ಬ್ರೇಕಿಂಗ್ ನ್ಯೂಸ್
13-12-20 02:35 pm Mangaluru Correspondent ಕರಾವಳಿ
ಉಳ್ಳಾಲ, ಡಿ.13: ಕುಂಪಲದಲ್ಲಿ ನಡೆಯುತ್ತಿರುವ ತಂಬೂರಿ ತುಳು ಭಜನಾ ಸ್ಪರ್ಧೆಯ ಎರಡನೇ ಸುತ್ತಿನ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗಮಿಸಿದ್ದಾರೆ. ಭಜನಾ ಸ್ಪರ್ಧೆಯಲ್ಲಿ ಭಜಕರೊಂದಿಗೆ ಕುಳಿತ ನಳಿನ್ ಕುಮಾರ್, ಭಜನೆಗೆ ತಾಳ ಹಾಕಿ ಗಮನಸೆಳೆದರು.
ಕುಂಪಲ ಬಾಲಕೃಷ್ಣ ಮಂದಿರದ ನೆರಳಲ್ಲಿ ದ.ಕ. ಜಿಲ್ಲೆಯಲ್ಲೇ ಮೊಟ್ಟ ಮೊದಲ ಬಾರಿಗೆ ನಡೆಯುತ್ತಿರುವ ಜಿಲ್ಲಾ ಮಟ್ಟದ ತಂಬೂರಿ ತುಳು ಭಜನಾ ಸ್ಫರ್ಧೆಯ ಎರಡನೇ ಸುತ್ತನ್ನು ಅವರು ಉದ್ಘಾಟಿಸಿ ಮಾತನಾಡಿದರು. ತುಳು ಭಜನೆ ಕೇಳಲೆಂದೇ ರಾಯಚೂರಿನಿಂದ ಇಲ್ಲಿಯವರೆಗೆ ಬಂದಿದ್ದೇನೆ. ಬಾಲಕೃಷ್ಣ ಮಂದಿರದ ಪ್ರತಿಯೊಂದು ಕಾರ್ಯಕ್ರಮಗಳು ಇತಿಹಾಸ ಸೃಷಿಸಲು ಇಲ್ಲಿನ ಸಂಸ್ಕಾರ, ಬದ್ಧತೆ, ಶಿಸ್ತೇ ಕಾರಣವಾಗಿದೆ. ತಂಬೂರಿ ಎಂಬುದೇ ಭಜನೆಯತ್ತ ಆಕರ್ಷಿತವನ್ನಾಗಿಸುವ ಹೆಸರಾಗಿದೆ. ಭಜನೆಗೆ ಭಾವ, ಸಂಗೀತ, ಲಯಗಳ ಅಗತ್ಯವಿರುವುದಿಲ್ಲ. ಹೃದಯದೊಳಗಿನ ಭಕ್ತಿಯ ಭಾವನೆಗಳೇ ಹೊರಬಂದು ಭಜನೆಯಾಗಬೇಕೆಂದರು.


ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಈ ಭಜನಾ ಸ್ಫರ್ಧೆಯು ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಭಜನಾ ಮಂಡಳಿ ಮಾಡಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಯಲ್ಲಿ ಪ್ರಸ್ತಾಪನೆ ಇದೆ. ತಕ್ಷಣ ಆ ಪ್ರಸ್ತಾಪಕ್ಕೆ ಸ್ವರೂಪ ಕೊಡುವ ಕಾರ್ಯಕ್ಕೆ ಮುಂದಾಗಲು ಈ ಕಾರ್ಯಕ್ರಮ ಪ್ರೇರಣೆ ನೀಡಿದೆ ಎಂದರು.
ಕಳೆದ ವಾರ ನಡೆದ ಪುರುಷರ ಭಜನಾ ಸ್ಪರ್ಧೆಯಲ್ಲಿ ವಿಜೇತರಾದ ತಂಡದವರಿಗೆ ನಳಿನ್ ಕುಮಾರ್ ಕಟೀಲ್ ಪ್ರಶಸ್ತಿ ವಿತರಿಸಿದರು. ಕಾರ್ಯಕ್ರಮದ ಯಶಸ್ಸಿನ ಮುಖ್ಯ ರೂವಾರಿ ಪ್ರವೀಣ್ ಎಸ್. ಕುಂಪಲ ಅವರನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಅಭಿನಂದಿಸಿದರು.
ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, MEIL ಅಧ್ಯಕ್ಷರಾದ ಸಂತೋಷ್ ಕುಮಾರ್ ಬೋಳಿಯಾರ್, ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಮುಖಂಡರಾದ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ವೀಣಾ ಮಂಗಳ, ಚಂದ್ರಹಾಸ್ ಉಳ್ಳಾಲ್, ಉದ್ಯಮಿ ನಿಶಾಂತ್ ಮೊದಲಾದವರು ಇದ್ದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ ಸ್ವಾಗತಿಸಿದರು. ಪ್ರವೀಣ್ ಕುಂಪಲ ನಿರೂಪಿಸಿದರು.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm