲವು ವಿಶೇಷ ರೈಲು ಸೇವೆಗಳು ಪಶ್ಚಿಮ ಘಟ್ಟದ ಘಾಟಿ ಭಾಗದಲ್ಲಿ ನಿಧಾನಗತಿಯ ಕಾರಣದಿಂದ ಬೆಂಗಳೂರು ತಲುಪುವಾಗ ವಿಳಂಬವಾಗುವುದು, ಸರಿಯಾದ ಸಮಯಪಟ್ಟಿ ಸಿಗದೆ ಇರುವುದು, ಹೀಗೆ ಹಲವು ಸಮಸ್ಯೆಗಳಿಗೆ ಸಿಲುಕಿವೆ. ಅದರಲ್ಲೂ ಪಂಚಗಂಗಾ ರೈಲು ಕರಾವಳಿಯ ಜೀವನಾಡಿಯಾಗಿದ್ದು, ಈ ರೈಲು ಇನ್ನೂ ಬೇಗನೆ ಬೆಂಗಳೂರು ತಲುಪಿಸಲು ಬೇಡಿಕೆ ಇದೆ. ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಸಚಿವರ ಜತೆ ಚರ್ಚಿಸಲಾಗಿದೆ ಎಂದು ಸಂಸದರು ತಿಳಿಸಿದರು.
ಬ್ರಹ್ಮಾವರ, ಕುಂದಾಪುರ ಸೇರಿದಂತೆ ಹಲವೆಡೆ ಅಪಘಾತ ವಲಯಗಳು ತುಂಬಿರುವ ರಾಷ್ಟ್ರೀಯ ಹೆದ್ದಾರಿಯ ಸಮಗ್ರ ಸುಧಾರಣೆಗೆ ತಂತ್ರಜ್ಞರ ತಂಡವನ್ನು ಕುಂದಾಪುರ, ಬ್ರಹ್ಮಾವರ, ಉಡುಪಿ ಮಧ್ಯೆ ನೇರ ವೀಕ್ಷಣೆ ಮತ್ತು ಪರಿಹಾರೋಪಾಯಗಳ ಕುರಿತು ಪ್ರಸ್ತಾವ ರಚಿಸುವ ಕುರಿತು ನಿರ್ಧರಿಸಲಾಗಿದ್ದು, ಈ ಬಗ್ಗೆ ಕೆಲವೇ ದಿನಗಳಲ್ಲಿ ದಿಲ್ಲಿಗೆ ತೆರಳಲಿರುವುದಾಗಿ ಸಂಸದರು ತಿಳಿಸಿದ್ದಾರೆ.
Railway issue at Sakaleshpur ghat, Railway committee appeals to kota srinivas poojary in Udupi. discussion with the Minister of Railways regarding many improvements including increasing the speed of the train in the Sakaleshpura Subrahmanya Ghati section, developing Arebetta as a crossing station and said that they will hold a long discussion in the next winter session of Parliament.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm