ಬ್ರೇಕಿಂಗ್ ನ್ಯೂಸ್
21-11-24 03:50 pm Mangalore Correspondent ಕರಾವಳಿ
ಮಂಗಳೂರು, ನ.21: ಲೋಕಾಯುಕ್ತ ಅಧಿಕಾರಿಗಳು ಮತ್ತೆ ಭ್ರಷ್ಟರ ಬೇಟೆ ಆರಂಭಿಸಿದ್ದು ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಎಂಸಿ ಕೃಷ್ಣವೇಣಿ ಅವರ ಬೆಂಗಳೂರು, ಚಿಕ್ಕಬಳ್ಳಾಪುರದ ಮನೆಗಳು ಮತ್ತು ಮಂಗಳೂರಿನ ಮನೆ, ಕಚೇರಿಗೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಎರಡು ತಿಂಗಳ ಹಿಂದಷ್ಟೇ ವರ್ಗಾವಣೆ ಆಗಿ ಮಂಗಳೂರಿಗೆ ಬಂದಿದ್ದರು. ಇವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗಣಿ ಇಲಾಖೆ ಅಧಿಕಾರಿಯಾಗಿದ್ದರು. ಚಿಕ್ಕಬಳ್ಳಾಪುರದಲ್ಲಿ ಕೃಷ್ಣವೇಣಿ ವಿರುದ್ಧ ದೂರು ದಾಖಲಾದ ಹಿನ್ನೆಲೆ ಈ ದಾಳಿ ನಡೆದಿದೆ. ಮಂಗಳೂರು ಲೋಕಾಯುಕ್ತ ಎಸ್ಪಿ ನಟರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಮಂಗಳೂರಿನ ವೆಲೆನ್ಸಿಯಾದ ಮನೆಗೆ ಹಾಗೂ ಮಲ್ಲಿಕಟ್ಟೆಯಲ್ಲಿರುವ ಗಣಿ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಕೃಷ್ಣವೇಣಿ ಅವರು ವೇಲೆನ್ಸಿಯಾದಲ್ಲಿ ಫ್ರೆಡ್ ರೋಸ್ ಎನ್ಕಲೇವ್ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಮೂರು ವಾಹನಗಳಲ್ಲಿ ಆಗಮಿಸಿದ್ದರು.
ಬೆಂಗಳೂರಿನಲ್ಲಿ ಬಿಬಿಎಂಪಿ ನಗರ ಯೋಜನಾ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಬಕಾರಿ ಇಲಾಖೆ ಎಸ್ಪಿ ಮೋಹನ್ ಮನೆ ಮೇಲೆಯೂ ರೇಡ್ ನಡೆದಿದೆ. ಕಾವೇರಿ ನೀರಾವರಿ ನಿಗಮ ಎಂಡಿ ಮಹೇಶ್, ಸಂಬಂಧಿಕರ ಮನೆ ಮೇಲೆ ದಾಳಿ ಮಾಡಲಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಹೇಶ್ ಮನೆ, ಸಂಬಂಧಿಕರ ಮನೆಗಳಿಗೆ ದಾಳಿ ನಡೆದಿದೆ.
A team of Lokayukta officers from the city and Chikkaballapur raided the residence and office of Krishnaveni, an officer in the mines and geology department, in the early hours of Thursday.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am