ಬ್ರೇಕಿಂಗ್ ನ್ಯೂಸ್
16-11-24 06:55 pm Mangalore Correspondent ಕರಾವಳಿ
ಮಂಗಳೂರು, ನ.15: ಕೊಡಿಯಾಲ್ ಬೈಲಿನ ಕಂಬಳ ಕ್ರಾಸ್ ನಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಭಾರೀ ಪ್ರಮಾಣದಲ್ಲಿ ದಾಸ್ತಾನು ಮಾಡಿದ್ದ ಆರ್ಮಿ ಮತ್ತು ಗೋವಾ ಮೂಲದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಅಬಕಾರಿ ಇಲಾಖೆ ಉಪ ಅಧೀಕ್ಷಕ ಸಂತೋಷ ಮೋಡಗಿ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಡಿಯಾಲಬೈಲ್ ಗ್ರಾಮದ ಕಂಬಳ ಕ್ರಾಸ್ ಬಳಿಯ ಎಸ್.ಎಸ್ ಕಾಂಪೌಂಡ್ ಕಟ್ಟಡದ ಮೊದಲನೇ ಮಹಡಿಯ ಮನೆಯೊಂದರ ಮೇಲೆ ದಾಳಿ ನಡೆಸಿದ್ದು ಆರ್ಮಿ ಕ್ಯಾಂಟೀನಲ್ಲಿ ಸಿಗುವ 19.5 ಲೀಟರ್ ಮದ್ಯ, ಗೋವಾ ರಾಜ್ಯದ 52.5 ಲೀಟರ್ ಮದ್ಯ, ಕರ್ನಾಟಕ ರಾಜ್ಯದ ಮದ್ಯ 3 ಲೀಟರ್, ತೆರಿಗೆ ರಹಿತ ವಿದೇಶಿ ಮದ್ಯ 3 ಲೀಟರ್ , ಗೋವಾ ರಾಜ್ಯದ ಬಿಯರ್ 21.5 ಲೀಟರ್ , ಕರ್ನಾಟಕ ರಾಜ್ಯದ ಬಿಯರ್ 0.33 ಲೀಟರ್ 7 ಕ್ಯಾನ್ ಮತ್ತು abo-1.300 ಲೀಟರ್, 23 ಕ್ಯಾನ್, 101.30 ಲೀಟರ್ IML+BEER ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ಪ್ರಮುಖ ಆರೊಪಿ ಅಮೀತ್ ಎ.ಪಿ ಎಂಬಾತ ತಲೆಮರೆಸಿಕೊಂಡಿದ್ದಾನೆ. ವಶಪಡಿಸಿದ ಸೊತ್ತಿನ ಒಟ್ಟು ಮೌಲ್ಯ ರೂ.1,64,205/- ಎಂದು ಅಂದಾಜಿಸಲಾಗಿದೆ. ಯಾವುದೇ ದಾಖಲಾತಿಗಳಿಲ್ಲದೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮ ಶೇಖರಿಸಿಟ್ಟಿದ್ದು ಕರ್ನಾಟಕ ಅಬಕಾರಿ ಕಾಯ್ದೆ 1965ರ ನಿಯಮ 14, 15 ರಂತೆ ಕಲಂ 32(1), 38(ಎ) ಮತ್ತು 43(ಎ) ರಂತೆ ಅಪರಾಧವಾಗಿದ್ದು ಪ್ರಕರಣ ದಾಖಲಿಸಲಾಗಿದೆ. ಅಂತರ್ ರಾಜ್ಯ ಮಟ್ಟದ ಜಾಲ ಇದಾಗಿದ್ದು ಇತ್ತೀಚೆಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ಪತ್ತೆಯಾದ ಪ್ರಕರಣಕ್ಕೂ ಈ ಪ್ರಕರಣಕ್ಕೂ ಸಂಬಂಧ ಇರುವುದು ತಿಳಿದುಬಂದಿದ್ದು ಅಬಕಾರಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Mangalore Excise officials seize Goa liquor in Mangalore including army liquor and foreign liquor Kodailbail house at Kambala cross.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am