ಬ್ರೇಕಿಂಗ್ ನ್ಯೂಸ್
16-11-24 06:55 pm Mangalore Correspondent ಕರಾವಳಿ
ಮಂಗಳೂರು, ನ.15: ಕೊಡಿಯಾಲ್ ಬೈಲಿನ ಕಂಬಳ ಕ್ರಾಸ್ ನಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಭಾರೀ ಪ್ರಮಾಣದಲ್ಲಿ ದಾಸ್ತಾನು ಮಾಡಿದ್ದ ಆರ್ಮಿ ಮತ್ತು ಗೋವಾ ಮೂಲದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಅಬಕಾರಿ ಇಲಾಖೆ ಉಪ ಅಧೀಕ್ಷಕ ಸಂತೋಷ ಮೋಡಗಿ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಡಿಯಾಲಬೈಲ್ ಗ್ರಾಮದ ಕಂಬಳ ಕ್ರಾಸ್ ಬಳಿಯ ಎಸ್.ಎಸ್ ಕಾಂಪೌಂಡ್ ಕಟ್ಟಡದ ಮೊದಲನೇ ಮಹಡಿಯ ಮನೆಯೊಂದರ ಮೇಲೆ ದಾಳಿ ನಡೆಸಿದ್ದು ಆರ್ಮಿ ಕ್ಯಾಂಟೀನಲ್ಲಿ ಸಿಗುವ 19.5 ಲೀಟರ್ ಮದ್ಯ, ಗೋವಾ ರಾಜ್ಯದ 52.5 ಲೀಟರ್ ಮದ್ಯ, ಕರ್ನಾಟಕ ರಾಜ್ಯದ ಮದ್ಯ 3 ಲೀಟರ್, ತೆರಿಗೆ ರಹಿತ ವಿದೇಶಿ ಮದ್ಯ 3 ಲೀಟರ್ , ಗೋವಾ ರಾಜ್ಯದ ಬಿಯರ್ 21.5 ಲೀಟರ್ , ಕರ್ನಾಟಕ ರಾಜ್ಯದ ಬಿಯರ್ 0.33 ಲೀಟರ್ 7 ಕ್ಯಾನ್ ಮತ್ತು abo-1.300 ಲೀಟರ್, 23 ಕ್ಯಾನ್, 101.30 ಲೀಟರ್ IML+BEER ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ಪ್ರಮುಖ ಆರೊಪಿ ಅಮೀತ್ ಎ.ಪಿ ಎಂಬಾತ ತಲೆಮರೆಸಿಕೊಂಡಿದ್ದಾನೆ. ವಶಪಡಿಸಿದ ಸೊತ್ತಿನ ಒಟ್ಟು ಮೌಲ್ಯ ರೂ.1,64,205/- ಎಂದು ಅಂದಾಜಿಸಲಾಗಿದೆ. ಯಾವುದೇ ದಾಖಲಾತಿಗಳಿಲ್ಲದೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮ ಶೇಖರಿಸಿಟ್ಟಿದ್ದು ಕರ್ನಾಟಕ ಅಬಕಾರಿ ಕಾಯ್ದೆ 1965ರ ನಿಯಮ 14, 15 ರಂತೆ ಕಲಂ 32(1), 38(ಎ) ಮತ್ತು 43(ಎ) ರಂತೆ ಅಪರಾಧವಾಗಿದ್ದು ಪ್ರಕರಣ ದಾಖಲಿಸಲಾಗಿದೆ. ಅಂತರ್ ರಾಜ್ಯ ಮಟ್ಟದ ಜಾಲ ಇದಾಗಿದ್ದು ಇತ್ತೀಚೆಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ಪತ್ತೆಯಾದ ಪ್ರಕರಣಕ್ಕೂ ಈ ಪ್ರಕರಣಕ್ಕೂ ಸಂಬಂಧ ಇರುವುದು ತಿಳಿದುಬಂದಿದ್ದು ಅಬಕಾರಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Mangalore Excise officials seize Goa liquor in Mangalore including army liquor and foreign liquor Kodailbail house at Kambala cross.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm