ಬ್ರೇಕಿಂಗ್ ನ್ಯೂಸ್
14-11-24 02:48 pm Udupi Correspondent ಕರಾವಳಿ
ಉಡುಪಿ, ನ.14: ಸಕಲೇಶಪುರ ಸುಬ್ರಹ್ಮಣ್ಯ ಘಾಟಿ ಭಾಗದಲ್ಲಿ ರೈಲಿನ ವೇಗ ಹೆಚ್ಚಿಸುವುದು, ಕ್ರಾಸಿಂಗ್ ನಿಲ್ದಾಣವಾಗಿ ಅರೆಬೆಟ್ಟದಲ್ಲಿ ಅಭಿವೃದ್ಧಿ ಪಡಿಸುವುದು ಸೇರಿದಂತೆ ಹಲವು ಸುಧಾರಣೆ ವಿಷಯದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರೈಲ್ವೇ ಸಚಿವರ ಜತೆ ಮಾತುಕತೆ ನಡೆಸಿದ್ದು ಮುಂದಿನ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಸುದೀರ್ಘ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕರಾವಳಿಯ ರೈಲು ಸೇವೆಗಳು ಮತ್ತು ಹೆದ್ದಾರಿ ಸುಧಾರಣೆಗಳ ಕುರಿತು ಕುಂದಾಪುರ ರೈಲು ಸಮಿತಿ ಸಂಸದರಿಗೆ ಮನವಿ ಕೊಟ್ಟು ಚರ್ಚೆ ಮಾಡಿದೆ. ರೈಲು ಮತ್ತು ಹೆದ್ದಾರಿ ಸುಧಾರಣೆ ಕುರಿತು ಹಲವು ಮಾರ್ಗೋಪಾಯಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿದೆ. ಈ ಸಂದರ್ಭ ಸಂಸದರು ಸಮಿತಿಯ ಬೇಡಿಕೆಗೆ ಪೂರಕವಾಗಿ ಸ್ಪಂದಿಸಿದರು.
ಪಂಚಗಂಗಾ ರೈಲು ಸೇರಿದಂತೆ ಹಲವು ವಿಶೇಷ ರೈಲು ಸೇವೆಗಳು ಪಶ್ಚಿಮ ಘಟ್ಟದ ಘಾಟಿ ಭಾಗದಲ್ಲಿ ನಿಧಾನಗತಿಯ ಕಾರಣದಿಂದ ಬೆಂಗಳೂರು ತಲುಪುವಾಗ ವಿಳಂಬವಾಗುವುದು, ಸರಿಯಾದ ಸಮಯಪಟ್ಟಿ ಸಿಗದೆ ಇರುವುದು, ಹೀಗೆ ಹಲವು ಸಮಸ್ಯೆಗಳಿಗೆ ಸಿಲುಕಿವೆ. ಅದರಲ್ಲೂ ಪಂಚಗಂಗಾ ರೈಲು ಕರಾವಳಿಯ ಜೀವನಾಡಿಯಾಗಿದ್ದು, ಈ ರೈಲು ಇನ್ನೂ ಬೇಗನೆ ಬೆಂಗಳೂರು ತಲುಪಿಸಲು ಬೇಡಿಕೆ ಇದೆ. ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಸಚಿವರ ಜತೆ ಚರ್ಚಿಸಲಾಗಿದೆ ಎಂದು ಸಂಸದರು ತಿಳಿಸಿದರು.
ಬ್ರಹ್ಮಾವರ, ಕುಂದಾಪುರ ಸೇರಿದಂತೆ ಹಲವೆಡೆ ಅಪಘಾತ ವಲಯಗಳು ತುಂಬಿರುವ ರಾಷ್ಟ್ರೀಯ ಹೆದ್ದಾರಿಯ ಸಮಗ್ರ ಸುಧಾರಣೆಗೆ ತಂತ್ರಜ್ಞರ ತಂಡವನ್ನು ಕುಂದಾಪುರ, ಬ್ರಹ್ಮಾವರ, ಉಡುಪಿ ಮಧ್ಯೆ ನೇರ ವೀಕ್ಷಣೆ ಮತ್ತು ಪರಿಹಾರೋಪಾಯಗಳ ಕುರಿತು ಪ್ರಸ್ತಾವ ರಚಿಸುವ ಕುರಿತು ನಿರ್ಧರಿಸಲಾಗಿದ್ದು, ಈ ಬಗ್ಗೆ ಕೆಲವೇ ದಿನಗಳಲ್ಲಿ ದಿಲ್ಲಿಗೆ ತೆರಳಲಿರುವುದಾಗಿ ಸಂಸದರು ತಿಳಿಸಿದ್ದಾರೆ.
Railway issue at Sakaleshpur ghat, Railway committee appeals to kota srinivas poojary in Udupi. discussion with the Minister of Railways regarding many improvements including increasing the speed of the train in the Sakaleshpura Subrahmanya Ghati section, developing Arebetta as a crossing station and said that they will hold a long discussion in the next winter session of Parliament.
04-01-26 10:27 pm
Bangalore Correspondent
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
04-01-26 06:38 pm
Mangalore Correspondent
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
04-01-26 11:10 pm
Mangalore Correspondent
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm