ಬ್ರೇಕಿಂಗ್ ನ್ಯೂಸ್
21-11-24 09:22 pm Mangalore Correspondent ಕರಾವಳಿ
ಬೆಳ್ತಂಗಡಿ, ನ.21: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆಯೊಂದು ಬೈಕ್ ಮೇಲೆ ದಾಳಿ ನಡೆಸಿರುವ ಆತಂಕಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರು ಗುರುವಾರ ಬೆಳಗ್ಗೆ ತನ್ನ ಮಕ್ಕಳಾದ ಲಾವ್ಯಾ ಹಾಗೂ ಅದ್ವಿತ್ರನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಕರೆದೊಯ್ಯುತ್ತಿದ್ದರು. ಬೆಳಗ್ಗೆ 8:30ರ ಸುಮಾರಿಗೆ ವಸಂತ ಗೌಡ ಬೈಕಿನಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ರಸ್ತೆಯ ತಿರುವಿನಲ್ಲಿ ರಸ್ತೆಯ ನಡುವೆಯೇ ಒಂಟಿ ಸಲಗ ಕಾಣಿಸಿಕೊಂಡಿದೆ. ಭಯದಿಂದ ಅವರು ತನ್ನ ಬೈಕ್ ಏಕಾಏಕಿ ಬ್ರೇಕ್ ಹಾಕಿ ನಿಲ್ಲಿಸಿದ್ದರಿಂದ ರಸ್ತೆಗೆ ಬಿದ್ದ ವಸಂತ ಗೌಡ ಮತ್ತು ಮಕ್ಕಳಿಬ್ಬರಿಬ್ಬರ ಕೈಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾಡಾನೆ ಹತ್ತಿರ ಬರುತ್ತಿದ್ದಂತೆ ಅವರು ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ.
ಓಡುತ್ತಿದ್ದಂತೆಯೇ ಬೈಕ್ ಕಡೆಗೆ ಆಗಮಿಸಿದ ಒಂಟಿ ಸಲಗ ಬೈಕ್ ಅನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ನಜ್ಜುಗುಜ್ಜುಗೊಳಿಸಿದೆ ಎಂದು ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಕಾಡಾನೆಯ ಉಪಟಳ ಮೀರಿದ್ದು, ಕೂಡಲೇ ಅರಣ್ಯ ಇಲಾಖೆಯವರು ಅವುಗಳನ್ನ ಓಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
Wild elephant attacks two wheeler at Belthangady in Mangalore. Two Children were travelling with their father to school in the bike during which the wild elephant was standing in the middle of the road at Kallaji village.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 03:24 pm
Mangalore Correspondent
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm