ಬ್ರೇಕಿಂಗ್ ನ್ಯೂಸ್
16-11-24 03:54 pm Mangalore Correspondent ಕರಾವಳಿ
ಮಂಗಳೂರು, ನ.16: ಆರಗ ಜ್ಞಾನೇಂದ್ರ ನಮ್ಮ ಬಗ್ಗೆ ಅತ್ಯಂತ ಲಘುವಾಗಿ ಮಾತನಾಡಿದ್ದಾರೆ. ಅವರಿಗೆ ಬುದ್ಧಿ ಭ್ರಮಣೆ ಆಗಿದೆ. ನಾವೆಲ್ಲಾ ಹುಚ್ಚಾಸ್ಪತ್ರೆಯಲ್ಲಿ ಇರಬೇಕೆಂದು ಹೇಳಿದ್ದಾರೆ. ಅಂದ್ರೆ ನಮ್ಮನ್ನು ಆರಿಸಿದವರು ಜನರು. ತಮ್ಮ ಮೇಲಿರುವ ಕೋವಿಡ್ ಆರೋಪಗಳಿಗೆ ಅವರಿಗೆ ಉತ್ತರ ನೀಡೋದಕ್ಕೆ ಆಗ್ತಿಲ್ಲ. ಯಾವಾಗ ಉತ್ತರ ಕೊಡೋದಕ್ಕೆ ಆಗಲ್ಲವೋ ಆಗ ಈ ರೀತಿಯ ವ್ಯಾಕರಣ ಹೊರ ಬರುತ್ತೆ. ಆಯೋಗದ ವರದಿಯಲ್ಲಿ ಬಂದಿರುವ ಅಂಶಗಳ ಬಗ್ಗೆ ಉತ್ತರ ನೀಡಲಿ ಎಂದು ಮಾಜಿ ಗೃಹ ಸಚಿವ ಆರ್.ಜ್ಞಾನೇಂದ್ರ ಹೇಳಿಕೆಯ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.
ಹಿಂದಿನ ಆರೋಗ್ಯ ಸಚಿವರ ಬಗ್ಗೆ ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ. ಅವರನ್ನು ಪ್ರಾಷಿಕ್ಯೂಷನ್ ಮಾಡುವ ಬಗ್ಗೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕೆಂದು ಉಲ್ಲೇಖಿಸಲಾಗಿದೆ. ಇಡೀ ಕೋವಿಡ್ ಯೋಜನೆಗಳಲ್ಲಿ ಮೋಸ ಆಗಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಮೀರಲಾಗಿದೆ. ಇವೆಲ್ಲವೂ ವರದಿಯಲ್ಲಿ ಸ್ಪಷ್ಟವಾಗಿದೆ. ಈ ವಿಚಾರವನ್ನು ರಾಷ್ಟ್ರೀಯ ಮಟ್ಟದಲ್ಲಿ ಕೊಂಡೊಯ್ಯುವ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತೆ.

ಕೋವಿಡ್ ಹಗರಣದ ಕುರಿತು ನ್ಯಾ.ಡಿಕುನ್ಹಾ ಪ್ರಥಮ ವರದಿ ನೀಡಿದ್ದಾರೆ. ಎರಡನೇ ಮತ್ತು ಅಂತಿಮ ವರದಿ ನೀಡಬೇಕಾಗಿದೆ. ಪ್ರಥಮ ವರದಿಯಲ್ಲಿ ಕೋವಿಡ್ ಸಂದರ್ಭದ ಅವ್ಯವಹಾರಗಳು ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ. ಇದರಲ್ಲಿ ದಾರಿ ತಪ್ಪಿಸುವ ತಂತ್ರ ಏನಿಲ್ಲ. ನಿಯಮ ಬದ್ದವಾಗಿ ಕಾನೂನು ಪ್ರಕಾರ ತನಿಖೆ ಮುಂದುವರಿಸುತ್ತೇವೆ. ಇದರಲ್ಲಿ ರಾಜಕೀಯ ದುರುದ್ದೇಶ ಏನಿಲ್ಲ ಎಂದರು.

ಜಸ್ಟೀಸ್ ಡಿಕುನ್ಹಾ ಅತ್ಯಂತ ಪ್ರಾಮಾಣಿಕ ನ್ಯಾಯಾಧೀಶರು. ಪ್ರಹ್ಲಾದ್ ಜೋಷಿ ಹೇಳಿಕೆಗೂ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈಗಾಗಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರಿಗೆ ಇದರಿಂದ ಸಮಸ್ಯೆ ಆಗಿದೆ. ಜೋಷಿ ವಿರುದ್ಧ ಪ್ರಕರಣ ದಾಖಲಾದ್ರೆ ಅವರು ಜೈಲು ಸೇರುವ ಸಂದರ್ಭ ಬರಬಹುದು. ಈ ವಿಚಾರದಲ್ಲಿ ನ್ಯಾ.ಡಿಕೂನ್ಹಾ ಏನು ಮಾಡುತ್ತಾರೆಂದು ಗೊತ್ತಿಲ್ಲ. ನಾವು ಈ ಕುರಿತು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ.
ಒಬ್ಬ ಜಡ್ಜ್ ಬಗ್ಗೆ ಆ ರೀತಿ ಮಾತನಾಡುವಂತಿಲ್ಲ. ಈ ವರದಿಯಲ್ಲಿರುವುದು ನಾವು ಹುಟ್ಟು ಹಾಕಿರೋದಲ್ಲ. ನಮ್ಮ ಇಲಾಖೆಯಲ್ಲಿರುವ ಮಾಹಿತಿ ಸಂಗ್ರಹಿಸಿ ತನಿಖೆ ಮಾಡಿ ಅದರ ವರದಿ ನೀಡಿದ್ದಾರೆ. ಇದು ಐಟಿ, ಇ.ಡಿ ತರ ರಾಜಕೀಯ ಪ್ರೇರಿತ ಅಲ್ಲ. ಇ.ಡಿ, ಐ.ಟಿ ಗೆ ಖಾಲಿ ವಿರೋಧ ಪಕ್ಷ ಮಾತ್ರ ಕಾಣುತ್ತೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Araga Jnanendra has spoken about us very lightly. They have gone mad. We all have to be in a mad hospital. It was the people who chose us. They are not able to answer the Covid allegations against them. This kind of grammar comes out when it is not possible to answer. Karnataka Minister Dinesh Gundu Rao on Monday lashed out at former Home Minister R Jnanendra for his remarks that he should reply on the findings of the commission's report.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm