ಬ್ರೇಕಿಂಗ್ ನ್ಯೂಸ್
18-11-24 09:51 pm Mangalore Correspondent ಕರಾವಳಿ
ಉಳ್ಳಾಲ, ನ.18: ದೇವರು ನಮ್ಮ ಕಣ್ಣಿಗೆ ನೇರವಾಗಿ ಕಾಣಲ್ಲ. ಆದರೆ ನಮ್ಮ ಸಂಕಷ್ಟ ಕಾಲದಲ್ಲಿ ಸಹಾಯಕ್ಕೆ ಬರುವವರೇ ನಮಗೆ ದೇವರ ಸ್ವರೂಪಿಗಳಾಗುತ್ತಾರೆ ಎಂದು ಮುಳುಗು ತಜ್ಞ, ಜೀವರಕ್ಷಕ ಈಶ್ವರ್ ಮಲ್ಪೆ ಅಭಿಪ್ರಾಯಪಟ್ಟರು.
ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್ ವತಿಯಿಂದ ಭಾನುವಾರ ತೊಕ್ಕೊಟ್ಟು, ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ ನಡೆದ 200 ಅರ್ಹ ಕುಟುಂಬಗಳಿಗೆ ಆಹಾರ ಸಾಮಗ್ರಿ ಕಿಟ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾಯಂದಿರು ತಮ್ಮ ಮಕ್ಕಳಿಗೆ ಸಣ್ಣ ಪ್ರಾಯದಲ್ಲಿ ಮೊಬೈಲ್ ಕೊಡಬೇಡಿ. ಮಕ್ಕಳು ಮೊಬೈಲ್ ಗೀಳಿಗೆ ದಾಸರಾಗಿ ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಪೋಷಕರು ತಮ್ಮ ಮಕ್ಕಳಲ್ಲಿ ಹೊಸತನ ಬೆಳೆಸಲು ಈಜು ಕಲಿಸಿ. ಈಜು ಆತ್ಮ ರಕ್ಷಣೆಗೂ ಸಹಕಾರಿಯಾಗುವುದಲ್ಲದೆ ಮಕ್ಕಳ ದೈಹಿಕ, ಮಾನಸಿಕ ಕ್ಷಮತೆಗೆ ಅತ್ಯುತ್ತಮವಾದ ವ್ಯಾಯಾಮವಾಗಿದೆ ಎಂದರು.




ಸಮಾಜಕ್ಕೆ ನಾನು ಮಾಡಿದ ಸಣ್ಣ ಸೇವೆಯ ಪುಣ್ಯದ ಫಲವಾಗಿ ನನ್ನ ಮೂರು ವಿಶೇಷ ಚೇತನ ಮಕ್ಕಳಲ್ಲಿ ಇಬ್ಬರು ಗುಣಮುಖರಾಗಿದ್ದಾರೆ. ಕೇರಳದ ದಾನಿಗಳ ಸಹಕಾರದಿಂದ ಇಪ್ಪತ್ತಮೂರು ವರುಷದಿಂದ ಮಲಗಿದ್ದಲ್ಲೇ ಇದ್ದ ಮಗು ವೀಲ್ ಚೆಯರಲ್ಲಿ ಹೋಗುವಂತಾಗಿದೆ. ಏಳು ವರುಷಗಳಿಂದ ನಡೆದಾಡದ ಮತ್ತೊಬ್ಬಳು ಈಗ ನಡೆದಾಡುತ್ತಿದ್ದಾಳೆ ಎಂದು ಈಶ್ವರ್ ಮಲ್ಪೆ ಹೇಳಿದರು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಳ್ಳಾಲ ಮಾರುತಿ ಯುವಕ ಮಂಡಲದ ಗೌರವಾಧ್ಯಕ್ಷ ವರದರಾಜ್ ಬಂಗೇರ ಮಾತನಾಡಿ, ಸಾಯಿ ಪರಿವಾರ್ ಟ್ರಸ್ಟ್ ಅತ್ಯಂತ ಕಡಿಮೆ ಅವಧಿಯಲ್ಲಿ ದೊಡ್ಡ ಸಾಧನೆ ಮಾಡಿದ ಸಂಸ್ಥೆಯಾಗಿದೆ. ಸಂಸ್ಥೆಗೆ ಆದಷ್ಟು ಶೀಘ್ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯೂ ಲಭಿಸಲಿ ಎಂದು ಹಾರೈಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅಧ್ಯಕ್ಷತೆ ವಹಿಸಿದ್ದರು. ಬರ್ಕೆ ಫ್ರೆಂಡ್ಸ್ ಸ್ಥಾಪಕಾಧ್ಯಕ್ಷ ಯಜ್ಞೇಶ್ವರ್ ಶೆಟ್ಟಿ ಬರ್ಕೆ, ಅಸ್ತೃ ಗ್ರೂಪ್ ಸಿಇಒ ಲಾಂಚುಲಾಲ್ ಕೆ.ಎಸ್ ಮೂಕಾಂಬಿಕ ಕನ್ಸ್ಟ್ರಕ್ಷನ್ಸ್ ಮಾಲಕರಾದ ಚಂದ್ರಹಾಸ್ ಪಂಡಿತ್ ಹೌಸ್, ರಂಗಭೂಮಿ ಮತ್ತು ಚಲನಚಿತ್ರ ನಟ ಸ್ವರಾಜ್ ಶೆಟ್ಟಿ, ಅನ್ವಿತ್ ಇಲೆಕ್ಟ್ರಾನಿಕ್ಸ್ ಮಾಲಕರಾದ ಪ್ರಕಾಶ್, ಕದ್ರಿ ಈವೆಂಟ್ಸ್ ಜಗದೀಶ್ ಕದ್ರಿ ವಿಶೇಷ ಅತಿಥಿಗಳಾಗಿದ್ದರು.
Mangalore Eshwar maple encourages parents to send their children to swimming class after Drowning incident at resort.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm