ಬ್ರೇಕಿಂಗ್ ನ್ಯೂಸ್
16-11-24 06:55 pm Mangalore Correspondent ಕರಾವಳಿ
ಮಂಗಳೂರು, ನ.15: ಕೊಡಿಯಾಲ್ ಬೈಲಿನ ಕಂಬಳ ಕ್ರಾಸ್ ನಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಭಾರೀ ಪ್ರಮಾಣದಲ್ಲಿ ದಾಸ್ತಾನು ಮಾಡಿದ್ದ ಆರ್ಮಿ ಮತ್ತು ಗೋವಾ ಮೂಲದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಅಬಕಾರಿ ಇಲಾಖೆ ಉಪ ಅಧೀಕ್ಷಕ ಸಂತೋಷ ಮೋಡಗಿ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಡಿಯಾಲಬೈಲ್ ಗ್ರಾಮದ ಕಂಬಳ ಕ್ರಾಸ್ ಬಳಿಯ ಎಸ್.ಎಸ್ ಕಾಂಪೌಂಡ್ ಕಟ್ಟಡದ ಮೊದಲನೇ ಮಹಡಿಯ ಮನೆಯೊಂದರ ಮೇಲೆ ದಾಳಿ ನಡೆಸಿದ್ದು ಆರ್ಮಿ ಕ್ಯಾಂಟೀನಲ್ಲಿ ಸಿಗುವ 19.5 ಲೀಟರ್ ಮದ್ಯ, ಗೋವಾ ರಾಜ್ಯದ 52.5 ಲೀಟರ್ ಮದ್ಯ, ಕರ್ನಾಟಕ ರಾಜ್ಯದ ಮದ್ಯ 3 ಲೀಟರ್, ತೆರಿಗೆ ರಹಿತ ವಿದೇಶಿ ಮದ್ಯ 3 ಲೀಟರ್ , ಗೋವಾ ರಾಜ್ಯದ ಬಿಯರ್ 21.5 ಲೀಟರ್ , ಕರ್ನಾಟಕ ರಾಜ್ಯದ ಬಿಯರ್ 0.33 ಲೀಟರ್ 7 ಕ್ಯಾನ್ ಮತ್ತು abo-1.300 ಲೀಟರ್, 23 ಕ್ಯಾನ್, 101.30 ಲೀಟರ್ IML+BEER ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ಪ್ರಮುಖ ಆರೊಪಿ ಅಮೀತ್ ಎ.ಪಿ ಎಂಬಾತ ತಲೆಮರೆಸಿಕೊಂಡಿದ್ದಾನೆ. ವಶಪಡಿಸಿದ ಸೊತ್ತಿನ ಒಟ್ಟು ಮೌಲ್ಯ ರೂ.1,64,205/- ಎಂದು ಅಂದಾಜಿಸಲಾಗಿದೆ. ಯಾವುದೇ ದಾಖಲಾತಿಗಳಿಲ್ಲದೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮ ಶೇಖರಿಸಿಟ್ಟಿದ್ದು ಕರ್ನಾಟಕ ಅಬಕಾರಿ ಕಾಯ್ದೆ 1965ರ ನಿಯಮ 14, 15 ರಂತೆ ಕಲಂ 32(1), 38(ಎ) ಮತ್ತು 43(ಎ) ರಂತೆ ಅಪರಾಧವಾಗಿದ್ದು ಪ್ರಕರಣ ದಾಖಲಿಸಲಾಗಿದೆ. ಅಂತರ್ ರಾಜ್ಯ ಮಟ್ಟದ ಜಾಲ ಇದಾಗಿದ್ದು ಇತ್ತೀಚೆಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ಪತ್ತೆಯಾದ ಪ್ರಕರಣಕ್ಕೂ ಈ ಪ್ರಕರಣಕ್ಕೂ ಸಂಬಂಧ ಇರುವುದು ತಿಳಿದುಬಂದಿದ್ದು ಅಬಕಾರಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Mangalore Excise officials seize Goa liquor in Mangalore including army liquor and foreign liquor Kodailbail house at Kambala cross.
31-07-25 11:20 pm
Bangalore Correspondent
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
31-07-25 10:08 pm
HK News Desk
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
31-07-25 11:16 pm
Mangalore Correspondent
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
Human Skull, Multiple Bones, Dharmasthala, SI...
31-07-25 08:45 pm
31-07-25 06:04 pm
Mangalore Correspondent
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm