ಬ್ರೇಕಿಂಗ್ ನ್ಯೂಸ್
21-11-24 09:57 pm Mangalore Correspondent ಕರಾವಳಿ
ಮಂಗಳೂರು, ನ.21: ನಗರದ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದ ಉಪನ್ಯಾಸಕಿಯಾಗಿದ್ದ ರಚಿತಾ ಕಬ್ರಾಲ್ (43) ಕೆಲವು ಕಾಲದ ಅಸೌಖ್ಯದ ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಲ್ಮಠ ಸಿಎಸ್ಐ ಚರ್ಚಿನಲ್ಲಿ ಫಾದರ್ ಆಗಿದ್ದ ದಿ. ರೆವರೆಂಡ್ ಹನಿಬಾಲ್ ಕಬ್ರಾಲ್ ಅವರ ಪುತ್ರಿಯಾಗಿರುವ ರಚಿತಾ ಕಬ್ರಾಲ್ ಕಂಕನಾಡಿ ರೋಶನಿ ನಿಲಯದಲ್ಲಿ ಉಪನ್ಯಾಸಕಿಯಾಗಿ ವೃತ್ತಿ ಆರಂಭಿಸಿದ್ದರು. ಆನಂತರ, ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿಯೂ ಸೇವೆ ಮಾಡಿದ್ದರು.

ಇತ್ತೀಚಿನ ವರ್ಷಗಳಲ್ಲಿ ಅಲೋಶಿಯಸ್ ಕಾಲೇಜು ಸೇರಿ ಇಂಗ್ಲಿಷ್ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯಕರ ಹವ್ಯಾಸಗಳಿಂದಾಗಿ ದೇಹಕ್ಕೆ ಅನಾರೋಗ್ಯ ಅಂಟಿಕೊಂಡಿದ್ದು, ಇತ್ತೀಚೆಗೆ ತೀವ್ರ ಮಧುಮೇಹದಿಂದಾಗಿ ಕಿಡ್ನಿ ಫೈಲ್ಯೂರ್ ಆಗಿತ್ತು ಎನ್ನಲಾಗಿದೆ. ಇದರಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ರಚಿತಾ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇವರಿಗೆ ಒಬ್ಬಳು ಪುತ್ರಿಯಿದ್ದು, ಪಿಯುಸಿ ಓದುತ್ತಿದ್ದಾರೆ. ರಚಿತಾ ಅವರು ತಂದೆ, ತಾಯಿ ಈ ಹಿಂದೆಯೇ ತೀರಿಕೊಂಡಿದ್ದರು.
ವಾರದ ಹಿಂದಷ್ಟೇ ಅಲೋಶಿಯಸ್ ಕಾಲೇಜಿನಲ್ಲಿ ಯುವ ಉಪನ್ಯಾಸಕಿಯಾಗಿದ್ದ ಗ್ಲೋರಿಯಾ ರೋಡ್ರಿಗಸ್ ಫುಡ್ ಪಾಯ್ಸನ್ ಕಾರಣದಿಂದ ಅನಾರೋಗ್ಯವುಂಟಾಗಿ ಕಾಲೇಜಿನ ಮೆಟ್ಟಿಲಿನಲ್ಲಿ ಕುಸಿದು ಬಿದ್ದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಕೇವಲ 23 ವರ್ಷದಲ್ಲಿ ಉಪನ್ಯಾಸಕಿಯೊಬ್ಬರು ಮೃತಪಟ್ಟಿದ್ದು ಅಲೋಶಿಯಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದಕ್ಕೆ ಶಾಕ್ ನೀಡಿತ್ತು. ಇದೀಗ ಮತ್ತೊಬ್ಬ ಉಪನ್ಯಾಸಕಿ ಅಕಾಲಿಕ ಸಾವು ಕಂಡಿದ್ದಾರೆ.
Mangalore Aloysius College lecturer daughter of Rev Hannibal Cabral Rachitha Cabral passes away due to sickness. Rachitha was the beloved daughter of the Late Rev. Hannibal Cabral and the Late Shailini Cabral from Balmatta. She began her teaching career at Roshni Nilaya, where she served as an English Lecturer.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm