ಬ್ರೇಕಿಂಗ್ ನ್ಯೂಸ್
13-12-20 02:35 pm Mangaluru Correspondent ಕರಾವಳಿ
ಉಳ್ಳಾಲ, ಡಿ.13: ಕುಂಪಲದಲ್ಲಿ ನಡೆಯುತ್ತಿರುವ ತಂಬೂರಿ ತುಳು ಭಜನಾ ಸ್ಪರ್ಧೆಯ ಎರಡನೇ ಸುತ್ತಿನ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗಮಿಸಿದ್ದಾರೆ. ಭಜನಾ ಸ್ಪರ್ಧೆಯಲ್ಲಿ ಭಜಕರೊಂದಿಗೆ ಕುಳಿತ ನಳಿನ್ ಕುಮಾರ್, ಭಜನೆಗೆ ತಾಳ ಹಾಕಿ ಗಮನಸೆಳೆದರು.
ಕುಂಪಲ ಬಾಲಕೃಷ್ಣ ಮಂದಿರದ ನೆರಳಲ್ಲಿ ದ.ಕ. ಜಿಲ್ಲೆಯಲ್ಲೇ ಮೊಟ್ಟ ಮೊದಲ ಬಾರಿಗೆ ನಡೆಯುತ್ತಿರುವ ಜಿಲ್ಲಾ ಮಟ್ಟದ ತಂಬೂರಿ ತುಳು ಭಜನಾ ಸ್ಫರ್ಧೆಯ ಎರಡನೇ ಸುತ್ತನ್ನು ಅವರು ಉದ್ಘಾಟಿಸಿ ಮಾತನಾಡಿದರು. ತುಳು ಭಜನೆ ಕೇಳಲೆಂದೇ ರಾಯಚೂರಿನಿಂದ ಇಲ್ಲಿಯವರೆಗೆ ಬಂದಿದ್ದೇನೆ. ಬಾಲಕೃಷ್ಣ ಮಂದಿರದ ಪ್ರತಿಯೊಂದು ಕಾರ್ಯಕ್ರಮಗಳು ಇತಿಹಾಸ ಸೃಷಿಸಲು ಇಲ್ಲಿನ ಸಂಸ್ಕಾರ, ಬದ್ಧತೆ, ಶಿಸ್ತೇ ಕಾರಣವಾಗಿದೆ. ತಂಬೂರಿ ಎಂಬುದೇ ಭಜನೆಯತ್ತ ಆಕರ್ಷಿತವನ್ನಾಗಿಸುವ ಹೆಸರಾಗಿದೆ. ಭಜನೆಗೆ ಭಾವ, ಸಂಗೀತ, ಲಯಗಳ ಅಗತ್ಯವಿರುವುದಿಲ್ಲ. ಹೃದಯದೊಳಗಿನ ಭಕ್ತಿಯ ಭಾವನೆಗಳೇ ಹೊರಬಂದು ಭಜನೆಯಾಗಬೇಕೆಂದರು.


ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಈ ಭಜನಾ ಸ್ಫರ್ಧೆಯು ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಭಜನಾ ಮಂಡಳಿ ಮಾಡಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಯಲ್ಲಿ ಪ್ರಸ್ತಾಪನೆ ಇದೆ. ತಕ್ಷಣ ಆ ಪ್ರಸ್ತಾಪಕ್ಕೆ ಸ್ವರೂಪ ಕೊಡುವ ಕಾರ್ಯಕ್ಕೆ ಮುಂದಾಗಲು ಈ ಕಾರ್ಯಕ್ರಮ ಪ್ರೇರಣೆ ನೀಡಿದೆ ಎಂದರು.
ಕಳೆದ ವಾರ ನಡೆದ ಪುರುಷರ ಭಜನಾ ಸ್ಪರ್ಧೆಯಲ್ಲಿ ವಿಜೇತರಾದ ತಂಡದವರಿಗೆ ನಳಿನ್ ಕುಮಾರ್ ಕಟೀಲ್ ಪ್ರಶಸ್ತಿ ವಿತರಿಸಿದರು. ಕಾರ್ಯಕ್ರಮದ ಯಶಸ್ಸಿನ ಮುಖ್ಯ ರೂವಾರಿ ಪ್ರವೀಣ್ ಎಸ್. ಕುಂಪಲ ಅವರನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಅಭಿನಂದಿಸಿದರು.
ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, MEIL ಅಧ್ಯಕ್ಷರಾದ ಸಂತೋಷ್ ಕುಮಾರ್ ಬೋಳಿಯಾರ್, ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಮುಖಂಡರಾದ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ವೀಣಾ ಮಂಗಳ, ಚಂದ್ರಹಾಸ್ ಉಳ್ಳಾಲ್, ಉದ್ಯಮಿ ನಿಶಾಂತ್ ಮೊದಲಾದವರು ಇದ್ದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ ಸ್ವಾಗತಿಸಿದರು. ಪ್ರವೀಣ್ ಕುಂಪಲ ನಿರೂಪಿಸಿದರು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 02:22 pm
HK News Staffer
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm